AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಎರಡು ಕಡೆ ಸಿಸಿಬಿ ದಾಳಿ; ವೇಶ್ಯಾವಾಟಿಕೆ, ಬೆಟ್ಟಿಂಗ್​ ದಂಧೆಗೆ ಬ್ರೇಕ್

ರಾಮಮೂರ್ತಿನಗರದಲ್ಲಿ ವಿದೇಶಿಗರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ಸಿಸಿಬಿ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ. ಈ ವೇಳೆ ನಾಲ್ವರು ವಿದೇಶಿ ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.

ಬೆಂಗಳೂರಲ್ಲಿ ಎರಡು ಕಡೆ ಸಿಸಿಬಿ ದಾಳಿ; ವೇಶ್ಯಾವಾಟಿಕೆ, ಬೆಟ್ಟಿಂಗ್​ ದಂಧೆಗೆ ಬ್ರೇಕ್
ಕೇಂದ್ರ ಅಪರಾಧ ವಿಭಾಗ
ರಾಜೇಶ್ ದುಗ್ಗುಮನೆ
| Edited By: |

Updated on: Dec 09, 2020 | 3:31 PM

Share

ಬೆಂಗಳೂರು: ನಗರದಲ್ಲಿ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಮಂಗಳವಾರ ಎರಡು ಕಡೆ ಪ್ರತ್ಯೇಕ ದಾಳಿ ನಡೆಸಿದೆ. ಒಂದು ಕಡೆ ವೇಶ್ಯಾವಾಟಿಕೆ ನಡೆಸುತ್ತಿದ್ದ ದಂಧೆ ಮಟ್ಟ ಹಾಕಲಾಗಿದ್ದು, ಮತ್ತೊಂದೆಡೆ ಬೆಟ್ಟಿಂಗ್​ ದಂಧೆ ನಡೆಸುತ್ತಿದ್ದವರಿಗೆ ಬಿಸಿ ಮುಟ್ಟಿಸಲಾಗಿದೆ.

ಬೆಂಗಳೂರು ಜಂಟಿ ಪೊಲೀಸ್​ ಆಯುಕ್ತ ಸಂದೀಪ್ ಪಾಟೀಲ್​ ಈ ಬಗ್ಗೆ ಟ್ವೀಟ್​ ಮಾಡಿ ಮಾಹಿತಿ ನೀಡಿದ್ದಾರೆ. ರಾಮಮೂರ್ತಿ ನಗರದಲ್ಲಿ ವಿದೇಶಿಗರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಸಿಸಿಬಿಗೆ ಖಚಿತ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ. ಈ ವೇಳೆ ನಾಲ್ವರು ವಿದೇಶಿ ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಬೆಟ್ಟಿಂಗ್​ ದಂಧೆಗೆ ಬ್ರೇಕ್​: ಇನ್ನು, ನಿನ್ನೆ ಆಸ್ಟ್ರೇಲಿಯಾ ಹಾಗೂ ಭಾರತದ ನಡುವೆ ಅಂತಿಮ ಟಿ-20 ಪಂದ್ಯ ನಡೆದಿತ್ತು. ಈ ಪಂದ್ಯಕ್ಕೆ ಬೆಟ್ಟಿಂಗ್​ ಕಟ್ಟುತ್ತಿದ್ದ ದಂಧೆಯನ್ನು ಕೂಡ ಸಿಸಿಬಿ ಮಟ್ಟ ಹಾಕಿದೆ. ಬೆಂಗಳೂರಿನಲ್ಲಿ ನಿನ್ನೆ ದೊಡ್ಡ ಮಟ್ಟದಲ್ಲಿ ಬೆಟ್ಟಿಂಗ್​ ನಡೆಯುತ್ತಿತ್ತು. ಈ ವೇಳೆ ದಾಳಿ ನಡೆಸಿದ ಸಿಸಿಬಿ, ₹ 4.5 ಲಕ್ಷ ರೂಪಾಯಿ ವಶಕ್ಕೆ ಪಡೆದಿದೆ.

ಒಂದೇ ದಿನ 21 ಜನರ ಬಂಧನ: ಬೆಂಗಳೂರಿನಲ್ಲಿ ಆಗಸ್ಟ್​ 30ರಂದು ಜೂಜಾಡುತ್ತಿದ್ದವರ ಮೇಲೆ ಮೇಲೆ ಸಿಸಿಬಿ ದಾಳಿ ನಡೆಸಿ 21 ಜನರು ಬಂಧಿಸಿತ್ತು. ಅಲ್ಲದೆ, ದೊಡ್ಡ ಪ್ರಮಾಣದಲ್ಲಿ ಹಣ ಕೂಡ ಜಪ್ತಿ ಮಾಡಲಾಗಿತ್ತು. ಈ ದಾಳಿ ವೇಳೆ ಮನೆಯ ಮಾಲೀಕ ಕೂಡ ಅರೆಸ್ಟ್​ ಆಗಿದ್ದ.

ಸಿಸಿಬಿ ವಿಚಾರಣೆ ವೇಳೆ ಬಯಲಾಯ್ತು ಹ್ಯಾ”ಕಿಂಗ್” ಶ್ರೀಕಿಯ ಮತ್ತೊಂದು ಕೋಡ್..

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ