AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತಿನಿಂದ ಮರಳು ಮಾಡಿ ಜನರಿಂದ 50 ಲಕ್ಷ ರೂ. ಪಡೆದು ವಂಚಿಸಿದ್ದ ಆರೋಪಿಯ ಬಂಧನ

ಅಂಧರ, ವೃದ್ಧರ ಮತ್ತು ಅಂಗವಿಕಲರನ್ನು ಪೋಷಿಸುವ ಎನ್​ಜಿಓಗಳಿಗೆ ಭೇಟಿ ನೀಡಿ, ನಿಮಗೆ ಸರ್ಕಾರದಿಂದ ಸಿಎಸ್ಆರ್ ಫಂಡ್ ಕೊಡಿಸುತ್ತೇನೆಂದು ಹಣ ಪಡೆದಿದ್ದನು. ಅಲ್ಲದೆ ಸರ್ಕಾರದಿಂದ ಲ್ಯಾಪ್​ ಟ್ಯಾಪ್​ ಕೊಡಿಸುತ್ತೇನೆ ಎಂದು ಸಾಮಾನ್ಯ ಜನರ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಾತಿನಿಂದ ಮರಳು ಮಾಡಿ ಜನರಿಂದ 50 ಲಕ್ಷ ರೂ. ಪಡೆದು ವಂಚಿಸಿದ್ದ ಆರೋಪಿಯ ಬಂಧನ
ಸಿಸಿಬಿ, ಆರಪಿ ಪ್ರತಾಪ್​ ಸಿಂಹ್​​
Follow us
TV9 Web
| Updated By: ವಿವೇಕ ಬಿರಾದಾರ

Updated on: Dec 12, 2023 | 12:34 PM

ಬೆಂಗಳೂರು, ಡಿಸೆಂಬರ್​ 12: ಜನರಿಂದ 50 ಲಕ್ಷ ಹಣ ಪಡೆದು ವಂಚಿಸಿದ್ದ ಆರೋಪಿಯನ್ನು ಸಿಸಿಬಿ (CCB) ಪೊಲೀಸರು (Police) ಬಂಧಿಸಿದ್ದಾರೆ. ಪ್ರತಾಪ್ ಸಿಂಹ ಬಂಧಿತ ಆರೋಪಿ. ಆರೋಪಿ ಪ್ರತಾಪ್​ ಸಿಂಹ ಅಂಧರ, ವೃದ್ಧರ ಮತ್ತು ಅಂಗವಿಕಲರನ್ನು ಪೋಷಿಸುವ ಎನ್​ಜಿಓಗಳಿಗೆ ಭೇಟಿ ನೀಡಿ, ನಿಮಗೆ ಸರ್ಕಾರದಿಂದ ಸಿಎಸ್ಆರ್ ಫಂಡ್ ಕೊಡಿಸುತ್ತೇನೆಂದು ಹಣ ಪಡೆದಿದ್ದನು. ಅಲ್ಲದೆ ಸರ್ಕಾರದಿಂದ ಲ್ಯಾಪ್​ ಟ್ಯಾಪ್​ ಕೊಡಿಸುತ್ತೇನೆ ಎಂದು ಸಾಮಾನ್ಯ ಜನರಿಂದ ಹಣ ಪಡೆದಿದ್ದನು.

ಇದು ಮಾತ್ರವಲ್ಲದೆ ನಿಮ್ಮ ಬೆಳೆಗಳಿಗೆ ಹೆಚ್ಚಿನ ಲಾಭಾಂಶ ಕೊಡಿಸುತ್ತೇನೆ, ಸರ್ಕಾರದಿಂದ ಸಬ್ಸಿಡಿ ಕೊಡಿಸುತ್ತೇನೆ. ಎಳನೀರು ಹೊರರಾಜ್ಯಗಳಿಗೆ ಮಾರಾಟ ಮಾಡಿಸುತ್ತೇನೆ ಎಂದು ಮಂಡ್ಯ, ಮೈಸೂರು ಮತ್ತು ತುಮಕೂರು ಭಾಗದ ರೈತರಿಂದ ಹಣ ಪಡೆದಿದ್ದನು.

ಇಲ್ಲಿಗೆ ಕೃತ್ಯ ನಿಲ್ಲದೆ ಈತನ ದೃಷ್ಟಿ ಉದ್ಯಮಿಗಳ ಮೇಲೂ ಬಿದ್ದಿತ್ತು. ದೆಹಲಿ, ಲಕ್ನೋ, ಆಗ್ರಾ, ಹಿಮಾಚಲ ಪ್ರದೇಶ ವ್ಯಾಪಾರಿಗಳಿಗೆ ವಿವಿಧ ಆಸೆ ತೋರಿಸಿ ಹಣ ಪಡೆದು ವಂಚಿಸಿದ್ದನು. ಹೀಗೆ ಆರೋಪಿ ಪ್ರತಾಪ್​ ಸಿಂಹ ಒಟ್ಟು 50 ಲಕ್ಷ ರೂ. ಪಡೆದು ವಂಚಿಸಿದ್ದಾನೆ. ಪ್ರತಾಪ್​ ಸಿಂಹ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಸಿಸಿಬಿ ವಿಶೇಷ ವಿಚಾರಣಾ ದಳ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: YMIA Club ಮೇಲೆ ಸಿಸಿಬಿ ಪೊಲೀಸರ ದಾಳಿ, ಜೂಜು ಆಡುತ್ತಿದ್ದವರು ವಶಕ್ಕೆ

ಹಿರಿಯ ನಾಗರಿಕರಿಗೆ ನಂಬಿಸಿ ವಂಚನೆ ಮಾಡುತ್ತಿದ್ದ ದಂಪತಿ ಅರೆಸ್ಟ್​

ಹಿರಿಯ ನಾಗರಿಕರಿಗೆ ನಂಬಿಸಿ ವಂಚನೆ ಮಾಡುತ್ತಿದ್ದ ದಂಪತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಪತ್ನಿ ತೀರ್ಥ ಗೌಡ, ಪತಿ ಉದಯ್ ಬಂಧಿತ ಆರೋಪಿಗಳು. ದಂಪತಿ ಎಲ್​ಐಸಿ ಏಜೆಂಟ್ ಆಗಿದ್ದರು. ಲ್ಯಾಪ್ಸ್ ಆಗಿರುವ ಇನ್ಸುರೆನ್ಸ್​​ಗಳನ್ನು ರಿನಿವಲ್ ಮಾಡಿಸುತ್ತೇನೆ ಅಂತ ನಂಬಿಸಿ ವಂಚಿಸಿದ್ದಾರೆ.

ಆರೋಪಿಗಳಿಗೆ ಸೇರಿದ ಎಂಟು ಅಕೌಂಟ್​ಗಳಲ್ಲಿದ್ದ ಸುಮಾರು 1 ಕೋಟಿ ಹಣವನ್ನು ಸೀಜ್ ಮಾಡಲಾಗಿದೆ. ಆರೋಪಿಗಳು ಇಂದಿರಾನಗರದಲ್ಲಿ ಕಾಲ್​ಸೆಂಟರ್ ಮಾಡಿಕೊಂಡಿದ್ದು,​ ಕೆಲ ಯುವತಿಯರನ್ನು ಕಾಲ್ ಸೆಂಟರ್​​ನಲ್ಲಿ ಕೆಲಸಕ್ಕೆ ಇಟ್ಟುಕೊಂಡಿದ್ದರು. ಸದ್ಯ ಪೊಲೀಸರು ದಂಪತಿಯ ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು