ಚಾಮರಾಜನಗರ: ಕಲ್ಲು ಎತ್ತಿ ಹಾಕಿ ಪತ್ನಿಯನ್ನು ಕೊಂದು, ತಾನು ನೇಣಿಗೆ ಶರಣಾದ ಪತಿ

ಜಿಲ್ಲೆಯ ಹನೂರು ತಾಲೂಕಿನ ನಾಗಮಲೆಯಲ್ಲಿ ಮದುವೆಯಾಗಿ ಪತಿಯನ್ನ ಬಿಟ್ಟು ಪರಪುರುಷನ ಜೊತೆ ವಾಸಿಸುತ್ತಿದ್ದ ಪತ್ನಿಯನ್ನ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಬಳಿಕ ತಾನು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಚಾಮರಾಜನಗರ: ಕಲ್ಲು ಎತ್ತಿ ಹಾಕಿ ಪತ್ನಿಯನ್ನು ಕೊಂದು, ತಾನು ನೇಣಿಗೆ ಶರಣಾದ ಪತಿ
ಸಾಂದರ್ಭಿಕ ಚಿತ್ರ
Edited By: ಕಿರಣ್ ಹನುಮಂತ್​ ಮಾದಾರ್

Updated on: Feb 22, 2023 | 4:08 PM

ಚಾಮರಾಜನಗರ: ಕಲ್ಲು ಎತ್ತಿ ಹಾಕಿ ಪತ್ನಿಯನ್ನು ಹತ್ಯೆಗೈದು ಬಳಿಕ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮಹದೇಶ್ವರಬೆಟ್ಟ ಸಮೀಪದ ನಾಗಮಲೆಯಲ್ಲಿ ನಡೆದಿದೆ. ಪತಿಯನ್ನು ಬಿಟ್ಟು ಬಂದು ಪರಪುರುಷನೊಂದಿಗೆ ನಾಗಮಲೆಯಲ್ಲಿ ವಾಸವಾಗಿದ್ದ ಲಕ್ಷ್ಮಿ, ಇದರಿಂದ ಬೇಸತ್ತ ಪತಿ ಮುನಿರಾಜ್‌ ಪತ್ನಿ‌ಯನ್ನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಬಳಿಕ ಆಕೆಯ ರಕ್ತಸಿಕ್ತ ದೇಹದ ವಿಡಿಯೋ ಮಾಡಿ ತನ್ನ ವಾಟ್ಸಪ್ ಸ್ಟೇಟಸ್‌ಗೆ ಹಾಕಿಕೊಂಡು ತಾನೂ ಆತಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಮಹದೇಶ್ವರಬೆಟ್ಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೈಲಿನಿಂದ ಹೊರಬಂದು ಮತ್ತೆ ಪ್ರೀತಿಸುವಂತೆ ಯುವಕನಿಂದ ಕಾಟ

ಬೆಂಗಳೂರು: ಜೈಲಿನಿಂದ ಹೊರಬಂದು ಮತ್ತೆ ಪ್ರೀತಿಸುವಂತೆ ಯುವಕ ಮಾರಿಯಪ್ಪನ್​ನಿಂದ ಇಸ್ರೋ ವಿಜ್ಞಾನಿಗೆ ಕಿರುಕುಳ ನೀಡಿದ್ದಾನೆ. ಯುವತಿ ಮೇಲೆ ಒನ್ ವೇ ಲವ್​ನಲ್ಲಿದ್ದ ಆಸಾಮಿ ಮಾರಿಯಪ್ಪನ್, ಕಳೆದ ವರ್ಷ ಮಾನಸಿಕ ಕಿರುಕುಳ ಹಿನ್ನೆಲೆ ಆತನ ಮೇಲೆ ಯುವತಿ ದೂರು ನೀಡಿದ್ದಳು. ಈ ಸಂಬಂಧ ಆರೋಪಿ ಮಾರಿಯಪ್ಪನ್​ನ್ನು ಬಂಧಿಸಿ ಜೈಲಿಗಟ್ಟಿದ್ದ ಪೊಲೀಸರು, ಇದೀಗ ಜೈಲಿನಿಂದ ಜಾಮೀನು ಪಡೆದು ಹೊರಬಂದು ಮತ್ತೆ ಕಿರುಕುಳ ಕೊಟ್ಟಿದ್ದಾನೆ. ಇಸ್ರೋದಿಂದ ವಾಪಸ್ ಮನೆಗೆ ಬರುವಾಗ ಫೆ.10ರಂದು ಬೈಕ್​ ಅಡ್ಡಗಟ್ಟಿ ಯುವತಿಗೆ ಕಾಟ ಕೊಟ್ಟಿದ್ದ ಆರೋಪಿ, ಈ ವೇಳೆ ನನ್ನನ್ನು ಪ್ರೀತಿಸು, ಮದುವೆಯಾಗು ಎಂದು ಪೀಡಿಸಿ, ಬೈಕ್ ಎಳೆದಾಡಿ ಹಿಂಸೆ ನೀಡಿದ್ದನಂತೆ. ಈ ಹಿನ್ನೆಲೆ ಜೀವನ್ ಭೀಮಾನಗರ ಪೊಲೀಸ್​ ಠಾಣೆಯಲ್ಲಿ ಯುವತಿ ಮತ್ತೊಂದು ದೂರು ದಾಖಲಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us