AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು

ದರೋಡೆಗೆ ಸಂಚು ರೂಪಿಸುತ್ತಿದ್ದ ರೌಡಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸತ್ಯ, ರಾಘವೇಂದ್ರ, ಜಯಂತ್, ರಾಜೇಶ್ ಬಂಧಿತ ಆರೋಪಿಗಳು.

ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು
ಸಾಂದರ್ಭಿಕ ಚಿತ್ರImage Credit source: NDTV
TV9 Web
| Updated By: ವಿವೇಕ ಬಿರಾದಾರ|

Updated on:Sep 12, 2022 | 11:02 PM

Share

ಬೆಂಗಳೂರು: ದರೋಡೆಗೆ ಸಂಚು ರೂಪಿಸುತ್ತಿದ್ದ ರೌಡಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸತ್ಯ, ರಾಘವೇಂದ್ರ, ಜಯಂತ್, ರಾಜೇಶ್ ಬಂಧಿತ ಆರೋಪಿಗಳು. ಆರೋಪಿಗಳು ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಮಾರಕಾಸ್ತ್ರಗಳ ಸಮೇತ ದರೋಡೆಗೆ ಸಂಚು ರೂಪಿಸಿದ್ದರು. ಎ.ಪಿ ನಗರ, ಕಾಮಾಕ್ಷಿ ಪಾಳ್ಯ, ಪುಟ್ಟೇನಹಳ್ಳಿ ರೌಡಿಶೀಟರ್​ಗಳು ಮತ್ತು ಸಹಚರರಿಂದ ದರೋಡೆಗೆ ಸಂಚು ರೂಪಿಸಲಾಗಿತ್ತು.

ಪಕ್ಕಾ ಮಾಹಿತಿ ಆಧರಿಸಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ರೌಡಿಶೀಟರ್​ಗಳನ್ನು ಮತ್ತು ಅವರ ಸಹಚರರನ್ನು ಬಂಧಸಿದ್ದಾರೆ. ದಾಳಿ ವೇಳೆ ಓರ್ವ ರೌಡಿಶೀಟರ್ ಶ್ರೀಧರ್ ಅಲಿಯಾಸ್ ಕರಿಯ ಪರಾರಿಯಾಗಿದ್ದಾನೆ. ಸದ್ಯ ಅರೆಸ್ಟ್ ಮಾಡಿರೋ ಆರೋಪಿಗಳಿಂದ ಪೊಲೀಸರು ಮಾರಕಾಸ್ತ್ರಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ತಪ್ಪಿಸಿಕೊಂಡಿರೋ ಆರೋಪಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮ ಮರಳು ದಂಧೆಕೋರರಿಂದ ಸಿಸಿಟಿವಿ ಧ್ವಂಸ ಪ್ರಕರಣ; ನಾಲ್ವರ ಬಂಧನ

ದಕ್ಷಿಣಕನ್ನಡ: ಅಕ್ರಮ ಮರಳು ದಂಧೆಕೋರರಿಂದ ಸಿಸಿಟಿವಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಠಾಣೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಇಕ್ಬಾಲ್, ಅಖಿಲ್, ಪ್ರಜ್ವಲ್, ಸೂರಜ್ ಬಂಧಿತ ಆರೋಪಿಗಳು. ಸಿಸಿಟಿವಿ ಧ್ವಂಸಕ್ಕೆ ಆರೋಪಿಗಳು ಬಳಸಿದ್ದ ಟಿಪ್ಪರ್ ವಾಹನ ಜಪ್ತಿ ಮಾಡಲಾಗಿದೆ.

ಉಳ್ಳಾಲದ ಸೋಮೇಶ್ವರ ಅರಬ್ಬಿ ಸಮುದ್ರದ ಬಳಿ ಅಕ್ರಮ ಮರಳುಗಾರಿಕೆಯನ್ನು ತಡೆಯಲು ದಕ್ಷಿಣಕನ್ನಡ ಜಿಲ್ಲಾಡಳಿತ ಸಮುದ್ರದ ಬಳಿ ಸಿಸಿಟಿವಿ ಅಳವಡಿಸಿತ್ತು. ಆದರೆ ಮರಳು ದಂಧೆಕೋರರು ಮುಸುಕು ಹಾಕಿಕೊಂಡು ಸಿಸಿಟಿವಿಯನ್ನು ಕಿತ್ತುಹಾಕಲು ಯತ್ನಿಸಿದ್ದರು. ಸಾಧ್ಯವಾಗದಿದ್ದಕ್ಕೆ ಟಿಪ್ಪರ್ ವಾಹನದಿಂದ ಸಿಸಿಟಿವಿ ಜಖಂಗೊಳಿಸಿದ್ದರು. ಅಧಿಕಾರಿಗಳು ನೀಡಿದ್ದ ದೂರಿನ ಮೇರೆಗೆ ನಾಲ್ವರು ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ.

ಉದ್ಯೋಗ ಕೊಡಿಸುವುದಾಗಿ ಯುವಕರಿಗೆ ವಂಚಸಿದ ಆರೋಪ; ಖಾಸಗಿ ಸಂಸ್ಥೆಗಳ ಮೇಲೆ ಪೊಲೀಸರ ದಾಳಿ

ಕೋಲಾರ: ಉದ್ಯೋಗ ಕೊಡಿಸುವುದಾಗಿ ಯುವಕರಿಗೆ ವಂಚಸಿದ ಆರೋಪದಡಿ ಕೋಲಾರದಲ್ಲಿ ಖಾಸಗಿ ಸಂಸ್ಥೆಗಳ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಖುಷಿ ಸಂಪದ, ಮಾರ್ಡನ್​ ಸೋಲ್​ ಪ್ರೈ.ಲಿ. ಕಚೇರಿ ಮೇಲೆ ಡಿವೈಎಸ್​ಪಿ ಮುರಳೀಧರನ್​ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

3 ತಂಡಗಳಾಗಿ ಪೊಲೀಸರು ನಗರದ ಮಹಾಲಕ್ಷ್ಮೀ ಬಡಾವಣೆ, ಚೌಡೇಶ್ವರಿ ನಗರ, ಇಟಿಸಿಎಂ ಸರ್ಕಲ್ ಬಳಿ ಇರುವ ಖುಷಿ ಸಂಪದ, ಮಾಡ್ರನ್ ಸೋಲ್ ಪ್ರೈವೇಟ್ ಲಿಮಿಟೆಡ್ ಕಛೇರಿಗಳ ಮೇಲೆ ದಾಳಿ ಮಾಡಿದ್ದಾರೆ.

ಮತ್ತಷ್ಟು ಅಪಾರಾಧ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 10:59 pm, Mon, 12 September 22

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ