AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ನಿಂದ ಬಿದ್ದವರಿಗೆ ಸಹಾಯ ಮಾಡಲು ಹೋದ ತಂದೆ, ಮಗ ಅಲ್ಲಿ ನಡೆದಿದ್ದೇ ಬೇರೆ

ರಾತ್ರಿ ಹೊತ್ತು ಅದರಲ್ಲೂ ನಿರ್ಜನ ಪ್ರದೇಶಗಳಲ್ಲಿ ನೀವು ಹೋಗುತ್ತಿದ್ದೀರಿ ಎಂದಾದರೆ ಮೈಯೆಲ್ಲಾ ಕಣ್ಣಾಗಿರಬೇಕು. ಹೀಗೆ ತಂದೆ-ಮಗ ಇಬ್ಬರೂ ಹೋಗುತ್ತಿರುವಾಗ ಎದುರಿನಲ್ಲಿ ಹೋಗುತ್ತಿದ್ದ ಬೈಕ್​ನಿಂದ ಇಬ್ಬರು ಕೆಳಗೆ ಬಿದ್ದಿದ್ದಾರೆ ಅವರ ಸಹಾಯಕ್ಕೆ ಇಬ್ಬರೂ ಧಾವಿಸಿದ್ದಾರೆ, ಆದರೆ ಅಲ್ಲಿ ನಡೆದಿದ್ದೇ ಬೇರೆ.ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಈ ಘಟನೆ ನಡೆದಿದೆ, ಆ ಇಬ್ಬರು ಬೈಕ್ ಸವಾರರು ಬೇಕಂತಲೇ ಕೆಳಗೆ ಬಿದ್ದಿದ್ದರು.

ಬೈಕ್​ನಿಂದ ಬಿದ್ದವರಿಗೆ ಸಹಾಯ ಮಾಡಲು ಹೋದ ತಂದೆ, ಮಗ ಅಲ್ಲಿ ನಡೆದಿದ್ದೇ ಬೇರೆ
ದರೋಡೆImage Credit source: NDTV
ನಯನಾ ರಾಜೀವ್
|

Updated on:Sep 01, 2023 | 3:51 PM

Share

ರಾತ್ರಿ ಹೊತ್ತು ಅದರಲ್ಲೂ ನಿರ್ಜನ ಪ್ರದೇಶಗಳಲ್ಲಿ ನೀವು ಹೋಗುತ್ತಿದ್ದೀರಿ ಎಂದಾದರೆ ಮೈಯೆಲ್ಲಾ ಕಣ್ಣಾಗಿರಬೇಕು. ಹೀಗೆ ತಂದೆ-ಮಗ ಇಬ್ಬರೂ ಹೋಗುತ್ತಿರುವಾಗ ಎದುರಿನಲ್ಲಿ ಹೋಗುತ್ತಿದ್ದ ಬೈಕ್​ನಿಂದ ಇಬ್ಬರು ಕೆಳಗೆ ಬಿದ್ದಿದ್ದಾರೆ ಅವರ ಸಹಾಯಕ್ಕೆ ಇಬ್ಬರೂ ಧಾವಿಸಿದ್ದಾರೆ, ಆದರೆ ಅಲ್ಲಿ ನಡೆದಿದ್ದೇ ಬೇರೆ. ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಈ ಘಟನೆ ನಡೆದಿದೆ, ಆ ಇಬ್ಬರು ಬೈಕ್ ಸವಾರರು ಬೇಕಂತಲೇ ಕೆಳಗೆ ಬಿದ್ದಿದ್ದರು. ಸಹಾಯಕ್ಕೆ ತಂದೆ-ಮಗ ಧಾವಿಸಿದಾಗ ಕೊರಳ ಬಳಿ ಚಾಕು ಇಟ್ಟು ಇಬ್ಬರ ಬಳಿ ಇದ್ದ ಹಣವೆನ್ನೆಲ್ಲಾ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಸರಸ್ವತಿ ನಗರ ಪ್ರದೇಶದಲ್ಲಿ ಮಧ್ಯರಾತ್ರಿಯಲ್ಲಿ ಘಟನೆ ಸಂಭವಿಸಿದೆ, ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ.

ಈ ಇಬ್ಬರು ತಂದೆ-ಮಗನ ಎದುರು ಬೀಳುವ ನಾಟವಾಡುತ್ತಾರೆ, ಹತ್ತಿರ ಹೋದಾಗ ಇದ್ದುದ್ದೆಲ್ಲವನ್ನೂ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಬೈಕ್ ಸವಾರರ ಹಿಂದೆ ಹೋಗುತ್ತಿದ್ದ ಸಂತ್ರಸ್ತರು ವಾಹನವನ್ನು ಮೇಲೆತ್ತಲು ಸಹಾಯ ಮಾಡಲು ಮುಂದಾದರು. ಆಗ ಚಾಕು ತೋರಿಸಿದ್ದಾರೆ.

ಮಗ ಓಡಿ ಹೋಗಿದ್ದಾನೆ, ಆದರೆ ತಂದೆಯನ್ನು ಹಿಡಿದುಕೊಂಡ ದುಷ್ಕರ್ಮಿಗಳು ನೆಲಕ್ಕೆ ದಬ್ಬಿದ್ದಾರೆ. ಆರೋಪಿಗಳ ಗುರುತು ಇನ್ನೂ ತಿಳಿದುಬಂದಿಲ್ಲ.

ಮತ್ತಷ್ಟು ಓದಿ: ಬೆಂಗಳೂರು: ದ್ವಿಚಕ್ರ ಸವಾರನಿಗೆ ಮಾರಕಾಸ್ತ್ರ ತೋರಿಸಿ ದರೋಡೆ! ಭೀತಿಗೊಳಿಸುವ ವಿಡಿಯೋ ಇಲ್ಲಿದೆ

ಇಬ್ಬರು ಯಾವುದೇ ದೂರು ದಾಖಲಿಸಿಲ್ಲವಾದರೂ ಘಟನೆಯ ಕುರಿತು ಸ್ಥಳಕ್ಕೆ ತೆರಳಿ ವಿಚಾರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸಿಸಿಟಿವಿ ಫೂಟೇಜ್‌ನಲ್ಲಿನ ದೃಶ್ಯಗಳು ಮಸುಕಾಗಿರುವುದರಿಂದ ಬೈಕ್‌ನ ಸಂಖ್ಯೆಯನ್ನು ಗಮನಿಸುವುದು ಕಷ್ಟಕರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ, ಆದರೆ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:26 pm, Fri, 1 September 23

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ