AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂಡೀಗಢ: ಅಪ್ರಾಪ್ತ ಬಾಲಕಿ ಮೇಲೆ ಶಾಲಾ ಬಸ್​ ಚಾಲಕನಿಂದ ತಿಂಗಳುಗಟ್ಟಲೆ ಅತ್ಯಾಚಾರ

ಮಾರ್ಫ್​ ಮಾಡಿದ ಫೋಟೊಗಳನ್ನಿಟ್ಟುಕೊಂಡು ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗುತ್ತಿದ್ದ ಶಾಲಾ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಚಂಡೀಗಢದ ಮಣಿಮಜ್ರಾದ 26 ವರ್ಷದ ಬಸ್ ಚಾಲಕ ಮೊಹಮ್ಮದ್ ರಝಾಕ್ ಎಂದು ಗುರುತಿಸಲಾಗಿದೆ.

ಚಂಡೀಗಢ: ಅಪ್ರಾಪ್ತ ಬಾಲಕಿ ಮೇಲೆ ಶಾಲಾ ಬಸ್​ ಚಾಲಕನಿಂದ ತಿಂಗಳುಗಟ್ಟಲೆ ಅತ್ಯಾಚಾರ
ಅಪರಾಧ
ನಯನಾ ರಾಜೀವ್
|

Updated on: Aug 23, 2024 | 9:38 AM

Share

ಅಪ್ರಾಪ್ತ ಬಾಲಕಿ ಮೇಲೆ ಶಾಲಾ ಬಸ್​ ಚಾಲಕನೊಬ್ಬ ತಿಂಗಳುಗಟ್ಟಲೆ ಅತ್ಯಾಚಾರವೆಸಗಿರುವ ಘಟನೆ ಚಂಡೀಗಢದಲ್ಲಿ ನಡೆದಿದೆ. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಚಂಡೀಗಢದ ಮಣಿಮಜ್ರಾದ 26 ವರ್ಷದ ಬಸ್ ಚಾಲಕ ಮೊಹಮ್ಮದ್ ರಝಾಕ್ ಎಂದು ಗುರುತಿಸಲಾಗಿದೆ.

ಮಾರ್ಫ್​ ಮಾಡಿದ ಚಿತ್ರ ಬಳಸಿ ಆಕೆಯನ್ನು ಬೆದರಿಸಿ ನಿರಂತರ ಅತ್ಯಾಚಾರವೆಸಗಿದ್ದಾನೆ. ಮೇ ಹಾಗೂ ಜೂನ್ ನಡುವೆ ಇವೆಲ್ಲವೂ ಆಕೆಯ ಮನೆಯಲ್ಲೇ ನಡೆದಿದೆ ಎನ್ನಲಾಗಿದೆ. ರಝಾಕ್ ತನ್ನನ್ನು ಹಿಂಬಾಲಿಸುತ್ತಿದ್ದ ಮೊದಲು ಸ್ನೇಹ ಸಂಪಾದಿಸಲು ಪ್ರಯತ್ನಿಸುತ್ತಿದ್ದ, ಆದರೆ ಆಕೆ ನಿರಾಕರಿಸಿದಾಗ ಆಕೆಯ ಚಿತ್ರಗಳನ್ನು ಮಾರ್ಫ್​ ಮಾಡಿ ಬೆದರಿಕೆ ಹಾಕಲು ಶುರು ಮಾಡಿದ್ದ.

ಮೇ 18ರಂದು ಬಾಲಕಿ ಹಾಗೂ ಆಕೆಯ ಸಹೋದರಿ ಮನೆಯಲ್ಲಿದ್ದು, ಪೋಷಕರು ಕೆಲಸಕ್ಕೆ ಹೋಗಿದ್ದರು. ರಝಾಕ್ ಅವರ ಮನೆಗೆ ಬಂದಿದ್ದ. ತನ್ನೊಂದಿಗೆ ಲೈಂಗಿಕ ಸಂಬಂಧ ಬೆಳೆಸುವಂತೆ ಒತ್ತಾಯಿಸಿದ್ದಾನೆ, ಒಪ್ಪದಿದ್ದರೆ ಆ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದಾಗಿ ಹೇಳಿದ್ದಾನೆ.

ಹೀಗೆ ಬೆದರಿಕೆ ಹಾಕಿ ಜುಲೈ 6 ಹಾಗೂ ಜುಲೈ 26ರಂದು ಮತ್ತೆರಡು ಬಾರಿ ಮನೆಗೆ ಬಂದು ಅತ್ಯಾಚಾರವೆಸಗಿದ್ದಾನೆ. ಬಳಿಕ ಈ ವಿಚಾರ ಪೋಷಕರಿಗೆ ಗೊತ್ತಾಗಿದೆ. ಕೂಡಲೇ ಪೊಲೀಸರಿಗೆ ದೂರು ನೀಡಲಾಗಿದೆ.

ಮತ್ತಷ್ಟು ಓದಿ: ಛತ್ತೀಸ್​ಗಢದಲ್ಲಿ ಬುಡಕಟ್ಟು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಆರು ಮಂದಿ ಬಂಧನ

ವರದಿಗಳ ಪ್ರಕಾರ, ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ಶಾಲಾ ಚಾಲಕನಿಂದ ಶಾಲಾ ಅಧಿಕಾರಿಗಳು ರಾಜೀನಾಮೆ ಕೇಳಿದ್ದಾರೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಎದುರಿಸುತ್ತಿರುವ ಆರೋಪಿಯನ್ನು ಜಿರಕ್‌ಪುರ ಪೊಲೀಸರು ತಕ್ಷಣ ಬಂಧಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?