AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟೋರಿಯಸ್ ರೌಡಿಶೀಟರ್ ಮೇಲೆ ಎಫ್ಐಆರ್ ದಾಖಲು‌, ಏನವನ ಒಳ ಮಸಲತ್ತು?

Parappana Aghrahara Jail: ಜೈಲಿನಲ್ಲಿ ಸಿಕ್ಕ ಮಾದಕ ವಸ್ತು, ರಾಡ್, ಚಾಕು ಮಾರಕಾಸ್ತ್ರಗಳು, ಮೊಬೈಲ್ ಫೋನ್ ಪತ್ತೆಯಾದ್ದರ ಬಗ್ಗೆ ತನಿಖೆ ನಡೆದಿದೆ. ಸಿಸಿಬಿ ಅಧಿಕಾರಿಗಳು ಸಿಮ್ ಕಾರ್ಡ್​ಗಳು, ನಗದು ವಶಪಡಿಸಿಕೊಂಡಿದ್ದರು. ಇದರ ಬಗ್ಗೆ ತನಿಖೆ ನಡೆಸಬೇಕೆಂದು ಇದೀಗ ದೂರು ದಾಖಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟೋರಿಯಸ್ ರೌಡಿಶೀಟರ್ ಮೇಲೆ ಎಫ್ಐಆರ್ ದಾಖಲು‌, ಏನವನ ಒಳ ಮಸಲತ್ತು?
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟೋರಿಯಸ್ ರೌಡಿಶೀಟರ್ ಮೇಲೆ ಎಫ್ಐಆರ್ ದಾಖಲು‌, ಏನವನ ಒಳ ಮಸಲತ್ತು?
TV9 Web
| Edited By: ಸಾಧು ಶ್ರೀನಾಥ್​|

Updated on: Jul 12, 2021 | 10:14 AM

Share

ಬೆಂಗಳೂರು: ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಮೇರೆ ಮೀರುತ್ತಿದ್ದ ಹಿನ್ನೆಲೆ ರಾಜಧಾನಿ ಪೊಲೀಸರು ಕಳೆದ ವಾರಾಂತ್ಯ ಇಡೀ ಬೆಂಗಳೂರಿನಲ್ಲಿ ರೌಡಿಗಳಿಗೆ ಚಳಿ ಇಡಿಸಿದ್ದರು. ರೌಡಿಗಳಿಗಂತೂ ನಿಂತ ನಿಲುವಿನಲ್ಲೇ ಹಿರಿಯ ಪೊಲೀಸ್​ ಅಧಿಕಾರಿಗಳೇ ಥಂಡಾ ಹೊಡೆಸಿದ್ದರು. ನೂರಿನ್ನೂರು ಅಲ್ಲ; ಸಾವಿರಾರು ರೌಡಿಗಳನ್ನು ಡ್ರಿಲ್​ ಮಾಡಿಸಿದ್ದರು. ಅಷ್ಟೇ ಸಾಲದು ಅಂತಾ ಪರಪ್ಪನ ಅಗ್ರಹಾರ ಜೈಲಿಗೂ ಸಿಸಿಬಿ ಅಧಿಕಾರಿಗಳು ಎಟ್ರಿ ಕೊಟ್ಟು, ದಾಳಿ ನಡೆಸಿದ್ದರು. ಅಲ್ಲಿದ್ದಿ ಇನ್​ ಹೌಸ್​ ರೌಡಿಗಳಿಗೆ ಸರಿಯಾಗಿ ವಿಚಾರಿಸಿಕೊಂಡಿದ್ದರು. ಜೈಲಿನಲ್ಲೇ ಇದ್ದುಕೊಂಡು ರೌಡಿಗಳು ಕಾರುಬಾರು ನಡೆಸಿದ್ದರು. ಅದೆಲ್ಲ ದಾಳಿ ವೇಳೆ ಬಟಾಬಯಲಾಗಿತ್ತು.

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ ಪ್ರಕರಣದಲ್ಲಿ ಇಂದು ಜೈಲಿನಲ್ಲಿರುವ ನಟೋರಿಯಸ್ ರೌಡಿಶೀಟರ್ ಮೇಲೆ ಎಫ್​ಐಆರ್​ (FIR) ದಾಖಲಿಸಲಾಗಿದೆ. ಜೈಲಿನಲ್ಲಿದ್ದುಕೊಂಡೇ ಬಾಂಬೆ ಸಲೀಂ ಎಂಬ ಕುಖ್ಯಾತ ಅಕ್ರಮ‌ ದಂಧೆ ನಡೆಸುತ್ತಿದ್ದನಂತೆ. ಇವನ ವಿರುದ್ಧ ಸಿಸಿಬಿ ಇನ್ಸ್​ಪೆಕ್ಟರ್ ದೀಪಕ್ ಅವರು ನೀಡಿದ ದೂರಿನ ಮೇರೆಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲು ಮಾಡಿಕೊಳ್ಳಲಾಗಿದೆ.

ಜೈಲಿನಲ್ಲಿ ಸಿಕ್ಕ ಮಾದಕ ವಸ್ತು, ರಾಡ್, ಚಾಕು ಮಾರಕಾಸ್ತ್ರಗಳು, ಮೊಬೈಲ್ ಫೋನ್ ಪತ್ತೆಯಾದ್ದರ ಬಗ್ಗೆ ತನಿಖೆ ನಡೆದಿದೆ. ಸಿಸಿಬಿ ಅಧಿಕಾರಿಗಳು ಸಿಮ್ ಕಾರ್ಡ್​ಗಳು, ನಗದು ವಶಪಡಿಸಿಕೊಂಡಿದ್ದರು. ಇದರ ಬಗ್ಗೆ ತನಿಖೆ ನಡೆಸಬೇಕೆಂದು ಇದೀಗ ದೂರು ದಾಖಲಾಗಿದೆ.

ಬೆಂಗಳೂರಿನಲ್ಲಿ 1,500 ರೌಡಿಗಳು ಪೊಲೀಸರ ವಶಕ್ಕೆ; 2 ಸಾವಿರ ರೌಡಿ ಶೀಟರ್ಸ್ ಮನೆ ಮೇಲೆ ದಾಳಿ

CCB raid on parappana aghrahara jail fir lodged against notorious rowdy sheeter bombay saleem 11

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟೋರಿಯಸ್ ರೌಡಿಶೀಟರ್ ಮೇಲೆ ಎಫ್ಐಆರ್ ದಾಖಲು‌, ಏನವನ ಒಳ ಮಸಲತ್ತು?

(CCB raid on parappana aghrahara jail fir lodged against notorious rowdy sheeter bombay saleem)

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​