AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಎರಡು ಕಡೆ ಸಿಸಿಬಿ ದಾಳಿ; ವೇಶ್ಯಾವಾಟಿಕೆ, ಬೆಟ್ಟಿಂಗ್​ ದಂಧೆಗೆ ಬ್ರೇಕ್

ರಾಮಮೂರ್ತಿನಗರದಲ್ಲಿ ವಿದೇಶಿಗರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ಸಿಸಿಬಿ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ. ಈ ವೇಳೆ ನಾಲ್ವರು ವಿದೇಶಿ ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.

ಬೆಂಗಳೂರಲ್ಲಿ ಎರಡು ಕಡೆ ಸಿಸಿಬಿ ದಾಳಿ; ವೇಶ್ಯಾವಾಟಿಕೆ, ಬೆಟ್ಟಿಂಗ್​ ದಂಧೆಗೆ ಬ್ರೇಕ್
ಕೇಂದ್ರ ಅಪರಾಧ ವಿಭಾಗ
ರಾಜೇಶ್ ದುಗ್ಗುಮನೆ
| Edited By: |

Updated on: Dec 09, 2020 | 3:31 PM

Share

ಬೆಂಗಳೂರು: ನಗರದಲ್ಲಿ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಮಂಗಳವಾರ ಎರಡು ಕಡೆ ಪ್ರತ್ಯೇಕ ದಾಳಿ ನಡೆಸಿದೆ. ಒಂದು ಕಡೆ ವೇಶ್ಯಾವಾಟಿಕೆ ನಡೆಸುತ್ತಿದ್ದ ದಂಧೆ ಮಟ್ಟ ಹಾಕಲಾಗಿದ್ದು, ಮತ್ತೊಂದೆಡೆ ಬೆಟ್ಟಿಂಗ್​ ದಂಧೆ ನಡೆಸುತ್ತಿದ್ದವರಿಗೆ ಬಿಸಿ ಮುಟ್ಟಿಸಲಾಗಿದೆ.

ಬೆಂಗಳೂರು ಜಂಟಿ ಪೊಲೀಸ್​ ಆಯುಕ್ತ ಸಂದೀಪ್ ಪಾಟೀಲ್​ ಈ ಬಗ್ಗೆ ಟ್ವೀಟ್​ ಮಾಡಿ ಮಾಹಿತಿ ನೀಡಿದ್ದಾರೆ. ರಾಮಮೂರ್ತಿ ನಗರದಲ್ಲಿ ವಿದೇಶಿಗರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಸಿಸಿಬಿಗೆ ಖಚಿತ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ. ಈ ವೇಳೆ ನಾಲ್ವರು ವಿದೇಶಿ ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಬೆಟ್ಟಿಂಗ್​ ದಂಧೆಗೆ ಬ್ರೇಕ್​: ಇನ್ನು, ನಿನ್ನೆ ಆಸ್ಟ್ರೇಲಿಯಾ ಹಾಗೂ ಭಾರತದ ನಡುವೆ ಅಂತಿಮ ಟಿ-20 ಪಂದ್ಯ ನಡೆದಿತ್ತು. ಈ ಪಂದ್ಯಕ್ಕೆ ಬೆಟ್ಟಿಂಗ್​ ಕಟ್ಟುತ್ತಿದ್ದ ದಂಧೆಯನ್ನು ಕೂಡ ಸಿಸಿಬಿ ಮಟ್ಟ ಹಾಕಿದೆ. ಬೆಂಗಳೂರಿನಲ್ಲಿ ನಿನ್ನೆ ದೊಡ್ಡ ಮಟ್ಟದಲ್ಲಿ ಬೆಟ್ಟಿಂಗ್​ ನಡೆಯುತ್ತಿತ್ತು. ಈ ವೇಳೆ ದಾಳಿ ನಡೆಸಿದ ಸಿಸಿಬಿ, ₹ 4.5 ಲಕ್ಷ ರೂಪಾಯಿ ವಶಕ್ಕೆ ಪಡೆದಿದೆ.

ಒಂದೇ ದಿನ 21 ಜನರ ಬಂಧನ: ಬೆಂಗಳೂರಿನಲ್ಲಿ ಆಗಸ್ಟ್​ 30ರಂದು ಜೂಜಾಡುತ್ತಿದ್ದವರ ಮೇಲೆ ಮೇಲೆ ಸಿಸಿಬಿ ದಾಳಿ ನಡೆಸಿ 21 ಜನರು ಬಂಧಿಸಿತ್ತು. ಅಲ್ಲದೆ, ದೊಡ್ಡ ಪ್ರಮಾಣದಲ್ಲಿ ಹಣ ಕೂಡ ಜಪ್ತಿ ಮಾಡಲಾಗಿತ್ತು. ಈ ದಾಳಿ ವೇಳೆ ಮನೆಯ ಮಾಲೀಕ ಕೂಡ ಅರೆಸ್ಟ್​ ಆಗಿದ್ದ.

ಸಿಸಿಬಿ ವಿಚಾರಣೆ ವೇಳೆ ಬಯಲಾಯ್ತು ಹ್ಯಾ”ಕಿಂಗ್” ಶ್ರೀಕಿಯ ಮತ್ತೊಂದು ಕೋಡ್..

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್