AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಕೋಳಿ ಮೊದಲಾ? ಮೊಟ್ಟೆ ಮೊದಲಾ?; ತಪ್ಪು ಉತ್ತರ ನೀಡಿದ ಗೆಳೆಯನನ್ನು ಕೊಂದ ಕುಡುಕ!

ನಾವು ಸಣ್ಣವರಾಗಿದ್ದಾಗಿನಿಂದಲೂ ಕೋಳಿ ಮೊದಲಾ? ಮೊಟ್ಟೆ ಮೊದಲಾ? ಎಂಬ ಪ್ರಶ್ನೆಗೆ ಇನ್ನೂ ಸರಿಯಾದ ಉತ್ತರ ಸಿಕ್ಕಿಲ್ಲ. ಒಬ್ಬೊಬ್ಬರ ಅಭಿಪ್ರಾಯದ ಪ್ರಕಾರ ಎರಡೂ ಉತ್ತರಗಳು ಸರಿ. ಆದರೆ, ಈ ಪ್ರಶ್ನೆ ಒಬ್ಬ ವ್ಯಕ್ತಿಯ ಜೀವವನ್ನೇ ಬಲಿ ಪಡೆದಿದೆ ಎಂದರೆ ನಂಬಲು ಸಾಧ್ಯವೇ? ಅಷ್ಟಕ್ಕೂ ಏನಿದು ಘಟನೆ ಎಂಬ ಕುರಿತು ಮಾಹಿತಿ ಇಲ್ಲಿದೆ.

Shocking News: ಕೋಳಿ ಮೊದಲಾ? ಮೊಟ್ಟೆ ಮೊದಲಾ?; ತಪ್ಪು ಉತ್ತರ ನೀಡಿದ ಗೆಳೆಯನನ್ನು ಕೊಂದ ಕುಡುಕ!
ಕೋಳಿ - ಮೊಟ್ಟೆImage Credit source: istock
ಸುಷ್ಮಾ ಚಕ್ರೆ
|

Updated on: Aug 01, 2024 | 8:57 PM

Share

ಕೋಳಿ ಮೊದಲು ಬಂದಿದ್ದಾ? ಮೊಟ್ಟೆ ಮೊದಲು ಬಂದಿದ್ದಾ? ನೀವು ಖಂಡಿತವಾಗಿಯೂ ಈ ಒಗಟನ್ನು ಕೇಳಿರುತ್ತೀರಿ. ತಲೆಗೆ ಹುಳ ಬಿಡುವ ಈ ಪ್ರಶ್ನೆಗೆ ಯಾವುದು ಸರಿಯಾದ ಉತ್ತರ ಎಂಬ ಗೊಂದಲ ನಿಮ್ಮನ್ನೂ ಕಾಡಿರಬಹುದು. ಆದರೆ, ಈ ಪ್ರಶ್ನೆಯಿಂದ ಒಂದು ಕೊಲೆಯೇ ನಡೆದುಹೋಗಿದೆ. ಚರ್ಚಾಸ್ಪದ ವಿಷಯವಾಗಿರುವ ಈ ಪ್ರಶ್ನೆ ಕೇಳಿದ ಕುಡುಕನೊಬ್ಬ ತನ್ನ ಗೆಳೆಯ ಈ ಪ್ರಶ್ನೆಗೆ ಸರಿಯಾದ ಉತ್ತರ ನೀಡಲಿಲ್ಲ ಎಂದು ಆತನನ್ನು ಕೊಲೆ ಮಾಡಿರುವ ವಿಚಿತ್ರ ಮತ್ತು ಭಯಾನಕ ಘಟನೆ ನಡೆದಿದೆ.

ಇಂಡೋನೇಷ್ಯಾದ ಆಗ್ನೇಯ ಸುಲವೆಸಿ ಪ್ರಾಂತ್ಯದ ಮುನಾ ರೀಜೆನ್ಸಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. “ಕೋಳಿ ಅಥವಾ ಮೊಟ್ಟೆ ಈ ಎರಡರಲ್ಲಿ ಯಾವುದು ಮೊದಲು ಬಂದದ್ದು?” ಎಂಬ ಕ್ಲಾಸಿಕ್ ಒಗಟಿನ ಮೇಲೆ ಕುಡುಕರಿಬ್ಬರ ನಡುವೆ ವಾದ ಶುರುವಾಗಿದೆ. ಕುಡಿದ ಮತ್ತಿನಲ್ಲಿದ್ದ ಇಬ್ಬರೂ ತಾನು ಹೇಳಿದ ಉತ್ತರವೇ ಸರಿಯೆಂದು ಜಗಳವಾಡಿದ್ದಾರೆ. ಅದೇ ಕೋಪದಲ್ಲಿ ಒಬ್ಬ ಕುಡುಕ ತನ್ನ ಸ್ನೇಹಿತನನ್ನು ಇರಿದು ಕೊಂದಿದ್ದಾನೆ.

ಇದನ್ನೂ ಓದಿ: Viral Video: ವ್ಯಕ್ತಿಯ ಕುತ್ತಿಗೆಗೆ ಸುತ್ತಿಕೊಂಡು ನುಂಗಲೆತ್ನಿಸಿದ 15 ಅಡಿ ಉದ್ದದ ಹೆಬ್ಬಾವು; ಶಾಕಿಂಗ್ ವಿಡಿಯೋ ವೈರಲ್

ಕೊಲೆಯ ಆರೋಪದ ಮೇಲೆ ಆ ವ್ಯಕ್ತಿಯನ್ನು ಬಂಧಿಸಲಾಗಿದೆ. ಜುಲೈ 24ರಂದು ಈ ದುರಂತ ಘಟನೆ ನಡೆದಿದೆ. ತನ್ನ ಗೆಳೆಯನನ್ನು ಕುಡಿಯಲು ಆಹ್ವಾನಿಸಿದ ಡಿಆರ್ ಎಂಬ ವ್ಯಕ್ತಿ ಹಲವಾರು ಸುತ್ತಿನ ಡ್ರಿಂಕ್ ಮುಗಿಸಿದ್ದರು. ಆಗ ಕೋಳಿ, ಮೊಟ್ಟೆಯ ವಿಷಯ ಚರ್ಚೆಗೆ ಬಂದಿತು. ಈ ಬಿಸಿ ಬಿಸಿ ಚರ್ಚೆ ವಿಪರೀತಕ್ಕೆ ಹೋಗಿ, ಜಗಳಕ್ಕೆ ತಿರುಗಿತು. ಹೊಡೆಯಲು ಬಂದ ಡಿಆರ್​ನಿಂದ ಆ ಸ್ನೇಹಿತ ತಪ್ಪಿಸಿಕೊಳ್ಳಲು ಓಡಿದ್ದಾನೆ. ಆಗ ಅವನ ಹಿಂದೆ ಓಡಿದ ಡಿಆರ್​ ಅಂಗಳದಲ್ಲಿ ಬಿದ್ದಿದ್ದ ಮಣ್ಣ ಅಗೆಯುವ ಚೂಪಾದ ಆಯುಧದಿಂದ ಆತನಿಗೆ ಹೊಡೆದು ಕೊಲೆ ಮಾಡಿದ್ದಾನೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ