AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಎರಡು ಕಡೆ ಸಿಸಿಬಿ ದಾಳಿ; ವೇಶ್ಯಾವಾಟಿಕೆ, ಬೆಟ್ಟಿಂಗ್​ ದಂಧೆಗೆ ಬ್ರೇಕ್

ರಾಮಮೂರ್ತಿನಗರದಲ್ಲಿ ವಿದೇಶಿಗರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ಸಿಸಿಬಿ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ. ಈ ವೇಳೆ ನಾಲ್ವರು ವಿದೇಶಿ ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.

ಬೆಂಗಳೂರಲ್ಲಿ ಎರಡು ಕಡೆ ಸಿಸಿಬಿ ದಾಳಿ; ವೇಶ್ಯಾವಾಟಿಕೆ, ಬೆಟ್ಟಿಂಗ್​ ದಂಧೆಗೆ ಬ್ರೇಕ್
ಕೇಂದ್ರ ಅಪರಾಧ ವಿಭಾಗ
ರಾಜೇಶ್ ದುಗ್ಗುಮನೆ
| Edited By: |

Updated on: Dec 09, 2020 | 3:31 PM

Share

ಬೆಂಗಳೂರು: ನಗರದಲ್ಲಿ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಮಂಗಳವಾರ ಎರಡು ಕಡೆ ಪ್ರತ್ಯೇಕ ದಾಳಿ ನಡೆಸಿದೆ. ಒಂದು ಕಡೆ ವೇಶ್ಯಾವಾಟಿಕೆ ನಡೆಸುತ್ತಿದ್ದ ದಂಧೆ ಮಟ್ಟ ಹಾಕಲಾಗಿದ್ದು, ಮತ್ತೊಂದೆಡೆ ಬೆಟ್ಟಿಂಗ್​ ದಂಧೆ ನಡೆಸುತ್ತಿದ್ದವರಿಗೆ ಬಿಸಿ ಮುಟ್ಟಿಸಲಾಗಿದೆ.

ಬೆಂಗಳೂರು ಜಂಟಿ ಪೊಲೀಸ್​ ಆಯುಕ್ತ ಸಂದೀಪ್ ಪಾಟೀಲ್​ ಈ ಬಗ್ಗೆ ಟ್ವೀಟ್​ ಮಾಡಿ ಮಾಹಿತಿ ನೀಡಿದ್ದಾರೆ. ರಾಮಮೂರ್ತಿ ನಗರದಲ್ಲಿ ವಿದೇಶಿಗರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಸಿಸಿಬಿಗೆ ಖಚಿತ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ. ಈ ವೇಳೆ ನಾಲ್ವರು ವಿದೇಶಿ ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಬೆಟ್ಟಿಂಗ್​ ದಂಧೆಗೆ ಬ್ರೇಕ್​: ಇನ್ನು, ನಿನ್ನೆ ಆಸ್ಟ್ರೇಲಿಯಾ ಹಾಗೂ ಭಾರತದ ನಡುವೆ ಅಂತಿಮ ಟಿ-20 ಪಂದ್ಯ ನಡೆದಿತ್ತು. ಈ ಪಂದ್ಯಕ್ಕೆ ಬೆಟ್ಟಿಂಗ್​ ಕಟ್ಟುತ್ತಿದ್ದ ದಂಧೆಯನ್ನು ಕೂಡ ಸಿಸಿಬಿ ಮಟ್ಟ ಹಾಕಿದೆ. ಬೆಂಗಳೂರಿನಲ್ಲಿ ನಿನ್ನೆ ದೊಡ್ಡ ಮಟ್ಟದಲ್ಲಿ ಬೆಟ್ಟಿಂಗ್​ ನಡೆಯುತ್ತಿತ್ತು. ಈ ವೇಳೆ ದಾಳಿ ನಡೆಸಿದ ಸಿಸಿಬಿ, ₹ 4.5 ಲಕ್ಷ ರೂಪಾಯಿ ವಶಕ್ಕೆ ಪಡೆದಿದೆ.

ಒಂದೇ ದಿನ 21 ಜನರ ಬಂಧನ: ಬೆಂಗಳೂರಿನಲ್ಲಿ ಆಗಸ್ಟ್​ 30ರಂದು ಜೂಜಾಡುತ್ತಿದ್ದವರ ಮೇಲೆ ಮೇಲೆ ಸಿಸಿಬಿ ದಾಳಿ ನಡೆಸಿ 21 ಜನರು ಬಂಧಿಸಿತ್ತು. ಅಲ್ಲದೆ, ದೊಡ್ಡ ಪ್ರಮಾಣದಲ್ಲಿ ಹಣ ಕೂಡ ಜಪ್ತಿ ಮಾಡಲಾಗಿತ್ತು. ಈ ದಾಳಿ ವೇಳೆ ಮನೆಯ ಮಾಲೀಕ ಕೂಡ ಅರೆಸ್ಟ್​ ಆಗಿದ್ದ.

ಸಿಸಿಬಿ ವಿಚಾರಣೆ ವೇಳೆ ಬಯಲಾಯ್ತು ಹ್ಯಾ”ಕಿಂಗ್” ಶ್ರೀಕಿಯ ಮತ್ತೊಂದು ಕೋಡ್..

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!