AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಖಾಸಗಿ ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು, 39 ಲಕ್ಷ ರೂ. ಸಾಲ ಪಡೆದ ಭೂಪ

ನಕಲಿ ಚಿನ್ನದ ಒಡವೆ ಮೇಲೆ ಅಸಲಿ ಚಿನ್ನದಂತೆ ಮೂರು ಪದರು ಲೇಪನ ಮಾಡಿಸಿ, ಬೆಂಗಳೂರಿನ ಖಾಸಗಿ ಬ್ಯಾಂಕ್​​ನಲ್ಲಿ ಅಡವಿಟ್ಟು ಆರೋಪಿ ಬರೊಬ್ಬರಿ 39 ಲಕ್ಷ ರೂ. ಸಾಲ ಪಡೆದು ವಂಚಿಸಿದ್ದಾನೆ.

ಬೆಂಗಳೂರಿನ ಖಾಸಗಿ ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು, 39 ಲಕ್ಷ ರೂ. ಸಾಲ ಪಡೆದ ಭೂಪ
ಸಾಂದರ್ಭಿಕ ಚಿತ್ರ
Jagadisha B
| Edited By: |

Updated on: Oct 07, 2023 | 8:16 AM

Share

ಬೆಂಗಳೂರು ಅ.07: ನಗರದ ಖಾಸಗಿ ಬ್ಯಾಂಕ್​​ವೊಂದರಲ್ಲಿ (Bank) ನಕಲಿ ಚಿನ್ನ (Fake Gold) ಅಡವಿಟ್ಟು, 39 ಲಕ್ಷದ 59 ಸಾವಿರ ರೂ. ಹಣ ಪಡೆದು ವಂಚಿಸಿದ ಆರೋಪಿ ರಂಗನಾಥ್ ವಿರುದ್ಧ ಅಶೋಕನಗರ ಪೊಲೀಸ್​ ಠಾಣೆಯಲ್ಲಿ (Ashok Nagar Police Station) ಪ್ರಕರಣ ದಾಖಲಾಗಿದೆ. ಆರೋಪಿ ರಂಗನಾಥ್ 3 ಪದರಗಳ ಲೇಪನದ 1 ಕೆಜಿ ನಕಲಿ ಚಿನ್ನದ ಒಡವೆ ಅಡವಿಟ್ಟು ಮೇ 25ರಂದು 39 ಲಕ್ಷ ರೂ. ಸಾಲ ಪಡೆದಿದ್ದನು.

ಬ್ಯಾಂಕ್​ ಸಿಬ್ಬಂದಿ ಒಡವೆಯ ಮೊದಲ ಪದರನ್ನು ಪರೀಕ್ಷಿಸಿದಾಗ ಅಸಲಿ ಎಂದು ತಿಳಿದುಬಂದಿದೆ. ಒಂದೆರಡು ತಿಂಗಳ ನಂತರ ಬ್ಯಾಂಕ್ ಆಡಿಟಿಂಗ್ ವೇಳೆ ಮತ್ತೆ ಚಿನ್ನವನ್ನು ಪರೀಕ್ಷಿಸಿದಾಗ ಅನುಮಾನ ಹುಟ್ಟು ಹಾಕಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಮೊದಲಿನಿಂದ ಸಂಪೂರ್ಣವಾಗಿ ಚಿನ್ನವನ್ನು ಪರೀಕ್ಷಿಸಿದಾಗ ನಕಲಿ ಎಂದು ತಿಳಿದುಬಂದಿದೆ. ಇನ್ನು ಸಾಲ ಪಡೆದ ಆರೋಪಿ ರಂಗನಾಥ್​ ಎರಡೂ ತಿಂಗಳಾದರೂ ಬ್ಯಾಂಕ್​​ ಕಡೆ ತಲೆ ಹಾಕದಿದ್ದಾಗ, ಸಿಬ್ಬಂದಿ ಅನುಮಾನಗೊಂಡು ಪರೀಕ್ಷೆ ಮಾಡಿದ್ದಾರೆ.

ಇದನ್ನೂ ಓದಿ: ಭಾರತದ ಸೇನೆ ಹೆಸರಲ್ಲಿ ಅಂಗಡಿ ಮಾಲೀಕನಿಗೆ 1.47 ಲಕ್ಷ ವಂಚನೆ

ಪ್ರಕರಣ ಸಂಬಂಧ ಖಾಸಗಿ ಬ್ಯಾಂಕ್​​ನ ಸ್ಟೇಟ್ ಹೆಡ್ ಮ್ಯಾನೇಜರ್ ಲಕ್ಷೇಶ್ ರಾಲಪಲ್ಲಿ ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!