AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ನಿಂದ ಬಿದ್ದವರಿಗೆ ಸಹಾಯ ಮಾಡಲು ಹೋದ ತಂದೆ, ಮಗ ಅಲ್ಲಿ ನಡೆದಿದ್ದೇ ಬೇರೆ

ರಾತ್ರಿ ಹೊತ್ತು ಅದರಲ್ಲೂ ನಿರ್ಜನ ಪ್ರದೇಶಗಳಲ್ಲಿ ನೀವು ಹೋಗುತ್ತಿದ್ದೀರಿ ಎಂದಾದರೆ ಮೈಯೆಲ್ಲಾ ಕಣ್ಣಾಗಿರಬೇಕು. ಹೀಗೆ ತಂದೆ-ಮಗ ಇಬ್ಬರೂ ಹೋಗುತ್ತಿರುವಾಗ ಎದುರಿನಲ್ಲಿ ಹೋಗುತ್ತಿದ್ದ ಬೈಕ್​ನಿಂದ ಇಬ್ಬರು ಕೆಳಗೆ ಬಿದ್ದಿದ್ದಾರೆ ಅವರ ಸಹಾಯಕ್ಕೆ ಇಬ್ಬರೂ ಧಾವಿಸಿದ್ದಾರೆ, ಆದರೆ ಅಲ್ಲಿ ನಡೆದಿದ್ದೇ ಬೇರೆ.ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಈ ಘಟನೆ ನಡೆದಿದೆ, ಆ ಇಬ್ಬರು ಬೈಕ್ ಸವಾರರು ಬೇಕಂತಲೇ ಕೆಳಗೆ ಬಿದ್ದಿದ್ದರು.

ಬೈಕ್​ನಿಂದ ಬಿದ್ದವರಿಗೆ ಸಹಾಯ ಮಾಡಲು ಹೋದ ತಂದೆ, ಮಗ ಅಲ್ಲಿ ನಡೆದಿದ್ದೇ ಬೇರೆ
ದರೋಡೆImage Credit source: NDTV
ನಯನಾ ರಾಜೀವ್
|

Updated on:Sep 01, 2023 | 3:51 PM

Share

ರಾತ್ರಿ ಹೊತ್ತು ಅದರಲ್ಲೂ ನಿರ್ಜನ ಪ್ರದೇಶಗಳಲ್ಲಿ ನೀವು ಹೋಗುತ್ತಿದ್ದೀರಿ ಎಂದಾದರೆ ಮೈಯೆಲ್ಲಾ ಕಣ್ಣಾಗಿರಬೇಕು. ಹೀಗೆ ತಂದೆ-ಮಗ ಇಬ್ಬರೂ ಹೋಗುತ್ತಿರುವಾಗ ಎದುರಿನಲ್ಲಿ ಹೋಗುತ್ತಿದ್ದ ಬೈಕ್​ನಿಂದ ಇಬ್ಬರು ಕೆಳಗೆ ಬಿದ್ದಿದ್ದಾರೆ ಅವರ ಸಹಾಯಕ್ಕೆ ಇಬ್ಬರೂ ಧಾವಿಸಿದ್ದಾರೆ, ಆದರೆ ಅಲ್ಲಿ ನಡೆದಿದ್ದೇ ಬೇರೆ. ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಈ ಘಟನೆ ನಡೆದಿದೆ, ಆ ಇಬ್ಬರು ಬೈಕ್ ಸವಾರರು ಬೇಕಂತಲೇ ಕೆಳಗೆ ಬಿದ್ದಿದ್ದರು. ಸಹಾಯಕ್ಕೆ ತಂದೆ-ಮಗ ಧಾವಿಸಿದಾಗ ಕೊರಳ ಬಳಿ ಚಾಕು ಇಟ್ಟು ಇಬ್ಬರ ಬಳಿ ಇದ್ದ ಹಣವೆನ್ನೆಲ್ಲಾ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಸರಸ್ವತಿ ನಗರ ಪ್ರದೇಶದಲ್ಲಿ ಮಧ್ಯರಾತ್ರಿಯಲ್ಲಿ ಘಟನೆ ಸಂಭವಿಸಿದೆ, ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ.

ಈ ಇಬ್ಬರು ತಂದೆ-ಮಗನ ಎದುರು ಬೀಳುವ ನಾಟವಾಡುತ್ತಾರೆ, ಹತ್ತಿರ ಹೋದಾಗ ಇದ್ದುದ್ದೆಲ್ಲವನ್ನೂ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಬೈಕ್ ಸವಾರರ ಹಿಂದೆ ಹೋಗುತ್ತಿದ್ದ ಸಂತ್ರಸ್ತರು ವಾಹನವನ್ನು ಮೇಲೆತ್ತಲು ಸಹಾಯ ಮಾಡಲು ಮುಂದಾದರು. ಆಗ ಚಾಕು ತೋರಿಸಿದ್ದಾರೆ.

ಮಗ ಓಡಿ ಹೋಗಿದ್ದಾನೆ, ಆದರೆ ತಂದೆಯನ್ನು ಹಿಡಿದುಕೊಂಡ ದುಷ್ಕರ್ಮಿಗಳು ನೆಲಕ್ಕೆ ದಬ್ಬಿದ್ದಾರೆ. ಆರೋಪಿಗಳ ಗುರುತು ಇನ್ನೂ ತಿಳಿದುಬಂದಿಲ್ಲ.

ಮತ್ತಷ್ಟು ಓದಿ: ಬೆಂಗಳೂರು: ದ್ವಿಚಕ್ರ ಸವಾರನಿಗೆ ಮಾರಕಾಸ್ತ್ರ ತೋರಿಸಿ ದರೋಡೆ! ಭೀತಿಗೊಳಿಸುವ ವಿಡಿಯೋ ಇಲ್ಲಿದೆ

ಇಬ್ಬರು ಯಾವುದೇ ದೂರು ದಾಖಲಿಸಿಲ್ಲವಾದರೂ ಘಟನೆಯ ಕುರಿತು ಸ್ಥಳಕ್ಕೆ ತೆರಳಿ ವಿಚಾರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸಿಸಿಟಿವಿ ಫೂಟೇಜ್‌ನಲ್ಲಿನ ದೃಶ್ಯಗಳು ಮಸುಕಾಗಿರುವುದರಿಂದ ಬೈಕ್‌ನ ಸಂಖ್ಯೆಯನ್ನು ಗಮನಿಸುವುದು ಕಷ್ಟಕರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ, ಆದರೆ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:26 pm, Fri, 1 September 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?