AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chhattisgarh Crime: ಕ್ಲುಲ್ಲಕ ಕಾರಣಕ್ಕೆ ಅಪ್ಪ, ಅಮ್ಮ, ಅಜ್ಜಿಯನ್ನು ಕೊಂದು ದೇಹಗಳ ಸುಟ್ಟು ಹಾಕಿದ ಕ್ರೂರಿ ಮಗ

ವ್ಯಕ್ತಿಯೊಬ್ಬ ಕ್ಲುಲ್ಲಕ ಕಾರಣಕ್ಕೆ ಅಪ್ಪ, ಅಮ್ಮ, ಅಜ್ಜಿಯನ್ನು ಕೊಂದು, ದೇಹವನ್ನು ಸುಟ್ಟು ಹಾಕಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ.

Chhattisgarh Crime: ಕ್ಲುಲ್ಲಕ ಕಾರಣಕ್ಕೆ ಅಪ್ಪ, ಅಮ್ಮ, ಅಜ್ಜಿಯನ್ನು ಕೊಂದು ದೇಹಗಳ ಸುಟ್ಟು ಹಾಕಿದ ಕ್ರೂರಿ ಮಗ
ಜೈಲು
ನಯನಾ ರಾಜೀವ್
|

Updated on: May 19, 2023 | 12:36 PM

Share

ವ್ಯಕ್ತಿಯೊಬ್ಬ ಕ್ಲುಲ್ಲಕ ಕಾರಣಕ್ಕೆ ಅಪ್ಪ, ಅಮ್ಮ, ಅಜ್ಜಿಯನ್ನು ಕೊಂದು, ದೇಹವನ್ನು ಸುಟ್ಟು ಹಾಕಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. ಉದಿತ್ ಭೋಯ್ ಮಾದಕ ವ್ಯಸನಿಯಾಗಿದ್ದು, ತಂದೆ ಹಣ ಕೊಡಲಿಲ್ಲ ಎನ್ನುವ ಕಾರಣಕ್ಕೆ ಮನೆಯಲ್ಲಿದ್ದವರನ್ನೆಲ್ಲಾ ಹತ್ಯೆ ಮಾಡಿದ್ದಾನೆ.ಬಳಿಕ ಮೂವರ ದೇಹವನ್ನೂ ಮನೆಯ ಹಿಂಭಾಗ ಸುಟ್ಟು ಹಾಕಿದ್ದಾನೆ. ಸಿಂಗ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪುಟ್ಕಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆರೋಪಿಯನ್ನು 24 ವರ್ಷದ ಉದಿತ್ ಭೋಯ್ ಎಂದು ಗುರುತಿಸಲಾಗಿದ್ದು, ಮಾದಕ ವ್ಯಸನಿಯಾಗಿದ್ದು, ತಂದೆ ಹಣ ನಿರಾಕರಿಸಿದ ನಂತರ ಕುಟುಂಬ ಸದಸ್ಯರನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯ ತಂದೆ ಪ್ರಭಾತ್ ಭೋಯ್ ತನ್ನ ಪತ್ನಿ, ತಾಯಿ ಮತ್ತು ಮಗನೊಂದಿಗೆ ವಾಸವಾಗಿದ್ದರು. ಉದಿತ್ ತನ್ನ ತಂದೆ-ತಾಯಿ ಮತ್ತು ಅಜ್ಜಿ ಮಲಗಲು ಹೋದಾಗ ಕೊಂದಿದ್ದಾನೆ. ದೊಣ್ಣೆಯಿಂದ ತಂದೆಯ ತಲೆಗೆ ಹೊಡೆದು ನಂತರ ತಾಯಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಗಲಾಟೆಯಿಂದ ಎಚ್ಚರಗೊಂಡ ಅಜ್ಜಿ ಮೇಲೂ ಉದಿತ್ ಹಲ್ಲೆ ನಡೆಸಿದ್ದಾನೆ.

ಮತ್ತಷ್ಟು ಓದಿ: Mumbai: ತನ್ನ 2 ವರ್ಷದ ಮಗುವನ್ನು ಹತ್ಯೆ ಮಾಡಿ, ನದಿಗೆ ಎಸೆದ ಪಾಪಿ ತಂದೆ

ನಂತರ ಅವರ ಶವಗಳನ್ನು ಮನೆಯ ಬಾತ್ ರೂಂನಲ್ಲಿ ಇರಿಸಿದ್ದರು. ಮರುದಿನ, ಉದಿತ್ ಮನೆಯ ಹಿತ್ತಲಿನಲ್ಲಿ ಮರ ಮತ್ತು ಸ್ಯಾನಿಟೈಸರ್ ಬಳಸಿ ದೇಹಗಳಿಗೆ ಬೆಂಕಿ ಹಚ್ಚಿದ್ದ. ನಂತರ ಉದಿತ್ ಅವರು ಮೇ 12 ರಂದು ಸಿಂಗ್‌ಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿದ್ದಾರೆ ಎಂದು ದೂರು ನೀಡಿದ್ದ. ಇನ್ನೊಬ್ಬ ಮಗ ಅಮಿತ್ ರಾಯ್​ಪುರದಲ್ಲಿ ಓದುತ್ತಿದ್ದ, ಆತ ಎಲ್ಲರೂ ನಾಪತ್ತೆಯಾಗಿರುವ ಬಗ್ಗೆ ಅನುಮಾನಗೊಂಡಿದ್ದ.

ಅವರು ಪುಟ್ಕಾದಲ್ಲಿರುವ ಅವರ ನಿವಾಸಕ್ಕೆ ಬಂದಾಗ, ಹಿತ್ತಲಿನಲ್ಲಿ ರಕ್ತದ ಕಲೆಗಳು, ಸುಟ್ಟ ಜಾಗ ಜತೆಗೆ ಮತ್ತು ಮಾನವ ಮೂಳೆಗಳು ಕಂಡುಬಂದವು. ಪರಿಸ್ಥಿತಿಯಿಂದ ಆತಂಕಗೊಂಡ ಅಮಿತ್ ತಕ್ಷಣ ಸಿಂಗ್‌ಪುರ ಪೊಲೀಸ್ ಠಾಣೆಗೆ ತೆರಳಿ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಉದಿತ್ ಭೋಯ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಆರಂಭದಲ್ಲಿ ಪೊಲೀಸರಿಗೆ ಅಸ್ಪಷ್ಟ ಉತ್ತರ ನೀಡಿ ದಾರಿತಪ್ಪಿಸಲು ಯತ್ನಿಸಿದ ಆತ ಬಳಿಕ ತಪ್ಪೊಪ್ಪಿಕೊಂಡಿದ್ದಾನೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!