AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪ್ ಅಗೆಯುವಾಗ ಚಿನ್ನದ ಮಣಿ ಹಾರಗಳು ಸಿಕ್ಕಿವೆ ಎಂದು ಹೊಟೇಲ್ ಉದ್ಯಮಿಗೆ 15 ಲಕ್ಷ ರೂ ವಂಚನೆ!

ಮುರುಘಾನಾಥನ ಹಣೆಬರಹ ಕೆಟ್ಟಿತ್ತು ಅನಿಸುತ್ತೆ... ಅದರಲ್ಲಿ ಮತ್ತೆ ನಾಲ್ಕು ಮಣಿಗಳನ್ನ ಪರಿಶೀಲಿಸಿದಾಗ ಅದೂ ಕೂಡ ಅಸಲಿಯಾಗಿತ್ತು ಎಂಬುದು ನಿಕ್ಕಿಯಾಗಿದೆ! ಸರಿ, ಮೂರು ದಿನಗಳ ಬಳಿಕ ಕರೆ ಮಾಡಿದ ಅರ್ಜುನ್ ಒಂದು ಕೆಜಿ‌ ಮಣಿಗೆ 25 ಲಕ್ಷ ರೂಪಾಯಿ ಕೊಡಬೇಕು ಎಂದು ಹೇಳಿದ್ದಾನೆ.

ಸಂಪ್ ಅಗೆಯುವಾಗ ಚಿನ್ನದ ಮಣಿ ಹಾರಗಳು ಸಿಕ್ಕಿವೆ ಎಂದು ಹೊಟೇಲ್ ಉದ್ಯಮಿಗೆ 15 ಲಕ್ಷ ರೂ ವಂಚನೆ!
ಸಂಪ್ ಅಗಿಯುವಾಗ ಚಿನ್ನದ ಮಣಿ ಹಾರಗಳು ಸಿಕ್ಕಿವೆ ಎಂದು ಹೊಟೇಲ್ ಉದ್ಯಮಿಗೆ 15 ಲಕ್ಷ ರೂ ವಂಚನೆ!
TV9 Web
| Edited By: |

Updated on:Jun 13, 2022 | 5:08 PM

Share

ಬೆಂಗಳೂರು: ವಂಚನೆಗೆ ಸಾವಿರ ಮುಖ ಲಕ್ಷ ದಾರಿಗಳಂತೆ! ಅದು ಎಂದೂ ಮುಗಿಯದ ಗೋಳಿನ ಹಾಡು! ತಾಜಾ ಪ್ರಕರಣದಲ್ಲಿ ಮೋಸ ಹೋಗುವ ಮಿಕ ಸಿಕ್ಕಿದೆಯೆಂದು ಯುವಕನೊಬ್ಬ ತಮಿಳುನಾಡಿನ‌ ಖ್ಯಾತ ಹೊಟೇಲ್ ಉದ್ಯಮಿಗೆ ಟೋಪಿ ಹಾಕಿದ ಪ್ರಕರಣವಿದು. ಸಂಪ್ ಅಗೆಯುವಾಗ ನಿಧಿ ಸಿಕ್ಕಿದೆ ಎಂದು ತಮಿಳುನಾಡಿನ‌ ಖ್ಯಾತ ಹೊಟೇಲ್ ಉದ್ಯಮಿಗೆ ಟೋಪಿ ಹಾಕಿದ್ದಾನೆ ಈ ಖದೀಮ. ಅದು ತಮಿಳುನಾಡಿನ‌ ಖ್ಯಾತ ಸ್ವಾಮಿ ಚಿಕನ್ ಚೆಟ್ಟಿನಾಡ್ ಹೊಟೇಲ್. ಅದರ ಮಾಲೀಕ ಮುರುಘಾನಾಥಂಗೆ ಅರ್ಜುನ್ ಎಂಬಾತ 15 ಲಕ್ಷ ರೂಪಾಯಿ ವಂಚನೆ ಎಸಗಿದ್ದಾನೆ.

ನಿಮ್ಮ ಹೊಟೇಲ್ ತಿಂಡಿ ಚೆನ್ನಾಗಿದೆ ಎಂದು ಹೊಟೇಲ್ ಮಾಲೀಕನ ಪರಿಚಯ ಮಾಡಿಕೊಂಡಿದ್ದ ಅರ್ಜುನ್ ಚೆನ್ನೈನಲ್ಲಿಯೇ ಕೆಲಸ ಮಾಡ್ತಿರೋದಾಗಿ ಹೇಳಿಕೊಂಡಿದ್ದನಂತೆ. ನಂತರ ನನ್ನ ಮನೆ ಸಂಪ್ ಅಗೆಯುವಾಗ 5 ಮಣಿ ಹಾರದ ನಿಧಿ ಸಿಕ್ಕಿದೆ ಎಂದು ಹೇಳಿದ್ದಾನೆ. ಎರಡು ಮಣಿಗಳನ್ನ ಮಾಲೀಕನಿಗೆ ನೀಡಿ, ಬೇಕಾದ್ರೆ ಪರಿಶೀಲನೆ ನಡೆಸಿ ಎಂದು ಕೊಟ್ಟು ಬಂದಿದ್ದನಂತೆ. ಅದರಂತೆ ಪರೀಕ್ಷೆ ನಡೆಸಿ‌ದ ಹೊಟೇಲ್ ಮಾಲೀಕ ಮುರುಘಾನಾಥಂಗೆ ಮಣಿ ಹಾರ ಅಸಲು ಚಿನ್ನದ್ದು ಎಂಬುದು ಮನವರಿಕೆಯಾಗಿದೆ. ಆದರೆ ಅತಿಯಾಸೆಗೆ ಬಿದ್ದಿದ್ದ ಮಾಲೀಕ ಉಳಿದ ಮಣಿ ಸರಗಳನ್ನ ಚೆನ್ನೈನ ರೇಸ್ ಕೋರ್ಸ್ ಬಳಿ ತರಲು ಅರ್ಜುನನಿಗೆ ಹೇಳಿದ್ದಾನೆ.

ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಮುರುಘಾನಾಥನ ಹಣೆಬರಹ ಕೆಟ್ಟಿತ್ತು ಅನಿಸುತ್ತೆ… ಅದರಲ್ಲಿ ಮತ್ತೆ ನಾಲ್ಕು ಮಣಿಗಳನ್ನ ಪರಿಶೀಲಿಸಿದಾಗ ಅದೂ ಕೂಡ ಅಸಲಿಯಾಗಿತ್ತು ಎಂಬುದು ನಿಕ್ಕಿಯಾಗಿದೆ! ಸರಿ, ಮೂರು ದಿನಗಳ ಬಳಿಕ ಕರೆ ಮಾಡಿದ ಅರ್ಜುನ್ ಒಂದು ಕೆಜಿ‌ ಮಣಿಗೆ 25 ಲಕ್ಷ ರೂಪಾಯಿ ಕೊಡಬೇಕು ಎಂದು ಹೇಳಿದ್ದಾನೆ. ಆದರೆ ಮೊದಲು ಸ್ವಲ್ಪವಷ್ಟೇ ಮಣಿ ಹಾರ ತೆಗೆದುಕೊಳ್ಳೊದಾಗಿ ಹೇಳಿ, ಉದ್ಯಮಿ ಮುರುಘಾನಾಥ 15 ಲಕ್ಷ ರೂಪಾಯಿ ರೆಡಿ ಮಾಡಿಕೊಂಡಿದ್ದಾನೆ.

ಅದರಂತೆ ಬೆಂಗಳೂರಿನಲ್ಲಿ ಮಣಿಗಳನ್ನ ಕೊಡೋದಾಗಿ ಹೇಳಿ ಕರೆಸಿಕೊಂಡಿದ್ದ ಅರ್ಜುನ್ ಆ್ಯಂಡ್ ಟೀಂ ಕೆ ಎಸ್ ಆರ್ ಟಿಸಿ ಮೂರನೇ ಮುಖ್ಯ ದ್ವಾರದ ಬಳಿ ಉದ್ಯಮಿ ಮುರುಘಾನಾಥನನ್ನ ಕರೆಸಿಕೊಂಡಿದ್ದಾರೆ. ನಂತರ ಆತನಿಂದ 15 ಲಕ್ಷ ರೂ ಪಡೆದು ನಕಲಿ ಮಣಿಗಳನ್ನ ನೀಡಿ ಪರಾರಿಯಾಗಿದ್ದಾರೆ. 15 ಲಕ್ಷ ರೂಪಾಯಿ ಮೌಲ್ಯದ ಮಣಿಗಳನ್ನ ನೀಡಿ ಅರ್ಜುನ್ ಹಾಗೂ ಮಹಿಳೆ ಸೇರಿ ಮೂವರಿಂದ ವಂಚನೆಯಾಗಿರೋದಾಗಿ ಉದ್ಯಮಿ ಮುರುಘಾನಾಥ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ವಂಚಕರು ಸಿಗ್ತಾರಾ? ಹಣ ವಾಪಸ್ ಬರುತ್ತಾ? ಕಾದು ನೋಡಬೇಕಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 5:01 pm, Mon, 13 June 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ