AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪೀಕರ್ ಕಡೆಯಿಂದ ಸರ್ಕಾರಿ ಕೆಲಸ ಕೊಡಿಸೋದಾಗಿ ನಂಬಿಸಿ.. ವಂಚನೆ ಮಾಡಿದ್ದ ಆಸಾಮಿ ಅಂದರ್​

ಸ್ಪೀಕರ್ ಕಡೆಯಿಂದ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆ ಬಳಿ 18 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಆರೋಪಿಯ ಬಂಧನವಾಗಿದೆ. ಚಂದ್ರಾ ಲೇಔಟ್ ಠಾಣೆ ಪೊಲೀಸರಿಂದ ಆರೋಪಿಯ ಬಂಧನವಾಗಿದೆ.

ಸ್ಪೀಕರ್ ಕಡೆಯಿಂದ ಸರ್ಕಾರಿ ಕೆಲಸ ಕೊಡಿಸೋದಾಗಿ ನಂಬಿಸಿ.. ವಂಚನೆ ಮಾಡಿದ್ದ ಆಸಾಮಿ ಅಂದರ್​
ಆರೋಪಿ ರಾಘವೇಂದ್ರ
KUSHAL V
|

Updated on: Jan 26, 2021 | 9:23 PM

Share

ಬೆಂಗಳೂರು: ಸ್ಪೀಕರ್ ಕಡೆಯಿಂದ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆ ಬಳಿ 18 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಆರೋಪಿಯ ಬಂಧನವಾಗಿದೆ. ಚಂದ್ರಾ ಲೇಔಟ್ ಠಾಣೆ ಪೊಲೀಸರಿಂದ ಆರೋಪಿಯ ಬಂಧನವಾಗಿದೆ.

ಮಂಡ್ಯ ಮೂಲದ ರಾಘವೇಂದ್ರ ಬಂಧಿತ ಆರೋಪಿ. ಪ್ರಮೀಳಾ ಎಂಬುವವರಿಂದ ರಾಘವೇಂದ್ರ ಹಂತ ಹಂತವಾಗಿ ಹಣ ಪಡೆದಿದ್ದನು ಎಂದು ಹೇಳಲಾಗಿದೆ.

ಏನಿದು ಪ್ರಕರಣ? 2017ರಲ್ಲಿ ಚಂದ್ರಾ ಲೇಔಟ್‌ನಲ್ಲಿ ವಾಸವಿದ್ದ ದೂರುದಾರೆ ಪ್ರಮೀಳಾಗೆ ಪರಿಚಯವಾಗಿದ್ದ ವಂಚಕ ರಾಘವೇಂದ್ರ ಹಾಗೂ ಆತನ ಪತ್ನಿ, ಸಂತ್ರಸ್ತೆಯ ಮಕ್ಕಳಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿದ್ರು. ಹಾಗಾಗಿ, ಪ್ರಮೀಳಾ ಸರ್ಕಾರಿ ಕೆಲಸದ ಆಸೆಗೆ ತಮ್ಮ ಮಕ್ಕಳ‌ ಶೈಕ್ಷಣಿಕ ದಾಖಲಾತಿ ಸಹ ನೀಡಿದ್ದರು ಎಂದು ಹೇಳಲಾಗಿದೆ.

ಈ ನಡುವೆ, ರಾಘವೇಂದ್ರ ನಕಲಿ ಅರ್ಜಿ ಭರ್ತಿ ಮಾಡಿಸಿ ಪ್ರಮೀಳಾ ಬಳಿ 18 ಲಕ್ಷಕ್ಕೂ ಹೆಚ್ಚು ಹಣವನ್ನು ಹಂತ ಹಂತವಾಗಿ ಪಡೆದಿದ್ದ ಎಂದು ತಿಳಿದುಬಂದಿದೆ. ಇದಲ್ಲದೆ, ಸ್ಪೀಕರ್ ಕಚೇರಿ ಸಿಬ್ಬಂದಿ ಹೆಸರಿನಲ್ಲೂ 30 ಸಾವಿರ ರೂ. ಪಡೆದಿದ್ದನಂತೆ.

ಆದರೆ, ಯಾವುದೇ ಕೆಲಸ ಕೊಡಿಸದಿದ್ದಾಗ ಪ್ರಮೀಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಇದೀಗ, ಪ್ರಮೀಳಾ ಕೊಟ್ಟ ದೂರಿನ ಮೇರೆಗೆ ಚಂದ್ರಾಲೇಔಟ್‌ ಪೊಲೀಸರಿಂದ ಆರೋಪಿ ರಾಘವೇಂದ್ರನ ಬಂಧನವಾಗಿದೆ.

ಹಾವೇರಿ: ಅನ್ನದಾತರ ‘ಗಣ’ ಕಹಳೆ ದಿನದಂದೇ.. ನೇಣುಬಿಗಿದುಕೊಂಡು ರೈತ ಆತ್ಮಹತ್ಯೆ, ಯಾಕೆ?

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ