AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳ ಬೇಟೆಯಾಡುವ ವಿಚಾರ ಪೊಲೀಸರಿಗೆ ತಿಳಿಸುವುದಾಗಿ ಧಮ್ಕಿ: ಕಂಠಪೂರ್ತಿ ಕುಡಿಸಿ ಸ್ನೇಹಿತನ ಹೆಣ ಕೆಡವಿದ ಗೆಳೆಯ

ಗೆಳೆಯನೊಂದಿಗೆ ಹೋದವನು ಹೆಣವಾದ ಘಟನೆಯೊಂದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸುರಪುರದಲ್ಲಿ ನಡೆದಿದೆ. ಮದ್ಯ ಕುಡಿಸಿ, ರಾಡಿನಿಂದ ತಲೆಗೆ ಹೊಡೆದು ಹತ್ಯೆಗೈದು ಬಳಿಕ ಆರೋಪಿ ತಾನೇ ಪೊಲೀಸ್​​​ ಠಾಣೆಗೆ ಬಂದು ಶರಣಾಗಿದ್ದಾನೆ. ಮಾಂಬಳ್ಳಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.

ಕಳ್ಳ ಬೇಟೆಯಾಡುವ ವಿಚಾರ ಪೊಲೀಸರಿಗೆ ತಿಳಿಸುವುದಾಗಿ ಧಮ್ಕಿ: ಕಂಠಪೂರ್ತಿ ಕುಡಿಸಿ ಸ್ನೇಹಿತನ ಹೆಣ ಕೆಡವಿದ ಗೆಳೆಯ
ಮಲ್ಲಿಕಾರ್ಜುನ, ರಾಮಕೃಷ್ಣ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Apr 20, 2026 | 9:07 PM

Share

ಚಾಮರಾಜನಗರ, ಏಪ್ರಿಲ್​​ 20: ಆತ ಕೂಲಿ ಮಾಡಿಕೊಂಡು ಇದ್ದ. ಆತನ ಸ್ನೇಹಿತರು ಕಳ್ಳಬೇಟೆ ವಿಚಾರವನ್ನು ಪೊಲೀಸರಿಗೆ ತಿಳಿಸುವುದಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದ. ಇದರಿಂದ ರೊಚ್ಚಿಗೆದ್ದ ಇನ್ನೊಬ್ಬ ಸ್ನೇಹಿತ ಕಂಠಪೂರ್ತಿ ಕುಡಿಸಿ ಬಳಿಕ ರಾಡಿನಿಂದ ಹೊಡೆದು ಹತ್ಯೆ (Murder) ಮಾಡಿದ್ದಾನೆ. ಚಾಮರಾಜನಗರ (chamarajanagar) ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸುರಪುರದಲ್ಲಿ ಘಟನೆ ನಡೆದಿದೆ. ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ಕುಣಗಳ್ಳಿ ಗ್ರಾಮದ ಕಳ್ಳ ಬೇಟೆಗಾರ ಮಲ್ಲಿಕಾರ್ಜುನ ಎಂಬಾತ ತನ್ನ ಸ್ನೇಹಿತ ರಾಮಕೃಷ್ಣ ಎಂಬಾತನನ್ನು ಪಾರ್ಟಿ ಹೆಸರಲ್ಲಿ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಚೆನ್ನಾಗಿ ಕುಡಿಸಿ, ಊಟ ಮಾಡಿಸಿದ ಬಳಿಕ ಅಸಲಿ ಆಟ ಶುರು ಮಾಡಿದ್ದಾನೆ. “ನನ್ನ ಕಳ್ಳ ಬೇಟೆಯ ಮಾಹಿತಿಯನ್ನ ಪೊಲೀಸರಿಗೆ ಯಾಕೆ ಹೇಳುತ್ತಿದ್ದಿಯಾ?” ಎಂದು ಜಗಳ ತೆಗೆದಿದ್ದಾನೆ.

ಇದನ್ನೂ ಓದಿ: ಕಲಬುರಗಿಯಲ್ಲಿ ಗುಂಡಿನ ಸದ್ದು: ಫೈರಿಂಗ್​ ಮಾಡಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ

ಮೊದಲೇ ಸಂಚು ರೂಪಿಸಿದ್ದ ಮಲ್ಲಿಕಾರ್ಜುನ, ಕಬ್ಬಿಣದ ರಾಡಿನಿಂದ ರಾಮಕೃಷ್ಣನ ತಲೆಗೆ ಹೊಡೆದು ಸಾಯಿಸಿದ್ದಾನೆ. ವಿಶೇಷ ಅಂದ್ರೆ, ಕೊಲೆ ಮಾಡಿದ ಬಳಿಕ ಎರಡು ಗಂಟೆ ಕಾಲ ಹೆಣದ ಬಳಿಯೇ ಕುಳಿತಿದ್ದ ಆತ, ಸಾವು ಖಚಿತವಾದ ಮೇಲೆ ತಾನೇ ನೇರವಾಗಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.

ಹೊಂಚು ಹಾಕಿ ಸ್ನೇಹಿತನ ಕೊಲೆ

ಈ ಹಿಂದೆ ಎರಡು ಬಾರಿ ಕಳ್ಳ ಬೇಟೆಗಾಗಿ ಅಕ್ರಮ ನಾಡ ಬಂದೂಕು ಹೊಂದಿರುವ ಪ್ರಕರಣ ದಾಖಲಾಗಿತ್ತು. ಆ ಮಾಹಿತಿಯನ್ನ ಈತನೇ ಪೊಲೀಸರಿಗೆ ನೀಡಿದ್ದಾನೆ ಎಂದು ಖಚಿತ ಪಡೆಸಿಕೊಂಡಿದ್ದ ಮಲ್ಲಿಕಾರ್ಜುನ್, ಇವನನ್ನು ಮುಗಿಸಲೇಬೇಕು ಎಂದು ದೃಢ ನಿರ್ಧಾರ ಮಾಡಿ, ಹೊಂಚು ಹಾಕಿ ನಿನ್ನೆ ಬೆಳಗ್ಗೆಯಿಂದ ಸಂಜೆಯವರೆಗೂ ಕಾದು, ಕೆಲಸ ಮುಗಿದ ಮೇಲೆ ರಾಮಕೃಷ್ಣನ ಮನೆಗೆ ಬಂದು ಪಾರ್ಟಿಗೆ ಹೋಗೋಣ ಎಂದು ಕರೆದುಕೊಂಡು ಹೋಗಿ ಗ್ರಾಮದ ಹೊರವಲಯದಲ್ಲಿ ಕೊಲೆ ಮಾಡಿದ್ದಾನೆ.

ನಾಲ್ಕೈದು ಜನರಿಂದ ಕೊಲೆ: ಕುಟುಂಬಸ್ಥರು ಆರೋಪ

ಇತ್ತ ಕುಟುಂಬಕ್ಕೆ ಆಧಾರವಾಗಿದ್ದ ವ್ಯಕ್ತಿಯನ್ನು ಕಳೆದುಕೊಂಡ ಕುಟುಂಬಸ್ಥರು ಗೋಳಾಡಿದ್ದಾರೆ. ಈ ಕೊಲೆಯನ್ನು ಒಬ್ಬರು‌ ಮಾಡಲು ಸಾಧ್ಯವಿಲ್ಲ, ನಾಲ್ಕೈದು ಜನ ಸೇರಿ‌ ಮಾಡಿದ್ದಾರೆ. ಸೂಕ್ತ ತನಿಖೆ ಮಾಡಿ ನಮಗೆ ನ್ಯಾಯ ದೊರಕಿಸಿ ಕೊಡಬೇಕೆಂದು ಒತ್ತಾಯಿಸಿದ್ದಾರೆ. ಇದರ ಹಿಂದೆ ಬೇರೆಯವರ ಕೈವಾಡವಿದೆ, ಸೂಕ್ತ‌ ತನಿಖೆಯಾಗಿ ಎಲ್ಲರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: 2ನೇ ಮದುವೆ ತಯಾರಿಯಲ್ಲಿದ್ದ ವೈದ್ಯನ ಭೀಕರ ಕೊಲೆ: ವಿವಾಹದ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಸೂತಕ!

ಇನ್ನು ಸುದ್ದಿ ತಿಳಿದ ಎಸ್​​ಪಿ ಮುತ್ತುರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಶ್ವಾನದಳ ತರಿಸಿ ತಪಾಸಣೆ ನಡೆಸಿ ತನಿಖೆ ಕೈಗೊಂಡಿದ್ದಾರೆ. ಮಾಂಬಳ್ಳಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಶವವನ್ನು ಚಾಮರಾಜನಗರದ ಸಿಮ್ಸ್ ಆಸ್ವತ್ರೆಗೆ ರವಾನಿಸಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ
ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?
ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ 'ಕೂಲ್' ಟ್ರೀಟ್ಮೆಂಟ್!
ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ 'ಕೂಲ್' ಟ್ರೀಟ್ಮೆಂಟ್!