AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತಿನಿಂದ ಮರಳು ಮಾಡಿ ಜನರಿಂದ 50 ಲಕ್ಷ ರೂ. ಪಡೆದು ವಂಚಿಸಿದ್ದ ಆರೋಪಿಯ ಬಂಧನ

ಅಂಧರ, ವೃದ್ಧರ ಮತ್ತು ಅಂಗವಿಕಲರನ್ನು ಪೋಷಿಸುವ ಎನ್​ಜಿಓಗಳಿಗೆ ಭೇಟಿ ನೀಡಿ, ನಿಮಗೆ ಸರ್ಕಾರದಿಂದ ಸಿಎಸ್ಆರ್ ಫಂಡ್ ಕೊಡಿಸುತ್ತೇನೆಂದು ಹಣ ಪಡೆದಿದ್ದನು. ಅಲ್ಲದೆ ಸರ್ಕಾರದಿಂದ ಲ್ಯಾಪ್​ ಟ್ಯಾಪ್​ ಕೊಡಿಸುತ್ತೇನೆ ಎಂದು ಸಾಮಾನ್ಯ ಜನರ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಾತಿನಿಂದ ಮರಳು ಮಾಡಿ ಜನರಿಂದ 50 ಲಕ್ಷ ರೂ. ಪಡೆದು ವಂಚಿಸಿದ್ದ ಆರೋಪಿಯ ಬಂಧನ
ಸಿಸಿಬಿ, ಆರಪಿ ಪ್ರತಾಪ್​ ಸಿಂಹ್​​
TV9 Web
| Edited By: ವಿವೇಕ ಬಿರಾದಾರ|

Updated on: Dec 12, 2023 | 12:34 PM

Share

ಬೆಂಗಳೂರು, ಡಿಸೆಂಬರ್​ 12: ಜನರಿಂದ 50 ಲಕ್ಷ ಹಣ ಪಡೆದು ವಂಚಿಸಿದ್ದ ಆರೋಪಿಯನ್ನು ಸಿಸಿಬಿ (CCB) ಪೊಲೀಸರು (Police) ಬಂಧಿಸಿದ್ದಾರೆ. ಪ್ರತಾಪ್ ಸಿಂಹ ಬಂಧಿತ ಆರೋಪಿ. ಆರೋಪಿ ಪ್ರತಾಪ್​ ಸಿಂಹ ಅಂಧರ, ವೃದ್ಧರ ಮತ್ತು ಅಂಗವಿಕಲರನ್ನು ಪೋಷಿಸುವ ಎನ್​ಜಿಓಗಳಿಗೆ ಭೇಟಿ ನೀಡಿ, ನಿಮಗೆ ಸರ್ಕಾರದಿಂದ ಸಿಎಸ್ಆರ್ ಫಂಡ್ ಕೊಡಿಸುತ್ತೇನೆಂದು ಹಣ ಪಡೆದಿದ್ದನು. ಅಲ್ಲದೆ ಸರ್ಕಾರದಿಂದ ಲ್ಯಾಪ್​ ಟ್ಯಾಪ್​ ಕೊಡಿಸುತ್ತೇನೆ ಎಂದು ಸಾಮಾನ್ಯ ಜನರಿಂದ ಹಣ ಪಡೆದಿದ್ದನು.

ಇದು ಮಾತ್ರವಲ್ಲದೆ ನಿಮ್ಮ ಬೆಳೆಗಳಿಗೆ ಹೆಚ್ಚಿನ ಲಾಭಾಂಶ ಕೊಡಿಸುತ್ತೇನೆ, ಸರ್ಕಾರದಿಂದ ಸಬ್ಸಿಡಿ ಕೊಡಿಸುತ್ತೇನೆ. ಎಳನೀರು ಹೊರರಾಜ್ಯಗಳಿಗೆ ಮಾರಾಟ ಮಾಡಿಸುತ್ತೇನೆ ಎಂದು ಮಂಡ್ಯ, ಮೈಸೂರು ಮತ್ತು ತುಮಕೂರು ಭಾಗದ ರೈತರಿಂದ ಹಣ ಪಡೆದಿದ್ದನು.

ಇಲ್ಲಿಗೆ ಕೃತ್ಯ ನಿಲ್ಲದೆ ಈತನ ದೃಷ್ಟಿ ಉದ್ಯಮಿಗಳ ಮೇಲೂ ಬಿದ್ದಿತ್ತು. ದೆಹಲಿ, ಲಕ್ನೋ, ಆಗ್ರಾ, ಹಿಮಾಚಲ ಪ್ರದೇಶ ವ್ಯಾಪಾರಿಗಳಿಗೆ ವಿವಿಧ ಆಸೆ ತೋರಿಸಿ ಹಣ ಪಡೆದು ವಂಚಿಸಿದ್ದನು. ಹೀಗೆ ಆರೋಪಿ ಪ್ರತಾಪ್​ ಸಿಂಹ ಒಟ್ಟು 50 ಲಕ್ಷ ರೂ. ಪಡೆದು ವಂಚಿಸಿದ್ದಾನೆ. ಪ್ರತಾಪ್​ ಸಿಂಹ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಸಿಸಿಬಿ ವಿಶೇಷ ವಿಚಾರಣಾ ದಳ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: YMIA Club ಮೇಲೆ ಸಿಸಿಬಿ ಪೊಲೀಸರ ದಾಳಿ, ಜೂಜು ಆಡುತ್ತಿದ್ದವರು ವಶಕ್ಕೆ

ಹಿರಿಯ ನಾಗರಿಕರಿಗೆ ನಂಬಿಸಿ ವಂಚನೆ ಮಾಡುತ್ತಿದ್ದ ದಂಪತಿ ಅರೆಸ್ಟ್​

ಹಿರಿಯ ನಾಗರಿಕರಿಗೆ ನಂಬಿಸಿ ವಂಚನೆ ಮಾಡುತ್ತಿದ್ದ ದಂಪತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಪತ್ನಿ ತೀರ್ಥ ಗೌಡ, ಪತಿ ಉದಯ್ ಬಂಧಿತ ಆರೋಪಿಗಳು. ದಂಪತಿ ಎಲ್​ಐಸಿ ಏಜೆಂಟ್ ಆಗಿದ್ದರು. ಲ್ಯಾಪ್ಸ್ ಆಗಿರುವ ಇನ್ಸುರೆನ್ಸ್​​ಗಳನ್ನು ರಿನಿವಲ್ ಮಾಡಿಸುತ್ತೇನೆ ಅಂತ ನಂಬಿಸಿ ವಂಚಿಸಿದ್ದಾರೆ.

ಆರೋಪಿಗಳಿಗೆ ಸೇರಿದ ಎಂಟು ಅಕೌಂಟ್​ಗಳಲ್ಲಿದ್ದ ಸುಮಾರು 1 ಕೋಟಿ ಹಣವನ್ನು ಸೀಜ್ ಮಾಡಲಾಗಿದೆ. ಆರೋಪಿಗಳು ಇಂದಿರಾನಗರದಲ್ಲಿ ಕಾಲ್​ಸೆಂಟರ್ ಮಾಡಿಕೊಂಡಿದ್ದು,​ ಕೆಲ ಯುವತಿಯರನ್ನು ಕಾಲ್ ಸೆಂಟರ್​​ನಲ್ಲಿ ಕೆಲಸಕ್ಕೆ ಇಟ್ಟುಕೊಂಡಿದ್ದರು. ಸದ್ಯ ಪೊಲೀಸರು ದಂಪತಿಯ ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!