AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ಕಾರ್ಯಾಚರಣೆ: ಕುಖ್ಯಾತ ಕಾರುಗಳ್ಳರ ಬಂಧನ, ಇವರು ಕದ್ದಿದ್ದು ಬರೋಬ್ಬರಿ 27 ಕಾರುಗಳು..!

ಬೆಂಗಳೂರಿನ ಗಿರೀಶ್ ಗೌಡ ಹಾಗೂ ಮೋಹನ್ ಬಂಧಿತ ಆರೋಪಿಗಳಾಗಿದ್ದು, ಈ ಖದೀಮರು ಹೈಫೈ ಕಾರುಗಳನ್ನೇ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಒಟ್ಟಾರೆ ಈ ಚಾಲಾಕಿಗಳು 27 ಕಾರುಗಳನ್ನ ಕಳ್ಳತನ ಮಾಡಿದ್ದರು.

CCB ಕಾರ್ಯಾಚರಣೆ: ಕುಖ್ಯಾತ ಕಾರುಗಳ್ಳರ ಬಂಧನ, ಇವರು ಕದ್ದಿದ್ದು ಬರೋಬ್ಬರಿ 27 ಕಾರುಗಳು..!
ಬಂಧಿತ ಕಾರುಗಳ್ಳರು
ಪೃಥ್ವಿಶಂಕರ
| Edited By: |

Updated on:Jan 17, 2021 | 11:28 AM

Share

ಬೆಂಗಳೂರು: ನಗರದಲ್ಲಿ ಕಾರುಗಳನ್ನ ಬಾಡಿಗೆಗೆ ಪಡೆದು ವಂಚಿಸುತ್ತಿದ್ದ ಇಬ್ಬರು ಖದೀಮರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಗಿರೀಶ್ ಗೌಡ ಹಾಗೂ ಮೋಹನ್ ಬಂಧಿತ ಆರೋಪಿಗಳಾಗಿದ್ದು, ಈ ಖದೀಮರು ಹೈಫೈ ಕಾರುಗಳನ್ನೇ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಒಟ್ಟಾರೆ ಈ ಚಾಲಾಕಿಗಳು 12 ಇನೋವಾ ಕ್ರಿಸ್ತಾ, ಮಾರುತಿ ಕಂಪನಿಯ 5 ಕಾರುಗಳು, ಹೊಂಡೈ ಕಂಪನಿಯ 4 ಕಾರುಗಳು, 3 ಟೊಯೋಟಾ ಫಾರ್ಚುನರ್, ಹೋಂಡಾ ಕಂಪನಿಯ 1 ಕಾರು, ನಿಸಾನ್ ಕಂಪನಿಯ 1 ಕಾರು ಹಾಗೂ ಟಾಟಾ ಕಂಪನಿಯ 1 ಕಾರು ಸೇರಿ ಒಟ್ಟು 27 ಕಾರುಗಳ ಕಳ್ಳತನ ಮಾಡಿದ್ದರು.

ಬಂಧಿತರಿಂದ ಲಕ್ಷಾಂತರ ಬೆಲೆಬಾಳುವ ಕಾರುಗಳು ಹಾಗೂ 75 ಗ್ರಾಂ ಚಿನ್ನಾಭರಣ, 2 ಬೆಲೆ ಬಾಳುವ ಮೊಬೈಲ್ ಫೋನ್, 6 ಲಕ್ಷ ನಗದನ್ನು ಸಿಸಿಬಿ ಪೊಲೀಸರು ಜಫ್ತಿ ಮಾಡಿದ್ದಾರೆ. ORIX AISL ಕಂಪನಿಯ ಜನರಲ್ ಮ್ಯಾನೇಜರ್ ಮೋಹಲ್ ವೇಲು ಎಂಬುವವರ ದೂರನ್ನ ಆಧರಿಸಿ ಆರೋಪಿಗಳ ಬಂಧಿಸಲಾಗಿದೆ. ಬಾಡಿಗೆಗೆ ಕಾರನ್ನ ಪಡೆದುಕೊಂಡು ಎಲ್ಲೋ ಬೋರ್ಡ್ ವೈಕಲ್​ನ್ನ, ವೈಟ್ ಬೋರ್ಡ್ ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ಮ್ಯಾನೇಜರ್ ಮೊದಲು ಬೈಯಪ್ಪನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಈ ಪ್ರಕರಣ ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು.

Published On - 8:40 am, Sun, 17 January 21

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!