AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಕೋಳಿ ಮೊದಲಾ? ಮೊಟ್ಟೆ ಮೊದಲಾ?; ತಪ್ಪು ಉತ್ತರ ನೀಡಿದ ಗೆಳೆಯನನ್ನು ಕೊಂದ ಕುಡುಕ!

ನಾವು ಸಣ್ಣವರಾಗಿದ್ದಾಗಿನಿಂದಲೂ ಕೋಳಿ ಮೊದಲಾ? ಮೊಟ್ಟೆ ಮೊದಲಾ? ಎಂಬ ಪ್ರಶ್ನೆಗೆ ಇನ್ನೂ ಸರಿಯಾದ ಉತ್ತರ ಸಿಕ್ಕಿಲ್ಲ. ಒಬ್ಬೊಬ್ಬರ ಅಭಿಪ್ರಾಯದ ಪ್ರಕಾರ ಎರಡೂ ಉತ್ತರಗಳು ಸರಿ. ಆದರೆ, ಈ ಪ್ರಶ್ನೆ ಒಬ್ಬ ವ್ಯಕ್ತಿಯ ಜೀವವನ್ನೇ ಬಲಿ ಪಡೆದಿದೆ ಎಂದರೆ ನಂಬಲು ಸಾಧ್ಯವೇ? ಅಷ್ಟಕ್ಕೂ ಏನಿದು ಘಟನೆ ಎಂಬ ಕುರಿತು ಮಾಹಿತಿ ಇಲ್ಲಿದೆ.

Shocking News: ಕೋಳಿ ಮೊದಲಾ? ಮೊಟ್ಟೆ ಮೊದಲಾ?; ತಪ್ಪು ಉತ್ತರ ನೀಡಿದ ಗೆಳೆಯನನ್ನು ಕೊಂದ ಕುಡುಕ!
ಕೋಳಿ - ಮೊಟ್ಟೆImage Credit source: istock
ಸುಷ್ಮಾ ಚಕ್ರೆ
|

Updated on: Aug 01, 2024 | 8:57 PM

Share

ಕೋಳಿ ಮೊದಲು ಬಂದಿದ್ದಾ? ಮೊಟ್ಟೆ ಮೊದಲು ಬಂದಿದ್ದಾ? ನೀವು ಖಂಡಿತವಾಗಿಯೂ ಈ ಒಗಟನ್ನು ಕೇಳಿರುತ್ತೀರಿ. ತಲೆಗೆ ಹುಳ ಬಿಡುವ ಈ ಪ್ರಶ್ನೆಗೆ ಯಾವುದು ಸರಿಯಾದ ಉತ್ತರ ಎಂಬ ಗೊಂದಲ ನಿಮ್ಮನ್ನೂ ಕಾಡಿರಬಹುದು. ಆದರೆ, ಈ ಪ್ರಶ್ನೆಯಿಂದ ಒಂದು ಕೊಲೆಯೇ ನಡೆದುಹೋಗಿದೆ. ಚರ್ಚಾಸ್ಪದ ವಿಷಯವಾಗಿರುವ ಈ ಪ್ರಶ್ನೆ ಕೇಳಿದ ಕುಡುಕನೊಬ್ಬ ತನ್ನ ಗೆಳೆಯ ಈ ಪ್ರಶ್ನೆಗೆ ಸರಿಯಾದ ಉತ್ತರ ನೀಡಲಿಲ್ಲ ಎಂದು ಆತನನ್ನು ಕೊಲೆ ಮಾಡಿರುವ ವಿಚಿತ್ರ ಮತ್ತು ಭಯಾನಕ ಘಟನೆ ನಡೆದಿದೆ.

ಇಂಡೋನೇಷ್ಯಾದ ಆಗ್ನೇಯ ಸುಲವೆಸಿ ಪ್ರಾಂತ್ಯದ ಮುನಾ ರೀಜೆನ್ಸಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. “ಕೋಳಿ ಅಥವಾ ಮೊಟ್ಟೆ ಈ ಎರಡರಲ್ಲಿ ಯಾವುದು ಮೊದಲು ಬಂದದ್ದು?” ಎಂಬ ಕ್ಲಾಸಿಕ್ ಒಗಟಿನ ಮೇಲೆ ಕುಡುಕರಿಬ್ಬರ ನಡುವೆ ವಾದ ಶುರುವಾಗಿದೆ. ಕುಡಿದ ಮತ್ತಿನಲ್ಲಿದ್ದ ಇಬ್ಬರೂ ತಾನು ಹೇಳಿದ ಉತ್ತರವೇ ಸರಿಯೆಂದು ಜಗಳವಾಡಿದ್ದಾರೆ. ಅದೇ ಕೋಪದಲ್ಲಿ ಒಬ್ಬ ಕುಡುಕ ತನ್ನ ಸ್ನೇಹಿತನನ್ನು ಇರಿದು ಕೊಂದಿದ್ದಾನೆ.

ಇದನ್ನೂ ಓದಿ: Viral Video: ವ್ಯಕ್ತಿಯ ಕುತ್ತಿಗೆಗೆ ಸುತ್ತಿಕೊಂಡು ನುಂಗಲೆತ್ನಿಸಿದ 15 ಅಡಿ ಉದ್ದದ ಹೆಬ್ಬಾವು; ಶಾಕಿಂಗ್ ವಿಡಿಯೋ ವೈರಲ್

ಕೊಲೆಯ ಆರೋಪದ ಮೇಲೆ ಆ ವ್ಯಕ್ತಿಯನ್ನು ಬಂಧಿಸಲಾಗಿದೆ. ಜುಲೈ 24ರಂದು ಈ ದುರಂತ ಘಟನೆ ನಡೆದಿದೆ. ತನ್ನ ಗೆಳೆಯನನ್ನು ಕುಡಿಯಲು ಆಹ್ವಾನಿಸಿದ ಡಿಆರ್ ಎಂಬ ವ್ಯಕ್ತಿ ಹಲವಾರು ಸುತ್ತಿನ ಡ್ರಿಂಕ್ ಮುಗಿಸಿದ್ದರು. ಆಗ ಕೋಳಿ, ಮೊಟ್ಟೆಯ ವಿಷಯ ಚರ್ಚೆಗೆ ಬಂದಿತು. ಈ ಬಿಸಿ ಬಿಸಿ ಚರ್ಚೆ ವಿಪರೀತಕ್ಕೆ ಹೋಗಿ, ಜಗಳಕ್ಕೆ ತಿರುಗಿತು. ಹೊಡೆಯಲು ಬಂದ ಡಿಆರ್​ನಿಂದ ಆ ಸ್ನೇಹಿತ ತಪ್ಪಿಸಿಕೊಳ್ಳಲು ಓಡಿದ್ದಾನೆ. ಆಗ ಅವನ ಹಿಂದೆ ಓಡಿದ ಡಿಆರ್​ ಅಂಗಳದಲ್ಲಿ ಬಿದ್ದಿದ್ದ ಮಣ್ಣ ಅಗೆಯುವ ಚೂಪಾದ ಆಯುಧದಿಂದ ಆತನಿಗೆ ಹೊಡೆದು ಕೊಲೆ ಮಾಡಿದ್ದಾನೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ