AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಲಾರ್ ಬಾಂಬ್ ಸ್ಫೋಟದ ಪ್ರಮುಖ ಅಪರಾಧಿ, ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ನಿಧನ

1993 ರಲ್ಲಿ ನಡೆದಿದ್ದ ಪಾಲಾರ್ ಬಾಂಬ್ ಸ್ಫೋಟದ ಪ್ರಮುಖ ಅಪರಾಧಿ, ವೀರಪ್ಪನ್ ಸಹಚರ ಜ್ಞಾನಪ್ರಕಾಶ್ (69) ನಿಧನರಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಮಾರ್ಟಳ್ಳಿ ಸಮೀಪ ಸಂದನಪಾಳ್ಯದಲ್ಲಿ ವಾಸವಿದ್ದರು. ಮೃತ ಜ್ಞಾನಪ್ರಕಾಶ್​ ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು.

ಪಾಲಾರ್ ಬಾಂಬ್ ಸ್ಫೋಟದ ಪ್ರಮುಖ ಅಪರಾಧಿ, ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ನಿಧನ
ಮೃತ ಜ್ಞಾನಪ್ರಕಾಶ್
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Dec 15, 2023 | 10:30 PM

Share

ಚಾಮರಾಜನಗರ, ಡಿಸೆಂಬರ್​​ 15: 1993 ರಲ್ಲಿ ನಡೆದಿದ್ದ ಪಾಲಾರ್ ಬಾಂಬ್ ಸ್ಫೋಟ (Palar bomb blast) ದ ಪ್ರಮುಖ ಅಪರಾಧಿ, ವೀರಪ್ಪನ್ ಸಹಚರ ಜ್ಞಾನಪ್ರಕಾಶ್ (69) ನಿಧನರಾಗಿದ್ದಾರೆ. ಜಾಮೀನಿನ ಮೇಲೆ ಮೈಸೂರು ಜೈಲಿನಿಂದ 2022ರ ಡಿಸೆಂಬರ್20 ರಂದು ಬಿಡುಗಡೆಯಾಗಿದ್ದರು. 29 ವರ್ಷಗಳ ಕಾಲ ಬೆಳಗಾವಿ ಹಾಗೂ ಮೈಸೂರು ಜೈಲಿನಲ್ಲಿದ್ದರು. ಮೃತ ಜ್ಞಾನಪ್ರಕಾಶ್​ ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಮಾನವೀಯತೆ ಆಧಾರದ ಮೇಲೆ ಸುಪ್ರೀಂಕೋರ್ಟ್​ನಿಂದ ಜಾಮೀನು ಮಂಜೂರು ಮಾಡಲಾಗಿತ್ತು.

ಜಿಲ್ಲೆಯ ಹನೂರು ತಾಲೂಕು ಮಾರ್ಟಳ್ಳಿ ಸಮೀಪ ಸಂದನಪಾಳ್ಯದಲ್ಲಿ ವಾಸವಿದ್ದರು. 1997 ರಲ್ಲಿ ಟಾಡಾ ನ್ಯಾಯಾಲಯದಿಂದ ಗಲ್ಲುಶಿಕ್ಷೆಗೆ ಗುರಿಯಾಗಿದ್ದು, 2014 ರಲ್ಲಿ ಗಲ್ಲುಶಿಕ್ಷೆ ರದ್ದುಗೊಳಿಸಿದ್ದ ಸುಪ್ರೀಂಕೋರ್ಟ್​ ಜೀವಾವಧಿ ಶಿಕ್ಷೆ ವಿಧಿಸಿತ್ತು.

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಬೈಕ್ ಸವಾರ ಸಾವು

ಕಲಬುರಗಿ: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಮಾಡಬೂಳ ಕ್ರಾಸ್ ಹತ್ತಿರ ನಡೆದಿದೆ. ದಂಡೋತಿ ಗ್ರಾಮದ ಪ್ರಕಾಶ್ (24 ) ಮೃತಪಟ್ಟ ದುರ್ದೈವಿ. ದಂಡೋತಿ ಗ್ರಾಮದಿಂದ ಚಿತ್ತಾಪುರಕ್ಕೆ ಬರುವಾಗ ಅವಘಡ ಸಂಭವಿಸಿದೆ. ಸ್ಥಳಕ್ಕೆ ಚಿತ್ತಾಪುರ ಪೊಲೀಸರು ಭೇಟಿ ನೀಡಿ ಪರೀಶಿಲನೆ ಮಾಡಿದ್ದು, ಪ್ರಕರಣ ದಾಖಲಾಗಿದೆ.

ಮಾನಸಿಕ ಖಿನ್ನತೆಗೆ ಒಳಗಾಗಿ ಯುವಕ ನೇಣಿಗೆ ಶರಣು

ಆನೇಕಲ್: ಮಾನಸಿಕ ಖಿನ್ನತೆಗೆ ಒಳಗಾಗಿ ಯುವಕ ನೇಣಿಗೆ ಶರಣಾಗಿರುವಂತಹ ಘಟನೆ ಆನೇಕಲ್ ಪಟ್ಟಣದ ಭೋವಿ ಕಾಲೋನಿಯಲ್ಲಿ ನಡೆದಿದೆ. ಯೋಗೇಶ್(29) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ. ಕಳೆದೊಂದು ವರ್ಷದ ಹಿಂದೆ ಮದುವೆಯಾಗಿದ್ದ ಯೋಗೇಶ್, ಪತ್ನಿ ಎಂಟು ತಿಂಗಳ ಗರ್ಭಯಾಗಿದ್ದಳು.

ಇದನ್ನೂ ಓದಿ: ಆನೇಕಲ್: ಹಾಡಹಗಲೇ ಖತರ್ನಾಕ್ ಕಳ್ಳರ ಕೈಚಳಕ: ಗಮನ ಬೇರೆಡೆಗೆ ಸೆಳೆದು 10 ಲಕ್ಷ ರೂ. ಕಳ್ಳತನ

ಕಳೆದ ಮೂರು ವರ್ಷದ ಹಿಂದೆ ಯೋಗೇಶ್ ಸಹೋದರ ಶಿವಕುಮಾರ್ ಸಹ ಸಾವನ್ನಪ್ಪಿದ್ದ. ಇಡೀ ಕುಟುಂಬದ ಜವಾಬ್ದಾರಿ ಯೋಗೇಶ್ ಮೇಲಿತ್ತು. ಆದರೆ ಯಾವುದೇ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇದ್ದ. ಹಣಕಾಸಿನ ಸಮಸ್ಯೆಯಿಂದಾಗಿ ಇತ್ತೀಚಿಗೆ ಮನನೊಂದಿದ್ದ. ಬೆಳಿಗ್ಗೆ ಮನೆಯ ರೂಮ್​ನಲ್ಲಿನ ಫ್ಯಾನ್ಗೆ ನೇಣು ಹಾಕಿಕೊಂಡು ಮೃತಪಟ್ಟಿದ್ದಾನೆ. ಸ್ಥಳಕ್ಕೆ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:25 pm, Fri, 15 December 23

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು