Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತಿನಿಂದ ಮರಳು ಮಾಡಿ ಜನರಿಂದ 50 ಲಕ್ಷ ರೂ. ಪಡೆದು ವಂಚಿಸಿದ್ದ ಆರೋಪಿಯ ಬಂಧನ

ಅಂಧರ, ವೃದ್ಧರ ಮತ್ತು ಅಂಗವಿಕಲರನ್ನು ಪೋಷಿಸುವ ಎನ್​ಜಿಓಗಳಿಗೆ ಭೇಟಿ ನೀಡಿ, ನಿಮಗೆ ಸರ್ಕಾರದಿಂದ ಸಿಎಸ್ಆರ್ ಫಂಡ್ ಕೊಡಿಸುತ್ತೇನೆಂದು ಹಣ ಪಡೆದಿದ್ದನು. ಅಲ್ಲದೆ ಸರ್ಕಾರದಿಂದ ಲ್ಯಾಪ್​ ಟ್ಯಾಪ್​ ಕೊಡಿಸುತ್ತೇನೆ ಎಂದು ಸಾಮಾನ್ಯ ಜನರ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಾತಿನಿಂದ ಮರಳು ಮಾಡಿ ಜನರಿಂದ 50 ಲಕ್ಷ ರೂ. ಪಡೆದು ವಂಚಿಸಿದ್ದ ಆರೋಪಿಯ ಬಂಧನ
ಸಿಸಿಬಿ, ಆರಪಿ ಪ್ರತಾಪ್​ ಸಿಂಹ್​​
Follow us
TV9 Web
| Updated By: ವಿವೇಕ ಬಿರಾದಾರ

Updated on: Dec 12, 2023 | 12:34 PM

ಬೆಂಗಳೂರು, ಡಿಸೆಂಬರ್​ 12: ಜನರಿಂದ 50 ಲಕ್ಷ ಹಣ ಪಡೆದು ವಂಚಿಸಿದ್ದ ಆರೋಪಿಯನ್ನು ಸಿಸಿಬಿ (CCB) ಪೊಲೀಸರು (Police) ಬಂಧಿಸಿದ್ದಾರೆ. ಪ್ರತಾಪ್ ಸಿಂಹ ಬಂಧಿತ ಆರೋಪಿ. ಆರೋಪಿ ಪ್ರತಾಪ್​ ಸಿಂಹ ಅಂಧರ, ವೃದ್ಧರ ಮತ್ತು ಅಂಗವಿಕಲರನ್ನು ಪೋಷಿಸುವ ಎನ್​ಜಿಓಗಳಿಗೆ ಭೇಟಿ ನೀಡಿ, ನಿಮಗೆ ಸರ್ಕಾರದಿಂದ ಸಿಎಸ್ಆರ್ ಫಂಡ್ ಕೊಡಿಸುತ್ತೇನೆಂದು ಹಣ ಪಡೆದಿದ್ದನು. ಅಲ್ಲದೆ ಸರ್ಕಾರದಿಂದ ಲ್ಯಾಪ್​ ಟ್ಯಾಪ್​ ಕೊಡಿಸುತ್ತೇನೆ ಎಂದು ಸಾಮಾನ್ಯ ಜನರಿಂದ ಹಣ ಪಡೆದಿದ್ದನು.

ಇದು ಮಾತ್ರವಲ್ಲದೆ ನಿಮ್ಮ ಬೆಳೆಗಳಿಗೆ ಹೆಚ್ಚಿನ ಲಾಭಾಂಶ ಕೊಡಿಸುತ್ತೇನೆ, ಸರ್ಕಾರದಿಂದ ಸಬ್ಸಿಡಿ ಕೊಡಿಸುತ್ತೇನೆ. ಎಳನೀರು ಹೊರರಾಜ್ಯಗಳಿಗೆ ಮಾರಾಟ ಮಾಡಿಸುತ್ತೇನೆ ಎಂದು ಮಂಡ್ಯ, ಮೈಸೂರು ಮತ್ತು ತುಮಕೂರು ಭಾಗದ ರೈತರಿಂದ ಹಣ ಪಡೆದಿದ್ದನು.

ಇಲ್ಲಿಗೆ ಕೃತ್ಯ ನಿಲ್ಲದೆ ಈತನ ದೃಷ್ಟಿ ಉದ್ಯಮಿಗಳ ಮೇಲೂ ಬಿದ್ದಿತ್ತು. ದೆಹಲಿ, ಲಕ್ನೋ, ಆಗ್ರಾ, ಹಿಮಾಚಲ ಪ್ರದೇಶ ವ್ಯಾಪಾರಿಗಳಿಗೆ ವಿವಿಧ ಆಸೆ ತೋರಿಸಿ ಹಣ ಪಡೆದು ವಂಚಿಸಿದ್ದನು. ಹೀಗೆ ಆರೋಪಿ ಪ್ರತಾಪ್​ ಸಿಂಹ ಒಟ್ಟು 50 ಲಕ್ಷ ರೂ. ಪಡೆದು ವಂಚಿಸಿದ್ದಾನೆ. ಪ್ರತಾಪ್​ ಸಿಂಹ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಸಿಸಿಬಿ ವಿಶೇಷ ವಿಚಾರಣಾ ದಳ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: YMIA Club ಮೇಲೆ ಸಿಸಿಬಿ ಪೊಲೀಸರ ದಾಳಿ, ಜೂಜು ಆಡುತ್ತಿದ್ದವರು ವಶಕ್ಕೆ

ಹಿರಿಯ ನಾಗರಿಕರಿಗೆ ನಂಬಿಸಿ ವಂಚನೆ ಮಾಡುತ್ತಿದ್ದ ದಂಪತಿ ಅರೆಸ್ಟ್​

ಹಿರಿಯ ನಾಗರಿಕರಿಗೆ ನಂಬಿಸಿ ವಂಚನೆ ಮಾಡುತ್ತಿದ್ದ ದಂಪತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಪತ್ನಿ ತೀರ್ಥ ಗೌಡ, ಪತಿ ಉದಯ್ ಬಂಧಿತ ಆರೋಪಿಗಳು. ದಂಪತಿ ಎಲ್​ಐಸಿ ಏಜೆಂಟ್ ಆಗಿದ್ದರು. ಲ್ಯಾಪ್ಸ್ ಆಗಿರುವ ಇನ್ಸುರೆನ್ಸ್​​ಗಳನ್ನು ರಿನಿವಲ್ ಮಾಡಿಸುತ್ತೇನೆ ಅಂತ ನಂಬಿಸಿ ವಂಚಿಸಿದ್ದಾರೆ.

ಆರೋಪಿಗಳಿಗೆ ಸೇರಿದ ಎಂಟು ಅಕೌಂಟ್​ಗಳಲ್ಲಿದ್ದ ಸುಮಾರು 1 ಕೋಟಿ ಹಣವನ್ನು ಸೀಜ್ ಮಾಡಲಾಗಿದೆ. ಆರೋಪಿಗಳು ಇಂದಿರಾನಗರದಲ್ಲಿ ಕಾಲ್​ಸೆಂಟರ್ ಮಾಡಿಕೊಂಡಿದ್ದು,​ ಕೆಲ ಯುವತಿಯರನ್ನು ಕಾಲ್ ಸೆಂಟರ್​​ನಲ್ಲಿ ಕೆಲಸಕ್ಕೆ ಇಟ್ಟುಕೊಂಡಿದ್ದರು. ಸದ್ಯ ಪೊಲೀಸರು ದಂಪತಿಯ ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್