AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಖಾಸಗಿ ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು, 39 ಲಕ್ಷ ರೂ. ಸಾಲ ಪಡೆದ ಭೂಪ

ನಕಲಿ ಚಿನ್ನದ ಒಡವೆ ಮೇಲೆ ಅಸಲಿ ಚಿನ್ನದಂತೆ ಮೂರು ಪದರು ಲೇಪನ ಮಾಡಿಸಿ, ಬೆಂಗಳೂರಿನ ಖಾಸಗಿ ಬ್ಯಾಂಕ್​​ನಲ್ಲಿ ಅಡವಿಟ್ಟು ಆರೋಪಿ ಬರೊಬ್ಬರಿ 39 ಲಕ್ಷ ರೂ. ಸಾಲ ಪಡೆದು ವಂಚಿಸಿದ್ದಾನೆ.

ಬೆಂಗಳೂರಿನ ಖಾಸಗಿ ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು, 39 ಲಕ್ಷ ರೂ. ಸಾಲ ಪಡೆದ ಭೂಪ
ಸಾಂದರ್ಭಿಕ ಚಿತ್ರ
ಜಗದೀಶ ಬಿ.
| Edited By: ವಿವೇಕ ಬಿರಾದಾರ|

Updated on: Oct 07, 2023 | 8:16 AM

Share

ಬೆಂಗಳೂರು ಅ.07: ನಗರದ ಖಾಸಗಿ ಬ್ಯಾಂಕ್​​ವೊಂದರಲ್ಲಿ (Bank) ನಕಲಿ ಚಿನ್ನ (Fake Gold) ಅಡವಿಟ್ಟು, 39 ಲಕ್ಷದ 59 ಸಾವಿರ ರೂ. ಹಣ ಪಡೆದು ವಂಚಿಸಿದ ಆರೋಪಿ ರಂಗನಾಥ್ ವಿರುದ್ಧ ಅಶೋಕನಗರ ಪೊಲೀಸ್​ ಠಾಣೆಯಲ್ಲಿ (Ashok Nagar Police Station) ಪ್ರಕರಣ ದಾಖಲಾಗಿದೆ. ಆರೋಪಿ ರಂಗನಾಥ್ 3 ಪದರಗಳ ಲೇಪನದ 1 ಕೆಜಿ ನಕಲಿ ಚಿನ್ನದ ಒಡವೆ ಅಡವಿಟ್ಟು ಮೇ 25ರಂದು 39 ಲಕ್ಷ ರೂ. ಸಾಲ ಪಡೆದಿದ್ದನು.

ಬ್ಯಾಂಕ್​ ಸಿಬ್ಬಂದಿ ಒಡವೆಯ ಮೊದಲ ಪದರನ್ನು ಪರೀಕ್ಷಿಸಿದಾಗ ಅಸಲಿ ಎಂದು ತಿಳಿದುಬಂದಿದೆ. ಒಂದೆರಡು ತಿಂಗಳ ನಂತರ ಬ್ಯಾಂಕ್ ಆಡಿಟಿಂಗ್ ವೇಳೆ ಮತ್ತೆ ಚಿನ್ನವನ್ನು ಪರೀಕ್ಷಿಸಿದಾಗ ಅನುಮಾನ ಹುಟ್ಟು ಹಾಕಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಮೊದಲಿನಿಂದ ಸಂಪೂರ್ಣವಾಗಿ ಚಿನ್ನವನ್ನು ಪರೀಕ್ಷಿಸಿದಾಗ ನಕಲಿ ಎಂದು ತಿಳಿದುಬಂದಿದೆ. ಇನ್ನು ಸಾಲ ಪಡೆದ ಆರೋಪಿ ರಂಗನಾಥ್​ ಎರಡೂ ತಿಂಗಳಾದರೂ ಬ್ಯಾಂಕ್​​ ಕಡೆ ತಲೆ ಹಾಕದಿದ್ದಾಗ, ಸಿಬ್ಬಂದಿ ಅನುಮಾನಗೊಂಡು ಪರೀಕ್ಷೆ ಮಾಡಿದ್ದಾರೆ.

ಇದನ್ನೂ ಓದಿ: ಭಾರತದ ಸೇನೆ ಹೆಸರಲ್ಲಿ ಅಂಗಡಿ ಮಾಲೀಕನಿಗೆ 1.47 ಲಕ್ಷ ವಂಚನೆ

ಪ್ರಕರಣ ಸಂಬಂಧ ಖಾಸಗಿ ಬ್ಯಾಂಕ್​​ನ ಸ್ಟೇಟ್ ಹೆಡ್ ಮ್ಯಾನೇಜರ್ ಲಕ್ಷೇಶ್ ರಾಲಪಲ್ಲಿ ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ