AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​ ಸಿಕ್ಕಿಲ್ಲ ಎಂದು ಅವರ ಹೆಂಡತಿ, ಮಗಳನ್ನು ಕೊಂದು ಅರೆಬೆತ್ತಲೆ ಮಾಡಿ ಎಸೆದ ಆರೋಪಿ

ಪೊಲೀಸ್​ ಅಧಿಕಾರಿಯನ್ನು ಕೊಲ್ಲಲು ಸಾಧ್ಯವಾಗಿಲ್ಲವೆಂದು ಕೋಪದಲ್ಲಿ ಅವರ ಪತ್ನಿ ಹಾಗೂ ಮಗಳನ್ನು ಆರೋಪಿ ಕೊಲೆ ಮಾಡಿರುವ ಘಟನೆ ಛತ್ತೀಸ್​ಗಢದ ಸೂರಜ್​ಪುರ ಜಿಲ್ಲೆಯಲ್ಲಿ ನಡೆದಿದೆ. ಆತನಿಗೆ ಪೊಲೀಸ್​ ಅಧಿಕಾರಿಯನ್ನು ಕೊಲ್ಲಲು ಸಾಧ್ಯವಾಗದಿದ್ದಾಗ ಪತ್ನಿ ಹಾಗೂ ಮಗಳನ್ನು ಟಾರ್ಗೆಟ್​ ಮಾಡಿ, ಮನೆಗೆ ನುಗ್ಗಿ ಹರಿತವಾದ ಆಯುಧದಿಂದ ಕೊಲೆ ಂಆಡಿ ಅರೆಬೆತ್ತಲೆ ಮಾಡಿ ಹೊಲದಲ್ಲಿ ಎಸೆದಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ಪೊಲೀಸ್​ ಸಿಕ್ಕಿಲ್ಲ ಎಂದು ಅವರ ಹೆಂಡತಿ, ಮಗಳನ್ನು ಕೊಂದು ಅರೆಬೆತ್ತಲೆ ಮಾಡಿ ಎಸೆದ ಆರೋಪಿ
ಹಳ್ಳಿImage Credit source: India Today
Follow us
ನಯನಾ ರಾಜೀವ್
|

Updated on: Oct 15, 2024 | 12:47 PM

ಪೊಲೀಸ್​ ಅಧಿಕಾರಿಯನ್ನು ಕೊಲ್ಲಲು ಸಾಧ್ಯವಾಗಿಲ್ಲವೆಂದು ಕೋಪದಲ್ಲಿ ಅವರ ಪತ್ನಿ ಹಾಗೂ ಮಗಳನ್ನು ಆರೋಪಿ ಕೊಲೆ ಮಾಡಿರುವ ಘಟನೆ ಛತ್ತೀಸ್​ಗಢದ ಸೂರಜ್​ಪುರ ಜಿಲ್ಲೆಯಲ್ಲಿ ನಡೆದಿದೆ. ಆತನಿಗೆ ಪೊಲೀಸ್​ ಅಧಿಕಾರಿಯನ್ನು ಕೊಲ್ಲಲು ಸಾಧ್ಯವಾಗದಿದ್ದಾಗ ಪತ್ನಿ ಹಾಗೂ ಮಗಳನ್ನು ಟಾರ್ಗೆಟ್​ ಮಾಡಿ, ಮನೆಗೆ ನುಗ್ಗಿ ಹರಿತವಾದ ಆಯುಧದಿಂದ ಕೊಲೆ ಂಆಡಿ ಅರೆಬೆತ್ತಲೆ ಮಾಡಿ ಹೊಲದಲ್ಲಿ ಎಸೆದಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ಸೋಮವಾರ ಬೆಳಗ್ಗೆ ಅಪರಾಧ ನಡೆದ ಸ್ಥಳದಿಂದ ಸುಮಾರು ಐದು ಕಿಲೋಮೀಟರ್ ದೂರದಲ್ಲಿರುವ ಹೊಲವೊಂದರಲ್ಲಿ ಶವಗಳು ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು. ಪೊಲೀಸರ ಪ್ರಕಾರ, ಕಾಂಗ್ರೆಸ್ ಯುವ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಲದೀಪ್ ಸಾಹು ಅವರು ಅಕ್ಟೋಬರ್ 13 ರಂದು ಹೆಡ್ ಕಾನ್‌ಸ್ಟೆಬಲ್ ತಾಲಿಬ್ ಶೇಖ್ ಅವರ ಮನೆಗೆ ನುಗ್ಗಿ ಅವರ ಪತ್ನಿ ಮೆಹನಾಜ್ (35) ಮತ್ತು ಮಗಳು ಅಲಿಯಾ (11) ರನ್ನು ಹರಿತವಾದ ಆಯುಧದಿಂದ ಕೊಂದಿದ್ದರು.

ಇದಕ್ಕೂ ಮೊದಲು, ಚೌಪಟ್ಟಿ ಪ್ರದೇಶದಲ್ಲಿ ದುರ್ಗಾ ಪೂಜೆಯ ವಿಗ್ರಹ ನಿಮಜ್ಜನ ಕಾರ್ಯಕ್ರಮದಲ್ಲಿ ಸಾಹು ಅವರು ಪೊಲೀಸ್ ಪೇದೆಯೊಂದಿಗೆ ಜಗಳವಾಡಿದ್ದರು, ಮತ್ತು ಅವರ ಮೇಲೆ ಬಿಸಿ ಎಣ್ಣೆಯನ್ನು ಸುರಿದಿದ್ದರು ಎಂದು ಆರೋಪಿಸಲಾಗಿದೆ. ಕಾನ್‌ಸ್ಟೆಬಲ್‌ಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತಷ್ಟು ಓದಿ: ಹಾಸ್ಟೆಲ್ ಬಾತ್​ರೂಂನಲ್ಲಿ ಮದರಸಾ ವಿದ್ಯಾರ್ಥಿ ಆತ್ಮಹತ್ಯೆ: ಮಗನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ ಪೋಷಕರು

ಹೆಡ್ ಕಾನ್‌ಸ್ಟೆಬಲ್ ತಾಲಿಬ್ ಶೇಖ್ ಮತ್ತು ಅವರ ತಂಡವು ಸಾಹುವನ್ನು ಬಂಧಿಸಲು ಸ್ಥಳಕ್ಕೆ ತಲುಪಿತು, ನಂತರ ಕಾರನ್ನು ಪೊಲೀಸ್​ ಅಧಿಕಾರಿಯ ಮೇಲೆ ಓಡಿಸಲು ಸಾಹು ಪ್ರಯತ್ನಿಸಿದ್ದರು. ಹೇಗೋ ಬಚಾವಾಗಿದ್ದರು. ಸಾಹು ಸ್ಥಳದಿಂದ ಪರಾರಿಯಾಗಿದ್ದಾನೆ ಮತ್ತು ಆರೋಪಿಯನ್ನು ಪತ್ತೆಹಚ್ಚಲು ಶೇಖ್ ಮತ್ತು ಅವನ ತಂಡವು ಪ್ಲ್ಯಾನ್​ ಮಾಡುತ್ತಿದ್ದಾರೆ, ಸಾಹು ಹೆಡ್ ಕಾನ್‌ಸ್ಟೆಬಲ್ ಮನೆಗೆ ನುಗ್ಗಿ ಮತ್ತು ಅವನ ಹೆಂಡತಿ ಮತ್ತು ಮಗಳನ್ನು ಕೊಂದಿದ್ದಾರೆ.

ಹೆಡ್ ಕಾನ್‌ಸ್ಟೆಬಲ್ ಶೇಖ್ ಭಾನುವಾರ ಕರ್ತವ್ಯ ಮುಗಿಸಿ ಮನೆಗೆ ಬಂದಾಗ ಮನೆಯಲ್ಲಿ ರಕ್ತದ ಕಲೆಗಳು ಕಂಡು ಬಂದಿದ್ದು, ಪತ್ನಿ ಹಾಗೂ ಮಗಳನ್ನು ಕೊಲೆ ಮಾಡಿರುವ ವಿಷಯ ತಿಳಿದು ಬಂದಿದೆ. ಕೋಪಗೊಂಡ ಸ್ಥಳೀಯರು ಪಟ್ಟಣದಲ್ಲಿ ಬಂದ್‌ಗೆ ಕರೆ ನೀಡಿದರು ಮತ್ತು ಸ್ಥಳೀಯ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು. ಅವರು ಸಾಹು ಮನೆಯನ್ನು ಧ್ವಂಸ ಮಾಡಿದರು. ಮನೆಯ ಹೊರಗೆ ನಿಲ್ಲಿಸಿದ್ದ ವಾಹನಗಳನ್ನು ಸುಟ್ಟು ಹಾಕಿದರು.

ಘಟನೆಯ ಸಂದರ್ಭದಲ್ಲಿ ಸಾಹು ಅವರ ಕುಟುಂಬ ಸದಸ್ಯರು ಯಾರೂ ಮನೆಯಲ್ಲಿ ಇರಲಿಲ್ಲ. ಏತನ್ಮಧ್ಯೆ, ಘಟನೆಯ ನಂತರ ಪರಾರಿಯಾಗಿರುವ ಕುಲದೀಪ್ ಸಾಹುವನ್ನು ಪತ್ತೆಹಚ್ಚಲು ಪೊಲೀಸರು ನಾಲ್ಕು ತಂಡಗಳನ್ನು ಹೊಂದಿದ್ದಾರೆ. ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಳ್ಳದಂತೆ ತಡೆಯಲು ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿ ಎನ್ ಎಸ್ ಯುಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ,  ಕಾಂಗ್ರೆಸ್ ಯುವ ಘಟಕದ ಸದಸ್ಯ ಎಂಬುದಕ್ಕೆ ಗುರುತಿನ ಚೀಟಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್
ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ
ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ