AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ಕಾರ್ಯಾಚರಣೆ: ಕುಖ್ಯಾತ ಕಾರುಗಳ್ಳರ ಬಂಧನ, ಇವರು ಕದ್ದಿದ್ದು ಬರೋಬ್ಬರಿ 27 ಕಾರುಗಳು..!

ಬೆಂಗಳೂರಿನ ಗಿರೀಶ್ ಗೌಡ ಹಾಗೂ ಮೋಹನ್ ಬಂಧಿತ ಆರೋಪಿಗಳಾಗಿದ್ದು, ಈ ಖದೀಮರು ಹೈಫೈ ಕಾರುಗಳನ್ನೇ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಒಟ್ಟಾರೆ ಈ ಚಾಲಾಕಿಗಳು 27 ಕಾರುಗಳನ್ನ ಕಳ್ಳತನ ಮಾಡಿದ್ದರು.

CCB ಕಾರ್ಯಾಚರಣೆ: ಕುಖ್ಯಾತ ಕಾರುಗಳ್ಳರ ಬಂಧನ, ಇವರು ಕದ್ದಿದ್ದು ಬರೋಬ್ಬರಿ 27 ಕಾರುಗಳು..!
ಬಂಧಿತ ಕಾರುಗಳ್ಳರು
ಪೃಥ್ವಿಶಂಕರ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jan 17, 2021 | 11:28 AM

Share

ಬೆಂಗಳೂರು: ನಗರದಲ್ಲಿ ಕಾರುಗಳನ್ನ ಬಾಡಿಗೆಗೆ ಪಡೆದು ವಂಚಿಸುತ್ತಿದ್ದ ಇಬ್ಬರು ಖದೀಮರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಗಿರೀಶ್ ಗೌಡ ಹಾಗೂ ಮೋಹನ್ ಬಂಧಿತ ಆರೋಪಿಗಳಾಗಿದ್ದು, ಈ ಖದೀಮರು ಹೈಫೈ ಕಾರುಗಳನ್ನೇ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಒಟ್ಟಾರೆ ಈ ಚಾಲಾಕಿಗಳು 12 ಇನೋವಾ ಕ್ರಿಸ್ತಾ, ಮಾರುತಿ ಕಂಪನಿಯ 5 ಕಾರುಗಳು, ಹೊಂಡೈ ಕಂಪನಿಯ 4 ಕಾರುಗಳು, 3 ಟೊಯೋಟಾ ಫಾರ್ಚುನರ್, ಹೋಂಡಾ ಕಂಪನಿಯ 1 ಕಾರು, ನಿಸಾನ್ ಕಂಪನಿಯ 1 ಕಾರು ಹಾಗೂ ಟಾಟಾ ಕಂಪನಿಯ 1 ಕಾರು ಸೇರಿ ಒಟ್ಟು 27 ಕಾರುಗಳ ಕಳ್ಳತನ ಮಾಡಿದ್ದರು.

ಬಂಧಿತರಿಂದ ಲಕ್ಷಾಂತರ ಬೆಲೆಬಾಳುವ ಕಾರುಗಳು ಹಾಗೂ 75 ಗ್ರಾಂ ಚಿನ್ನಾಭರಣ, 2 ಬೆಲೆ ಬಾಳುವ ಮೊಬೈಲ್ ಫೋನ್, 6 ಲಕ್ಷ ನಗದನ್ನು ಸಿಸಿಬಿ ಪೊಲೀಸರು ಜಫ್ತಿ ಮಾಡಿದ್ದಾರೆ. ORIX AISL ಕಂಪನಿಯ ಜನರಲ್ ಮ್ಯಾನೇಜರ್ ಮೋಹಲ್ ವೇಲು ಎಂಬುವವರ ದೂರನ್ನ ಆಧರಿಸಿ ಆರೋಪಿಗಳ ಬಂಧಿಸಲಾಗಿದೆ. ಬಾಡಿಗೆಗೆ ಕಾರನ್ನ ಪಡೆದುಕೊಂಡು ಎಲ್ಲೋ ಬೋರ್ಡ್ ವೈಕಲ್​ನ್ನ, ವೈಟ್ ಬೋರ್ಡ್ ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ಮ್ಯಾನೇಜರ್ ಮೊದಲು ಬೈಯಪ್ಪನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಈ ಪ್ರಕರಣ ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು.

Published On - 8:40 am, Sun, 17 January 21

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್