Chhattisgarh Crime: ಪತ್ನಿಯನ್ನು ಕೊಲೆ ಮಾಡಿ, ತುಂಡು ತುಂಡಾಗಿ ಕತ್ತರಿಸಿ ನೀರಿನ ಟ್ಯಾಂಕ್​ ಒಳಗೆ 2 ತಿಂಗಳುಗಳ ಕಾಲ ಬಚ್ಚಿಟ್ಟಿದ್ದ ವ್ಯಕ್ತಿಯ ಬಂಧನ

ಛತ್ತೀಸ್​ಗಢದ ಬಿಲಾಸ್​ಪುರದಲ್ಲಿ ಶ್ರದ್ಧಾ ವಾಕರ್ ರೀತಿಯ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಹತ್ಯೆ ಮಾಡಿ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ 2 ತಿಂಗಳುಗಳ ಕಾಲ ನೀರಿನ ಟ್ಯಾಂಕ್​ನಲ್ಲಿಟ್ಟಿದ್ದ ಘಟನೆ ನಡೆದಿದೆ.

Chhattisgarh Crime: ಪತ್ನಿಯನ್ನು ಕೊಲೆ ಮಾಡಿ, ತುಂಡು ತುಂಡಾಗಿ ಕತ್ತರಿಸಿ ನೀರಿನ ಟ್ಯಾಂಕ್​ ಒಳಗೆ 2 ತಿಂಗಳುಗಳ ಕಾಲ ಬಚ್ಚಿಟ್ಟಿದ್ದ ವ್ಯಕ್ತಿಯ ಬಂಧನ
ಬಂಧನ
Follow us
|

Updated on: Mar 07, 2023 | 9:10 AM

ಛತ್ತೀಸ್​ಗಢದ ಬಿಲಾಸ್​ಪುರದಲ್ಲಿ ಶ್ರದ್ಧಾ ವಾಕರ್ ರೀತಿಯ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಹತ್ಯೆ ಮಾಡಿ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ 2 ತಿಂಗಳುಗಳ ಕಾಲ ನೀರಿನ ಟ್ಯಾಂಕ್​ನಲ್ಲಿಟ್ಟಿದ್ದ ಘಟನೆ ನಡೆದಿದೆ. ಪತ್ನಿ ಯಾರೊಂದಿಗೋ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿದ ಪತಿ ಆಕೆಯನ್ನು ಹತ್ಯೆ ಮಾಡಿದ್ದ, ಕೊಲೆ ಮಾಡಿದ ನಂತರ ಆರೋಪಿ ತನ್ನನ್ನು ತಾನು ರಕ್ಷಿಸಿಕೊಳ್ಳಲು ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ನೀರಿನ ತೊಟ್ಟಿಗೆ ಎಸೆದಿದ್ದ.

ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದಾಗ, ದೇಹದ ಭಾಗಗಳಿದ್ದ ಚೀಲ ದೊರೆತಿತ್ತು. ಆರೋಪಿಯನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ಆರೋಪಿ ಪತಿ ಪತ್ನಿಯ ಮೇಲೆ ಅನುಮಾನ ವ್ಯಕ್ತಪಡಿಸಿ, ಹೆಂಡತಿ ಯಾರೊಂದಿಗೋ ಅನೈತಿಕ ಸಂಬಂಧ ಹೊಂದಿದ್ದಾಳೆ ಎನ್ನುವ ಭಾವನೆ ಮೂಡಿ ಆಕೆಯನ್ನು ಹತ್ಯೆಗೈದಿದ್ದ ಎನ್ನುವ ವಿಚಾರ ಬೆಳಕಿಗೆ ಬಂದಿದೆ.

ಮತ್ತಷ್ಟು ಓದಿ: ವಿಜಯನಗರ: ಪ್ರೀತಿಸಿದ ಹುಡುಗಿ ಸಿಗಲಿಲ್ಲ ಎಂದು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಪಾಗಲ್ ಪ್ರೇಮಿ

ಮೃತರನ್ನು ಸೀತಾ ಸಾಹು ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಪವನ್ ಠಾಕೂರ್ ಎಂದು ಗುರುತಿಸಲಾಗಿದೆ, ಸದ್ಯ ಈ ಪ್ರಕರಣದ ಆರೋಪಿ ಪವನ್ ಠಾಕೂರ್ ನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಹತ್ಯೆ ಬಹಿರಂಗಗೊಂಡಿದ್ದು ಹೇಗೆ? ಆರೋಪಿಯು ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದ ಎನ್ನುವ ಆರೋಪದಲ್ಲಿ ಆತನನ್ನು ಬಂಧಿಸಿದ್ದರು, ಆರೋಪಿಯ ಮನೆಯ ಶೋಧ ನಡೆಸುವಾಗ ಪೊಲೀಸರಿಗೆ ಮನೆಯಲ್ಲಿ ಕೆಟ್ಟ ವಾಸನೆ ಬರುತ್ತಿತ್ತು, ಏನೆಂದು ಪರೀಕ್ಷಿಸಿದಾಗ ಶವದ ತುಂಡುಗಳು ಪತ್ತೆಯಾಗಿದೆ, ನಕಲಿ ನೋಟು ಮುದ್ರಣ ಯಂತ್ರವನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿ ಪವನ್ ಠಾಕೂರ್ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪತ್ನಿಯನ್ನು ಕೊಂದ ಬಳಿಕ ತನ್ನ ಇಬ್ಬರು ಪುತ್ರರನ್ನು ತನ್ನ ತಂದೆ-ತಾಯಿಯೊಂದಿಗೆ ಬಿಟ್ಟು ಹೋಗಿದ್ದ, ಇಬ್ಬರಿಗೂ 10 ವರ್ಷಗಳ ಹಿಂದೆ ಮದುವೆಯಾಗಿತ್ತು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ