AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಖಾಸಗಿ ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು, 39 ಲಕ್ಷ ರೂ. ಸಾಲ ಪಡೆದ ಭೂಪ

ನಕಲಿ ಚಿನ್ನದ ಒಡವೆ ಮೇಲೆ ಅಸಲಿ ಚಿನ್ನದಂತೆ ಮೂರು ಪದರು ಲೇಪನ ಮಾಡಿಸಿ, ಬೆಂಗಳೂರಿನ ಖಾಸಗಿ ಬ್ಯಾಂಕ್​​ನಲ್ಲಿ ಅಡವಿಟ್ಟು ಆರೋಪಿ ಬರೊಬ್ಬರಿ 39 ಲಕ್ಷ ರೂ. ಸಾಲ ಪಡೆದು ವಂಚಿಸಿದ್ದಾನೆ.

ಬೆಂಗಳೂರಿನ ಖಾಸಗಿ ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು, 39 ಲಕ್ಷ ರೂ. ಸಾಲ ಪಡೆದ ಭೂಪ
ಸಾಂದರ್ಭಿಕ ಚಿತ್ರ
Jagadisha B
| Edited By: |

Updated on: Oct 07, 2023 | 8:16 AM

Share

ಬೆಂಗಳೂರು ಅ.07: ನಗರದ ಖಾಸಗಿ ಬ್ಯಾಂಕ್​​ವೊಂದರಲ್ಲಿ (Bank) ನಕಲಿ ಚಿನ್ನ (Fake Gold) ಅಡವಿಟ್ಟು, 39 ಲಕ್ಷದ 59 ಸಾವಿರ ರೂ. ಹಣ ಪಡೆದು ವಂಚಿಸಿದ ಆರೋಪಿ ರಂಗನಾಥ್ ವಿರುದ್ಧ ಅಶೋಕನಗರ ಪೊಲೀಸ್​ ಠಾಣೆಯಲ್ಲಿ (Ashok Nagar Police Station) ಪ್ರಕರಣ ದಾಖಲಾಗಿದೆ. ಆರೋಪಿ ರಂಗನಾಥ್ 3 ಪದರಗಳ ಲೇಪನದ 1 ಕೆಜಿ ನಕಲಿ ಚಿನ್ನದ ಒಡವೆ ಅಡವಿಟ್ಟು ಮೇ 25ರಂದು 39 ಲಕ್ಷ ರೂ. ಸಾಲ ಪಡೆದಿದ್ದನು.

ಬ್ಯಾಂಕ್​ ಸಿಬ್ಬಂದಿ ಒಡವೆಯ ಮೊದಲ ಪದರನ್ನು ಪರೀಕ್ಷಿಸಿದಾಗ ಅಸಲಿ ಎಂದು ತಿಳಿದುಬಂದಿದೆ. ಒಂದೆರಡು ತಿಂಗಳ ನಂತರ ಬ್ಯಾಂಕ್ ಆಡಿಟಿಂಗ್ ವೇಳೆ ಮತ್ತೆ ಚಿನ್ನವನ್ನು ಪರೀಕ್ಷಿಸಿದಾಗ ಅನುಮಾನ ಹುಟ್ಟು ಹಾಕಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಮೊದಲಿನಿಂದ ಸಂಪೂರ್ಣವಾಗಿ ಚಿನ್ನವನ್ನು ಪರೀಕ್ಷಿಸಿದಾಗ ನಕಲಿ ಎಂದು ತಿಳಿದುಬಂದಿದೆ. ಇನ್ನು ಸಾಲ ಪಡೆದ ಆರೋಪಿ ರಂಗನಾಥ್​ ಎರಡೂ ತಿಂಗಳಾದರೂ ಬ್ಯಾಂಕ್​​ ಕಡೆ ತಲೆ ಹಾಕದಿದ್ದಾಗ, ಸಿಬ್ಬಂದಿ ಅನುಮಾನಗೊಂಡು ಪರೀಕ್ಷೆ ಮಾಡಿದ್ದಾರೆ.

ಇದನ್ನೂ ಓದಿ: ಭಾರತದ ಸೇನೆ ಹೆಸರಲ್ಲಿ ಅಂಗಡಿ ಮಾಲೀಕನಿಗೆ 1.47 ಲಕ್ಷ ವಂಚನೆ

ಪ್ರಕರಣ ಸಂಬಂಧ ಖಾಸಗಿ ಬ್ಯಾಂಕ್​​ನ ಸ್ಟೇಟ್ ಹೆಡ್ ಮ್ಯಾನೇಜರ್ ಲಕ್ಷೇಶ್ ರಾಲಪಲ್ಲಿ ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ