ಸೈಬರ್​ ಕ್ರೈಂ ಪ್ರಕರಣ ತಡೆಗಟ್ಟಲು ಪ್ರತ್ಯೇಕ CEN ಘಟಕಗಳ ಆರಂಭ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇತ್ತೀಚೆಗೆ ಸೈಬರ್​ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿವೆ. ಸೈಬರ್ ಕ್ರೈಂ ಪೊಲೀಸ್‌ ಠಾಣೆಯಲ್ಲಿ 10ಸಾವಿಕ್ಕೂ ಅಧಿಕ ದೂರು ದಾಖಲಾಗಿತ್ತು. ಸೈಬರ್ ಕ್ರೈಂ ಪೊಲೀಸರಿಗೆ ಅಪರಾಧ ಪ್ರಕರಣಗಳನ್ನ ಪತ್ತೆಹಚ್ಚುವುದಕ್ಕೆ ಸಾಕಷ್ಟು ತಲೆನೋವಾಗಿತ್ತು. ಹೀಗಾಗಿ ನಗರದ 8 ವಿಭಾಗಗಳಲ್ಲಿ ಪ್ರತ್ಯೆಕ ಸೈಬರ್ ಕ್ರೈಂ ಪೊಲೀಸ್ ಠಾಣೆಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ದಾರೆ. CEN-ಸೈಬರ್ ಕ್ರೈಂ, ಆರ್ಥಿಕ ಅಪರಾಧ, ಮಾದಕದ್ರವ್ಯ ನಿಗ್ರಹ ಘಟಕವಾಗಿದೆ. ನಗರದ 8 ಡಿಸಿಪಿ ವಿಭಾಗಗಳಲ್ಲಿ ಪ್ರತ್ಯೇಕ ಸೈಬರ್​ ಕ್ರೈಂ ಠಾಣೆಗಳಿಗೆ ವಿಧಾನಸೌಧದ ಬ್ಯಾಂಕ್ವೆಟ್​ ಹಾಲ್​ನಲ್ಲಿ […]

ಸೈಬರ್​ ಕ್ರೈಂ ಪ್ರಕರಣ ತಡೆಗಟ್ಟಲು ಪ್ರತ್ಯೇಕ CEN ಘಟಕಗಳ ಆರಂಭ
ಸಾಧು ಶ್ರೀನಾಥ್​

Updated on: Dec 17, 2019 | 2:16 PM

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇತ್ತೀಚೆಗೆ ಸೈಬರ್​ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿವೆ. ಸೈಬರ್ ಕ್ರೈಂ ಪೊಲೀಸ್‌ ಠಾಣೆಯಲ್ಲಿ 10ಸಾವಿಕ್ಕೂ ಅಧಿಕ ದೂರು ದಾಖಲಾಗಿತ್ತು. ಸೈಬರ್ ಕ್ರೈಂ ಪೊಲೀಸರಿಗೆ ಅಪರಾಧ ಪ್ರಕರಣಗಳನ್ನ ಪತ್ತೆಹಚ್ಚುವುದಕ್ಕೆ ಸಾಕಷ್ಟು ತಲೆನೋವಾಗಿತ್ತು. ಹೀಗಾಗಿ ನಗರದ 8 ವಿಭಾಗಗಳಲ್ಲಿ ಪ್ರತ್ಯೆಕ ಸೈಬರ್ ಕ್ರೈಂ ಪೊಲೀಸ್ ಠಾಣೆಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

CEN-ಸೈಬರ್ ಕ್ರೈಂ, ಆರ್ಥಿಕ ಅಪರಾಧ, ಮಾದಕದ್ರವ್ಯ ನಿಗ್ರಹ ಘಟಕವಾಗಿದೆ. ನಗರದ 8 ಡಿಸಿಪಿ ವಿಭಾಗಗಳಲ್ಲಿ ಪ್ರತ್ಯೇಕ ಸೈಬರ್​ ಕ್ರೈಂ ಠಾಣೆಗಳಿಗೆ ವಿಧಾನಸೌಧದ ಬ್ಯಾಂಕ್ವೆಟ್​ ಹಾಲ್​ನಲ್ಲಿ ಅಧಿಕೃತವಾಗಿ ಸಿಎಂ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಗೃಹಸಚಿವ ಬಸವರಾಜ ಬೊಮ್ಮಾಯಿ, ಡಿಸಿಎಂ ಲಕ್ಷ್ಮಣ ಸವದಿ, ಶಾಸಕ ರಿಜ್ವಾನ್ ಅರ್ಷದ್, ಡಿಜಿ & ಐಜಿಪಿ ನೀಲಮಣಿ ಎನ್​.ರಾಜು ಸೇರಿ ಹಲವರು ಉಪಸ್ಥಿತರಿದ್ದರು.

Published On - 12:45 pm, Tue, 17 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us