AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್‌ಬುಕ್‌‌ನಲ್ಲಿ ಸುಳ್ಳು ಪೋಸ್ಟ್‌ ಮಾಡಿದ ಕಿಡಿಗೇಡಿ ಈಗ ಎಲ್ಲಿದ್ದಾನೆ ಗೊತ್ತಾ ?

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗಳು ತುಂಬಿದ್ದಾರೆಂದು ಫೇಸ್‌ ಬುಕ್‌ನಲ್ಲಿ ಸುಳ್ಳು ಪೋಸ್ಟ್​ ಮಾಡಿದ್ದ ಕಿಡಿಗೇಡಿಯನ್ನ ಬೆಂಗಳೂರು ಪೊಲೀಸರು ಪತ್ತೆ ಹಚ್ಚಿ ಕಂಬಿ ಹಿಂದೆ ಕಳಿಸಿದ್ದಾರೆ. ಹೌದು ಕೆಲ ದಿನಗಳ ಹಿಂದೆ ತಿಲಕ್‌ ನಗರದ ನಿವಾಸಿ ಸಮೀರ್‌ ಎಂಬ ಅವಿವೇಕಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ತುಂಬಾ ರೋಗಿಗಳು ತುಂಬಿದ್ದಾರೆಂದು ಸುಳ್ಳು ಪೋಸ್ಟ್​ ಹಾಕಿದ್ದ. ಇದು ಬೇರೆ ರಾಜ್ಯದ ಆಸ್ಪತ್ರೆಯ ವಿಡಿಯೋ ಆಗಿತ್ತು. ಆದ್ರೆ ಸಾಮಾಜಿಕ ತಾಣದಲ್ಲಿ ಈ ವಿಡಿಯೋ ನೋಡಿದ್ದ ಸಾರ್ವಜನಿಕರಲ್ಲಿ ಆತಂಕ, ಭಯ ಮೂಡಿತ್ತು. ಈ ಸಂಬಂಧ […]

ಫೇಸ್‌ಬುಕ್‌‌ನಲ್ಲಿ ಸುಳ್ಳು ಪೋಸ್ಟ್‌ ಮಾಡಿದ ಕಿಡಿಗೇಡಿ ಈಗ ಎಲ್ಲಿದ್ದಾನೆ ಗೊತ್ತಾ ?
Guru
Guru|

Updated on:Jul 19, 2020 | 5:05 PM

Share

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗಳು ತುಂಬಿದ್ದಾರೆಂದು ಫೇಸ್‌ ಬುಕ್‌ನಲ್ಲಿ ಸುಳ್ಳು ಪೋಸ್ಟ್​ ಮಾಡಿದ್ದ ಕಿಡಿಗೇಡಿಯನ್ನ ಬೆಂಗಳೂರು ಪೊಲೀಸರು ಪತ್ತೆ ಹಚ್ಚಿ ಕಂಬಿ ಹಿಂದೆ ಕಳಿಸಿದ್ದಾರೆ.

ಹೌದು ಕೆಲ ದಿನಗಳ ಹಿಂದೆ ತಿಲಕ್‌ ನಗರದ ನಿವಾಸಿ ಸಮೀರ್‌ ಎಂಬ ಅವಿವೇಕಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ತುಂಬಾ ರೋಗಿಗಳು ತುಂಬಿದ್ದಾರೆಂದು ಸುಳ್ಳು ಪೋಸ್ಟ್​ ಹಾಕಿದ್ದ. ಇದು ಬೇರೆ ರಾಜ್ಯದ ಆಸ್ಪತ್ರೆಯ ವಿಡಿಯೋ ಆಗಿತ್ತು. ಆದ್ರೆ ಸಾಮಾಜಿಕ ತಾಣದಲ್ಲಿ ಈ ವಿಡಿಯೋ ನೋಡಿದ್ದ ಸಾರ್ವಜನಿಕರಲ್ಲಿ ಆತಂಕ, ಭಯ ಮೂಡಿತ್ತು. ಈ ಸಂಬಂಧ ಸೈಬರ್ ಕ್ರೈಂ ಠಾಣೆಯಲ್ಲಿ ಕೇಸ್ ಕೂಡಾ ದಾಖಲಾಗಿತ್ತು.

ತನಿಖೆ ಆರಂಭಿಸಿದ ಸಿಸಿಬಿ ಪೊಲೀಸರಿಗೆ ಸುಳ್ಳು ವಿಡಿಯೋ ಪೋಸ್ಟ್‌ ಮಾಡಿದ್ದ ಕಿರಾತಕ ಆರೋಪಿ ಸಮೀರ್‌ ಬೆಂಗಳೂರಿನ ತಿಲಕ್‌ನಗರದಲ್ಲಿ ಪತ್ತೆಯಾಗಿದ್ದಾನೆ. ತಕ್ಷಣ ಆತನನ್ನು ಬಂಧಿಸಿ ಕಂಬಿ ಹಿಂದೆ ಕಳಿಸಿದ್ದಾರೆ. ಈ ಆರೋಪಿ ಟಿಂಬರ್ ವ್ಯವಹಾರ ನಡೆಸುತಿದ್ದು, ಕೆಲ ಸಿನಿಮಾ ಇವೆಂಟ್‌ಗಳಲ್ಲೂ ಪಾಲ್ಗೊಂಡಿದ್ದ ಎನ್ನಲಾಗಿದೆ. ಜೊತೆಗೆ ಕಾಂಗ್ರೆಸ್‌ ನಾಯಕರೊಂದಿಗೆ ಗುರುತಿಸಿಕೊಂಡಿದ್ದ ಎಂದು ತಿಳಿದು ಬಂದಿದೆ.

Published On - 4:54 pm, Sun, 19 July 20

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ