AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಖಾಸಗಿ ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು, 39 ಲಕ್ಷ ರೂ. ಸಾಲ ಪಡೆದ ಭೂಪ

ನಕಲಿ ಚಿನ್ನದ ಒಡವೆ ಮೇಲೆ ಅಸಲಿ ಚಿನ್ನದಂತೆ ಮೂರು ಪದರು ಲೇಪನ ಮಾಡಿಸಿ, ಬೆಂಗಳೂರಿನ ಖಾಸಗಿ ಬ್ಯಾಂಕ್​​ನಲ್ಲಿ ಅಡವಿಟ್ಟು ಆರೋಪಿ ಬರೊಬ್ಬರಿ 39 ಲಕ್ಷ ರೂ. ಸಾಲ ಪಡೆದು ವಂಚಿಸಿದ್ದಾನೆ.

ಬೆಂಗಳೂರಿನ ಖಾಸಗಿ ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು, 39 ಲಕ್ಷ ರೂ. ಸಾಲ ಪಡೆದ ಭೂಪ
ಸಾಂದರ್ಭಿಕ ಚಿತ್ರ
Jagadisha B
| Edited By: |

Updated on: Oct 07, 2023 | 8:16 AM

Share

ಬೆಂಗಳೂರು ಅ.07: ನಗರದ ಖಾಸಗಿ ಬ್ಯಾಂಕ್​​ವೊಂದರಲ್ಲಿ (Bank) ನಕಲಿ ಚಿನ್ನ (Fake Gold) ಅಡವಿಟ್ಟು, 39 ಲಕ್ಷದ 59 ಸಾವಿರ ರೂ. ಹಣ ಪಡೆದು ವಂಚಿಸಿದ ಆರೋಪಿ ರಂಗನಾಥ್ ವಿರುದ್ಧ ಅಶೋಕನಗರ ಪೊಲೀಸ್​ ಠಾಣೆಯಲ್ಲಿ (Ashok Nagar Police Station) ಪ್ರಕರಣ ದಾಖಲಾಗಿದೆ. ಆರೋಪಿ ರಂಗನಾಥ್ 3 ಪದರಗಳ ಲೇಪನದ 1 ಕೆಜಿ ನಕಲಿ ಚಿನ್ನದ ಒಡವೆ ಅಡವಿಟ್ಟು ಮೇ 25ರಂದು 39 ಲಕ್ಷ ರೂ. ಸಾಲ ಪಡೆದಿದ್ದನು.

ಬ್ಯಾಂಕ್​ ಸಿಬ್ಬಂದಿ ಒಡವೆಯ ಮೊದಲ ಪದರನ್ನು ಪರೀಕ್ಷಿಸಿದಾಗ ಅಸಲಿ ಎಂದು ತಿಳಿದುಬಂದಿದೆ. ಒಂದೆರಡು ತಿಂಗಳ ನಂತರ ಬ್ಯಾಂಕ್ ಆಡಿಟಿಂಗ್ ವೇಳೆ ಮತ್ತೆ ಚಿನ್ನವನ್ನು ಪರೀಕ್ಷಿಸಿದಾಗ ಅನುಮಾನ ಹುಟ್ಟು ಹಾಕಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಮೊದಲಿನಿಂದ ಸಂಪೂರ್ಣವಾಗಿ ಚಿನ್ನವನ್ನು ಪರೀಕ್ಷಿಸಿದಾಗ ನಕಲಿ ಎಂದು ತಿಳಿದುಬಂದಿದೆ. ಇನ್ನು ಸಾಲ ಪಡೆದ ಆರೋಪಿ ರಂಗನಾಥ್​ ಎರಡೂ ತಿಂಗಳಾದರೂ ಬ್ಯಾಂಕ್​​ ಕಡೆ ತಲೆ ಹಾಕದಿದ್ದಾಗ, ಸಿಬ್ಬಂದಿ ಅನುಮಾನಗೊಂಡು ಪರೀಕ್ಷೆ ಮಾಡಿದ್ದಾರೆ.

ಇದನ್ನೂ ಓದಿ: ಭಾರತದ ಸೇನೆ ಹೆಸರಲ್ಲಿ ಅಂಗಡಿ ಮಾಲೀಕನಿಗೆ 1.47 ಲಕ್ಷ ವಂಚನೆ

ಪ್ರಕರಣ ಸಂಬಂಧ ಖಾಸಗಿ ಬ್ಯಾಂಕ್​​ನ ಸ್ಟೇಟ್ ಹೆಡ್ ಮ್ಯಾನೇಜರ್ ಲಕ್ಷೇಶ್ ರಾಲಪಲ್ಲಿ ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್