AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ಕಾರ್ಯಾಚರಣೆ: ಕುಖ್ಯಾತ ಕಾರುಗಳ್ಳರ ಬಂಧನ, ಇವರು ಕದ್ದಿದ್ದು ಬರೋಬ್ಬರಿ 27 ಕಾರುಗಳು..!

ಬೆಂಗಳೂರಿನ ಗಿರೀಶ್ ಗೌಡ ಹಾಗೂ ಮೋಹನ್ ಬಂಧಿತ ಆರೋಪಿಗಳಾಗಿದ್ದು, ಈ ಖದೀಮರು ಹೈಫೈ ಕಾರುಗಳನ್ನೇ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಒಟ್ಟಾರೆ ಈ ಚಾಲಾಕಿಗಳು 27 ಕಾರುಗಳನ್ನ ಕಳ್ಳತನ ಮಾಡಿದ್ದರು.

CCB ಕಾರ್ಯಾಚರಣೆ: ಕುಖ್ಯಾತ ಕಾರುಗಳ್ಳರ ಬಂಧನ, ಇವರು ಕದ್ದಿದ್ದು ಬರೋಬ್ಬರಿ 27 ಕಾರುಗಳು..!
ಬಂಧಿತ ಕಾರುಗಳ್ಳರು
ಪೃಥ್ವಿಶಂಕರ
| Edited By: |

Updated on:Jan 17, 2021 | 11:28 AM

Share

ಬೆಂಗಳೂರು: ನಗರದಲ್ಲಿ ಕಾರುಗಳನ್ನ ಬಾಡಿಗೆಗೆ ಪಡೆದು ವಂಚಿಸುತ್ತಿದ್ದ ಇಬ್ಬರು ಖದೀಮರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಗಿರೀಶ್ ಗೌಡ ಹಾಗೂ ಮೋಹನ್ ಬಂಧಿತ ಆರೋಪಿಗಳಾಗಿದ್ದು, ಈ ಖದೀಮರು ಹೈಫೈ ಕಾರುಗಳನ್ನೇ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಒಟ್ಟಾರೆ ಈ ಚಾಲಾಕಿಗಳು 12 ಇನೋವಾ ಕ್ರಿಸ್ತಾ, ಮಾರುತಿ ಕಂಪನಿಯ 5 ಕಾರುಗಳು, ಹೊಂಡೈ ಕಂಪನಿಯ 4 ಕಾರುಗಳು, 3 ಟೊಯೋಟಾ ಫಾರ್ಚುನರ್, ಹೋಂಡಾ ಕಂಪನಿಯ 1 ಕಾರು, ನಿಸಾನ್ ಕಂಪನಿಯ 1 ಕಾರು ಹಾಗೂ ಟಾಟಾ ಕಂಪನಿಯ 1 ಕಾರು ಸೇರಿ ಒಟ್ಟು 27 ಕಾರುಗಳ ಕಳ್ಳತನ ಮಾಡಿದ್ದರು.

ಬಂಧಿತರಿಂದ ಲಕ್ಷಾಂತರ ಬೆಲೆಬಾಳುವ ಕಾರುಗಳು ಹಾಗೂ 75 ಗ್ರಾಂ ಚಿನ್ನಾಭರಣ, 2 ಬೆಲೆ ಬಾಳುವ ಮೊಬೈಲ್ ಫೋನ್, 6 ಲಕ್ಷ ನಗದನ್ನು ಸಿಸಿಬಿ ಪೊಲೀಸರು ಜಫ್ತಿ ಮಾಡಿದ್ದಾರೆ. ORIX AISL ಕಂಪನಿಯ ಜನರಲ್ ಮ್ಯಾನೇಜರ್ ಮೋಹಲ್ ವೇಲು ಎಂಬುವವರ ದೂರನ್ನ ಆಧರಿಸಿ ಆರೋಪಿಗಳ ಬಂಧಿಸಲಾಗಿದೆ. ಬಾಡಿಗೆಗೆ ಕಾರನ್ನ ಪಡೆದುಕೊಂಡು ಎಲ್ಲೋ ಬೋರ್ಡ್ ವೈಕಲ್​ನ್ನ, ವೈಟ್ ಬೋರ್ಡ್ ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ಮ್ಯಾನೇಜರ್ ಮೊದಲು ಬೈಯಪ್ಪನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಈ ಪ್ರಕರಣ ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು.

Published On - 8:40 am, Sun, 17 January 21

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ