AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈಗೆ ಚಾಕು ಇರಿದು ಮಾಂಗಲ್ಯ ಸರ ಕದ್ದ ಖದೀಮರು, ಎಲ್ಲಿ?

ಚಿತ್ರದುರ್ಗ: ಮಹಿಳೆ ಕೈಗೆ ಚಾಕು ಇರಿದು ಮಾಂಗಲ್ಯ ಸರ ದರೋಡೆ ಮಾಡಿರುವ ಘಟನೆ ಚಳ್ಳಕೆರೆ ತಾಲೂಕಿನ ಕರೀಕೆರೆ ಗ್ರಾಮದ‌ ಬಳಿ ನಡೆದಿದೆ. ಬೈಕ್​ನಲ್ಲಿ ಬಂದಿದ್ದ ಇಬ್ಬರು ಕಳ್ಳರು ಮಹಿಳೆ ಕೈಗೆ ಚಾಕು ಇರಿದು ದರೋಡೆ ಮಾಡಿ ವರಲಕ್ಷ್ಮೀ ಬಳಿ ₹1.40 ಲಕ್ಷ ಮೌಲ್ಯದ 45 ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ. ಪತಿ ಶಿವಣ್ಣ ಜತೆ ಬೈಕ್​ನಲ್ಲಿ ಗ್ರಾಮಕ್ಕೆ ಮರಳುವಾಗ ಈ ಕೃತ್ಯ ನಡೆದಿದೆ. ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ವರಲಕ್ಷ್ಮೀ ದಾಖಲಾಗಿದ್ದು, ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಕೈಗೆ ಚಾಕು ಇರಿದು ಮಾಂಗಲ್ಯ ಸರ ಕದ್ದ ಖದೀಮರು, ಎಲ್ಲಿ?
ಆಯೇಷಾ ಬಾನು
|

Updated on: Oct 03, 2020 | 7:19 AM

Share

ಚಿತ್ರದುರ್ಗ: ಮಹಿಳೆ ಕೈಗೆ ಚಾಕು ಇರಿದು ಮಾಂಗಲ್ಯ ಸರ ದರೋಡೆ ಮಾಡಿರುವ ಘಟನೆ ಚಳ್ಳಕೆರೆ ತಾಲೂಕಿನ ಕರೀಕೆರೆ ಗ್ರಾಮದ‌ ಬಳಿ ನಡೆದಿದೆ.

ಬೈಕ್​ನಲ್ಲಿ ಬಂದಿದ್ದ ಇಬ್ಬರು ಕಳ್ಳರು ಮಹಿಳೆ ಕೈಗೆ ಚಾಕು ಇರಿದು ದರೋಡೆ ಮಾಡಿ ವರಲಕ್ಷ್ಮೀ ಬಳಿ ₹1.40 ಲಕ್ಷ ಮೌಲ್ಯದ 45 ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ. ಪತಿ ಶಿವಣ್ಣ ಜತೆ ಬೈಕ್​ನಲ್ಲಿ ಗ್ರಾಮಕ್ಕೆ ಮರಳುವಾಗ ಈ ಕೃತ್ಯ ನಡೆದಿದೆ. ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ವರಲಕ್ಷ್ಮೀ ದಾಖಲಾಗಿದ್ದು, ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.