ಬೆಂಗಳೂರು: ಕಿಡ್ನಾಪರ್ಸ್​​ಗೆ ಸಾಥ್​​​​ ನೀಡಿದ್ದ ಪ್ರೋಬೇಶನರಿ ಪಿಎಸ್ಐ ಅರೆಸ್ಟ್​

ಪ್ರೋಬೇಶನರಿ ಪಿಎಸ್​ಐ ಸಿದ್ಧಾರೂಢ ಬಿಜ್ಜಣ್ಣನವರ್ ಮಡಿವಾಳ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದರು. ಈ ವೇಳೆ ಸಿದ್ಧಾರೂಢ ಅವರಿಗೆ ರಾಜ್ ಕಿಶೋರ್ ಪರಿಚಯವಾಗುತ್ತದೆ. ತಾನು ಹೋಮ್ ಗಾರ್ಡ್ ಎಂದು ರಾಜ್​ ಕಿಶೋರ್​ ಪರಿಚಯಿಸಿಕೊಂಡಿದ್ದನು. ಇಬ್ಬರ ನಡುವೆ ಸ್ನೇಹ ಬೆಳೆಯುತ್ತದೆ. ಇದೇ ವರ್ಷ ಜುಲೈ 20 ರಾಜ್​​ ಕಿಶೋರ್ ಪ್ರೋಬೇಶನರಿ ಪಿಎಸ್​ಐ ಸಿದ್ಧಾರೂಢ ಬಿಜ್ಜಣ್ಣನವರ್ ಅವರ ಠಾಣೆಗೆ ಬಂದಿದ್ದನು. ಇವರಿಬ್ಬರ ಸ್ನೇಹದಿಂದ ಮುಂದೆಯಾದ ಅನಾಹುತವೇನು? ಈ ಸ್ಟೋರಿ ಓದಿ

ಬೆಂಗಳೂರು: ಕಿಡ್ನಾಪರ್ಸ್​​ಗೆ ಸಾಥ್​​​​ ನೀಡಿದ್ದ ಪ್ರೋಬೇಶನರಿ ಪಿಎಸ್ಐ ಅರೆಸ್ಟ್​
ಸಿಸಿಬಿ ಕಚೇರಿ
Follow us
| Updated By: ವಿವೇಕ ಬಿರಾದಾರ

Updated on:Nov 20, 2023 | 12:35 PM

ಬೆಂಗಳೂರು ನ.20: ಕಿಡ್ನಾಪರ್ಸ್​​ಗೆ (Kidnappers) ಸಾಥ್​​​​ ನೀಡಿದ ಆರೋಪದ ಮೇಲೆ ಪ್ರೋಬೇಶನರಿ ಪಿಎಸ್ಐ ಸಿದ್ಧಾರೂಢ ಬಿಜ್ಜಣ್ಣನವರ್ ಅವರನ್ನು ಸಿಸಿಬಿ (CCB) ಪೊಲೀಸರು (Police) ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಪೊಲೀಸ್ ಕಾನ್ಸ್‌ಟೇಬಲ್ ಅಲ್ಲಾಬಾಕಾಶ್ ಮತ್ತು ರಾಜ್​ ಕಿಶೋರ್​​ನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

ಪ್ರೋಬೇಶನರಿ ಪಿಎಸ್​ಐ ಸಿದ್ಧಾರೂಢ ಬಿಜ್ಜಣ್ಣನವರ್ ಮಡಿವಾಳ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದರು. ಈ ವೇಳೆ ಸಿದ್ಧಾರೂಢ ಅವರಿಗೆ ರಾಜ್ ಕಿಶೋರ್ ಪರಿಚಯವಾಗುತ್ತದೆ. ತಾನು ಹೋಮ್ ಗಾರ್ಡ್ ಎಂದು ರಾಜ್​ ಕಿಶೋರ್​ ಪರಿಚಯಿಸಿಕೊಂಡಿದ್ದನು. ಇಬ್ಬರ ನಡುವೆ ಸ್ನೇಹ ಬೆಳೆಯುತ್ತದೆ. ಇದೇ ವರ್ಷ ಜುಲೈ 20 ರಾಜ್​​ ಕಿಶೋರ್ ಪ್ರೋಬೇಶನರಿ ಪಿಎಸ್​ಐ ಸಿದ್ಧಾರೂಢ ಬಿಜ್ಜಣ್ಣನವರ್ ಅವರ ಠಾಣೆಗೆ ಬಂದಿದ್ದನು.

ಈ ವೇಳೆ ಸಿದ್ಧಾರೂಢ ಬಿಜ್ಜಣನವರ್​ ಬೈಕ್ ಸ್ಟಾರ್ಟ್ ಮಾಡಲು ಯತ್ನಸುತ್ತಿದ್ದರು. ಇದನ್ನು ಕಂಡ ರಾಜ್​ ಕಿಶೋರ್​ “ನಾನು ತಾನೆ ರಿಪೇರಿ ಮಾಡಿಸುತ್ತೇನೆ ಎಂದು ಸಿದ್ದಾರೂಢ ಅವರಿಗೆ ಹೇಳಿದ್ದಾನೆ. ಅಲ್ಲದೆ ಇದೇ ವೇಳೆ ನಮ್ಮ ಅಣ್ಣನಿಗೆ, ಕಾರ್ತಿಕ್​ ಎಂಬಾತ ಹಣ ನೀಡಬೇಕು, ನೀವು ಬಂದು ಹಣ ಕೊಡಿಸಿ ಸರ್​​ ಎಂದು ಮನವಿ ಮಾಡಿದ್ದಾನೆ.

ರಾಜ್​ ಕಿಶೋರ್​ ಮಾತನಿಗೆ ಒಪ್ಪಿ ಪ್ರೋಬೇಶನರಿ ಪಿಎಸ್​ಐ ಸಿದ್ಧಾರೂಢ ಬಿಜ್ಜಣ್ಣನವರ್ ಕಾನ್ಸ್‌ಟೇಬಲ್ ಅಲ್ಲಾಬಾಕಾಶ್ ಸ್ಥಳಕ್ಕೆ ಹೋಗಿದ್ದಾರೆ. ಬಳಿಕ ಕಾರ್ತಿಕ್​ನನ್ನು ಹೆಚ್​ಎಸ್​ಆರ್ ಲೇಔಟ್​​ನಿಂದ ಕಿಡ್ನಾಪ್ ಮಾಡಿದ್ದಾರೆ. ಬಳಿಕ ಕೆಜಿ ಹಳ್ಳಿಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಆರೋಪಿಗಳು ಕಾರ್ತಿಕ್​ಗೆ ಒಂದುವರೆ ಕೋಟಿ ಕ್ರಿಪ್ಟೊ ಕರೆನ್ಸಿ ಮತ್ತು 20 ಲಕ್ಷ ರೂ. ನೀಡುವಂತೆ ಬೆದರಿಕೆ ಹಾಕಿದ್ದಾರೆ. ಇದರಿಂದ ಬೆದರಿದ ಕಾರ್ತಿಕ್​ ಆರೋಪಿಗಳ ಅಕೌಂಟ್​ಗೆ ವರ್ಗಾವಣೆ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ನಕಲಿ ಬ್ಯಾಂಕ್ ಖಾತೆ ಸೃಷ್ಟಿಸಿ ವಹಿವಾಟು ನಡೆಸುತ್ತಿದ್ದ ಜಾಲ ಭೇದಿಸಿದ ಸಿಸಿಬಿ

ಘಟನೆ ಬಳಿಕ ಕಾರ್ತಿಕ್​ ಕೆಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕೆಜಿಹಳ್ಳಿ ಪೊಲೀಸರು ತನಿಖೆ ಸರಿಯಾಗಿ ನಡೆಸದ ಕಾರಣ ಪ್ರಕರಣ ಸಿಸಿಬಿಗೆ ವರ್ಗಾವಣೆಯಾಗಿತ್ತು. ಪ್ರಕರಣದ ತನಿಖೆ ನಡೆಸಿದ ಸಿಸಿಬಿ ಪೊಲೀಸರು, ಘಟನೆಯಲ್ಲಿ ಸಿದ್ಧಾರೂಢ ಬಿಜ್ಜಣ್ಣನವರ್​ ಕೂಡ ಶಾಮಿಲಾಗಿರುವುದನ್ನು ಪತ್ತೆ ಹಚ್ಚುತ್ತಾರೆ. ಬಳಿಕ ಸಿಸಿಬಿ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ಮೂವರು ಅರೆಸ್ಟ್ ಮಾಡುತ್ತಾರೆ. ಅಲ್ಲದೆ ಆರೋಪಿಗಳ ಅಕೌಂಟ್​ನಲ್ಲಿದ್ದ 20 ಲಕ್ಷ ರೂ. ಹಣ ಮತ್ತು ಕ್ರಿಪ್ಟೊ ಕರೆನ್ಸಿಯನ್ನು ವಶಕ್ಕೆ ಪಡೆದಿದ್ದಾರೆ.

ಪ್ರಕರಣ ಸಂಬಂಧ ಬಂಧಿತರಾಗಿದ್ದ ವಂಶಿ ಕೃಷ್ಣ. ವಿನೋದ್ ನಾಯಕ, ಕಿರಣ್​  ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ. ಇದೀಗ ಸಿಸಿಬಿ ಪೊಲೀಸರು ಇವರ ಜಾಮೀನು ರದ್ದು ಮಾಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಕರಣದ ತನಿಖೆ ನಡೆದಿದ್ದು, ನಾಲ್ವರು ಅರೋಪಿಗಳು ಬಂಧಿಸಿದ್ದೇವೆ: ಸಿಸಿಬಿ ಡಿಸಿಪಿ

ಪ್ರಕರಣ ಸಂಬಂಧ ಸಿಸಿಬಿ ಡಿಸಿಪಿ ಆರ್ ಶ್ರೀನಿವಾಸ ಗೌಡ ಮಾತನಾಡಿ ” ಪ್ರಕರಣದ ತನಿಖೆ ನಡೆದಿದೆ. ನಾಲ್ವರು ಅರೋಪಿಗಳು ಬಂಧಿಸಿದ್ದೇವೆ. ಪ್ರಕರಣದಲ್ಲಿ ಕಿಡ್ಯ್ನಾಪ್​ ಮಾಡಿ ಹಣ ವಸೂಲಿ ಮಾಡಲು ಸಹಕರಿಸಿದ್ದ ಒರ್ವ ಪಿಎಸ್​ಐ, ಒರ್ವ ಪಿಸಿ ಸೇರಿದಂತೆ ನಾಲ್ವರನ್ನು ಅರೆಸ್ಟ್ ಮಾಡಲಾಗಿದೆ. ಸುಮಾರು ಒಂದುವರೆ ಕೋಟಿ ಮೌಲ್ಯದ ಕ್ರಿಪ್ಟೊ ಕರೆನ್ಸಿ ಮತ್ತು ಇಪತ್ತು ಲಕ್ಷ ಹಣ ವರ್ಗಾವಣೆ ಮಾಡಿದ್ದಾರೆ. ಉಳಿದಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:21 pm, Mon, 20 November 23

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್