AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ಕಾರ್ಯಾಚರಣೆ: ಕುಖ್ಯಾತ ಕಾರುಗಳ್ಳರ ಬಂಧನ, ಇವರು ಕದ್ದಿದ್ದು ಬರೋಬ್ಬರಿ 27 ಕಾರುಗಳು..!

ಬೆಂಗಳೂರಿನ ಗಿರೀಶ್ ಗೌಡ ಹಾಗೂ ಮೋಹನ್ ಬಂಧಿತ ಆರೋಪಿಗಳಾಗಿದ್ದು, ಈ ಖದೀಮರು ಹೈಫೈ ಕಾರುಗಳನ್ನೇ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಒಟ್ಟಾರೆ ಈ ಚಾಲಾಕಿಗಳು 27 ಕಾರುಗಳನ್ನ ಕಳ್ಳತನ ಮಾಡಿದ್ದರು.

CCB ಕಾರ್ಯಾಚರಣೆ: ಕುಖ್ಯಾತ ಕಾರುಗಳ್ಳರ ಬಂಧನ, ಇವರು ಕದ್ದಿದ್ದು ಬರೋಬ್ಬರಿ 27 ಕಾರುಗಳು..!
ಬಂಧಿತ ಕಾರುಗಳ್ಳರು
ಪೃಥ್ವಿಶಂಕರ
| Edited By: |

Updated on:Jan 17, 2021 | 11:28 AM

Share

ಬೆಂಗಳೂರು: ನಗರದಲ್ಲಿ ಕಾರುಗಳನ್ನ ಬಾಡಿಗೆಗೆ ಪಡೆದು ವಂಚಿಸುತ್ತಿದ್ದ ಇಬ್ಬರು ಖದೀಮರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಗಿರೀಶ್ ಗೌಡ ಹಾಗೂ ಮೋಹನ್ ಬಂಧಿತ ಆರೋಪಿಗಳಾಗಿದ್ದು, ಈ ಖದೀಮರು ಹೈಫೈ ಕಾರುಗಳನ್ನೇ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಒಟ್ಟಾರೆ ಈ ಚಾಲಾಕಿಗಳು 12 ಇನೋವಾ ಕ್ರಿಸ್ತಾ, ಮಾರುತಿ ಕಂಪನಿಯ 5 ಕಾರುಗಳು, ಹೊಂಡೈ ಕಂಪನಿಯ 4 ಕಾರುಗಳು, 3 ಟೊಯೋಟಾ ಫಾರ್ಚುನರ್, ಹೋಂಡಾ ಕಂಪನಿಯ 1 ಕಾರು, ನಿಸಾನ್ ಕಂಪನಿಯ 1 ಕಾರು ಹಾಗೂ ಟಾಟಾ ಕಂಪನಿಯ 1 ಕಾರು ಸೇರಿ ಒಟ್ಟು 27 ಕಾರುಗಳ ಕಳ್ಳತನ ಮಾಡಿದ್ದರು.

ಬಂಧಿತರಿಂದ ಲಕ್ಷಾಂತರ ಬೆಲೆಬಾಳುವ ಕಾರುಗಳು ಹಾಗೂ 75 ಗ್ರಾಂ ಚಿನ್ನಾಭರಣ, 2 ಬೆಲೆ ಬಾಳುವ ಮೊಬೈಲ್ ಫೋನ್, 6 ಲಕ್ಷ ನಗದನ್ನು ಸಿಸಿಬಿ ಪೊಲೀಸರು ಜಫ್ತಿ ಮಾಡಿದ್ದಾರೆ. ORIX AISL ಕಂಪನಿಯ ಜನರಲ್ ಮ್ಯಾನೇಜರ್ ಮೋಹಲ್ ವೇಲು ಎಂಬುವವರ ದೂರನ್ನ ಆಧರಿಸಿ ಆರೋಪಿಗಳ ಬಂಧಿಸಲಾಗಿದೆ. ಬಾಡಿಗೆಗೆ ಕಾರನ್ನ ಪಡೆದುಕೊಂಡು ಎಲ್ಲೋ ಬೋರ್ಡ್ ವೈಕಲ್​ನ್ನ, ವೈಟ್ ಬೋರ್ಡ್ ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ಮ್ಯಾನೇಜರ್ ಮೊದಲು ಬೈಯಪ್ಪನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಈ ಪ್ರಕರಣ ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು.

Published On - 8:40 am, Sun, 17 January 21

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ