AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತಿನಿಂದ ಮರಳು ಮಾಡಿ ಜನರಿಂದ 50 ಲಕ್ಷ ರೂ. ಪಡೆದು ವಂಚಿಸಿದ್ದ ಆರೋಪಿಯ ಬಂಧನ

ಅಂಧರ, ವೃದ್ಧರ ಮತ್ತು ಅಂಗವಿಕಲರನ್ನು ಪೋಷಿಸುವ ಎನ್​ಜಿಓಗಳಿಗೆ ಭೇಟಿ ನೀಡಿ, ನಿಮಗೆ ಸರ್ಕಾರದಿಂದ ಸಿಎಸ್ಆರ್ ಫಂಡ್ ಕೊಡಿಸುತ್ತೇನೆಂದು ಹಣ ಪಡೆದಿದ್ದನು. ಅಲ್ಲದೆ ಸರ್ಕಾರದಿಂದ ಲ್ಯಾಪ್​ ಟ್ಯಾಪ್​ ಕೊಡಿಸುತ್ತೇನೆ ಎಂದು ಸಾಮಾನ್ಯ ಜನರ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಾತಿನಿಂದ ಮರಳು ಮಾಡಿ ಜನರಿಂದ 50 ಲಕ್ಷ ರೂ. ಪಡೆದು ವಂಚಿಸಿದ್ದ ಆರೋಪಿಯ ಬಂಧನ
ಸಿಸಿಬಿ, ಆರಪಿ ಪ್ರತಾಪ್​ ಸಿಂಹ್​​
TV9 Web
| Edited By: ವಿವೇಕ ಬಿರಾದಾರ|

Updated on: Dec 12, 2023 | 12:34 PM

Share

ಬೆಂಗಳೂರು, ಡಿಸೆಂಬರ್​ 12: ಜನರಿಂದ 50 ಲಕ್ಷ ಹಣ ಪಡೆದು ವಂಚಿಸಿದ್ದ ಆರೋಪಿಯನ್ನು ಸಿಸಿಬಿ (CCB) ಪೊಲೀಸರು (Police) ಬಂಧಿಸಿದ್ದಾರೆ. ಪ್ರತಾಪ್ ಸಿಂಹ ಬಂಧಿತ ಆರೋಪಿ. ಆರೋಪಿ ಪ್ರತಾಪ್​ ಸಿಂಹ ಅಂಧರ, ವೃದ್ಧರ ಮತ್ತು ಅಂಗವಿಕಲರನ್ನು ಪೋಷಿಸುವ ಎನ್​ಜಿಓಗಳಿಗೆ ಭೇಟಿ ನೀಡಿ, ನಿಮಗೆ ಸರ್ಕಾರದಿಂದ ಸಿಎಸ್ಆರ್ ಫಂಡ್ ಕೊಡಿಸುತ್ತೇನೆಂದು ಹಣ ಪಡೆದಿದ್ದನು. ಅಲ್ಲದೆ ಸರ್ಕಾರದಿಂದ ಲ್ಯಾಪ್​ ಟ್ಯಾಪ್​ ಕೊಡಿಸುತ್ತೇನೆ ಎಂದು ಸಾಮಾನ್ಯ ಜನರಿಂದ ಹಣ ಪಡೆದಿದ್ದನು.

ಇದು ಮಾತ್ರವಲ್ಲದೆ ನಿಮ್ಮ ಬೆಳೆಗಳಿಗೆ ಹೆಚ್ಚಿನ ಲಾಭಾಂಶ ಕೊಡಿಸುತ್ತೇನೆ, ಸರ್ಕಾರದಿಂದ ಸಬ್ಸಿಡಿ ಕೊಡಿಸುತ್ತೇನೆ. ಎಳನೀರು ಹೊರರಾಜ್ಯಗಳಿಗೆ ಮಾರಾಟ ಮಾಡಿಸುತ್ತೇನೆ ಎಂದು ಮಂಡ್ಯ, ಮೈಸೂರು ಮತ್ತು ತುಮಕೂರು ಭಾಗದ ರೈತರಿಂದ ಹಣ ಪಡೆದಿದ್ದನು.

ಇಲ್ಲಿಗೆ ಕೃತ್ಯ ನಿಲ್ಲದೆ ಈತನ ದೃಷ್ಟಿ ಉದ್ಯಮಿಗಳ ಮೇಲೂ ಬಿದ್ದಿತ್ತು. ದೆಹಲಿ, ಲಕ್ನೋ, ಆಗ್ರಾ, ಹಿಮಾಚಲ ಪ್ರದೇಶ ವ್ಯಾಪಾರಿಗಳಿಗೆ ವಿವಿಧ ಆಸೆ ತೋರಿಸಿ ಹಣ ಪಡೆದು ವಂಚಿಸಿದ್ದನು. ಹೀಗೆ ಆರೋಪಿ ಪ್ರತಾಪ್​ ಸಿಂಹ ಒಟ್ಟು 50 ಲಕ್ಷ ರೂ. ಪಡೆದು ವಂಚಿಸಿದ್ದಾನೆ. ಪ್ರತಾಪ್​ ಸಿಂಹ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಸಿಸಿಬಿ ವಿಶೇಷ ವಿಚಾರಣಾ ದಳ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: YMIA Club ಮೇಲೆ ಸಿಸಿಬಿ ಪೊಲೀಸರ ದಾಳಿ, ಜೂಜು ಆಡುತ್ತಿದ್ದವರು ವಶಕ್ಕೆ

ಹಿರಿಯ ನಾಗರಿಕರಿಗೆ ನಂಬಿಸಿ ವಂಚನೆ ಮಾಡುತ್ತಿದ್ದ ದಂಪತಿ ಅರೆಸ್ಟ್​

ಹಿರಿಯ ನಾಗರಿಕರಿಗೆ ನಂಬಿಸಿ ವಂಚನೆ ಮಾಡುತ್ತಿದ್ದ ದಂಪತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಪತ್ನಿ ತೀರ್ಥ ಗೌಡ, ಪತಿ ಉದಯ್ ಬಂಧಿತ ಆರೋಪಿಗಳು. ದಂಪತಿ ಎಲ್​ಐಸಿ ಏಜೆಂಟ್ ಆಗಿದ್ದರು. ಲ್ಯಾಪ್ಸ್ ಆಗಿರುವ ಇನ್ಸುರೆನ್ಸ್​​ಗಳನ್ನು ರಿನಿವಲ್ ಮಾಡಿಸುತ್ತೇನೆ ಅಂತ ನಂಬಿಸಿ ವಂಚಿಸಿದ್ದಾರೆ.

ಆರೋಪಿಗಳಿಗೆ ಸೇರಿದ ಎಂಟು ಅಕೌಂಟ್​ಗಳಲ್ಲಿದ್ದ ಸುಮಾರು 1 ಕೋಟಿ ಹಣವನ್ನು ಸೀಜ್ ಮಾಡಲಾಗಿದೆ. ಆರೋಪಿಗಳು ಇಂದಿರಾನಗರದಲ್ಲಿ ಕಾಲ್​ಸೆಂಟರ್ ಮಾಡಿಕೊಂಡಿದ್ದು,​ ಕೆಲ ಯುವತಿಯರನ್ನು ಕಾಲ್ ಸೆಂಟರ್​​ನಲ್ಲಿ ಕೆಲಸಕ್ಕೆ ಇಟ್ಟುಕೊಂಡಿದ್ದರು. ಸದ್ಯ ಪೊಲೀಸರು ದಂಪತಿಯ ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ