ಚಿಕ್ಕಬಳ್ಳಾಪುರ: ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ

ಚಿಕ್ಕಬಳ್ಳಾಪುರ(Chikkaballapur)ದ ಇಂದಿರಾನಗರದ ಮನೆಯೊಂದರಲ್ಲಿ ವ್ಯಕ್ತಿಯೋರ್ವ ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ಘಟನೆ ನಡೆದಿದ್ದು, ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಹತ್ಯೆಗೆ ಹಳೆ ದ್ವೇಷವೇನಾದರೂ ಇತ್ತಾ?, ಎಂಬ ಕುರಿತು ವಿಚಾರಣೆ ಶುರುವಾಗಿದೆ.

ಚಿಕ್ಕಬಳ್ಳಾಪುರ: ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ
ಆರೋಪಿ ರಾಘವೇಂದ್ರ, ಮೃತ ವ್ಯಕ್ತಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Feb 21, 2024 | 9:50 PM

ಚಿಕ್ಕಬಳ್ಳಾಪುರ, ಫೆ.21: ವ್ಯಕ್ತಿಯೋರ್ವ ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ(Chikkaballapur)ದ ಇಂದಿರಾನಗರದ ಮನೆಯಲ್ಲಿ ನಡೆದಿದೆ. ಆಂಜಿನಪ್ಪ(35) ಮೃತ ರ್ದುದೈವಿ. ಗೃಹಿಣಿ ಆಶಾ ಎಂಬುವವರು ಒಂಟಿಯಾಗಿದ್ದ ವೇಳೆ ಆಂಜಿನಪ್ಪ ಬೆಡ್​ರೂಮ್​ಗೆ ನುಗ್ಗಿದ್ದಾನೆ. ಕೂಡಲೇ ಎಚ್ಚೆತ್ತ ಮಹಿಳೆ ಮೈದುನನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಮನೆಗೆ ಬಂದ ಮೈದುನ ರಾಘವೇಂದ್ರ ಎಂಬಾತ ಕಬ್ಬಿಣದ ರಾಡ್​ನಿಂದ ಹಲ್ಲೆ ನಡೆಸಿ ಆಂಜಿನಪ್ಪನನ್ನು ಹತ್ಯೆ ಮಾಡಿದ್ದಾನೆ. ಬಳಿಕ ತಾನೇ ಹೋಗಿ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೌಟುಂಬಿಕ ಕಲಹ ಹಿನ್ನೆಲೆ ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಉತ್ತರ ತಾಲೂಕಿನ ಹೆಸರಘಟ್ಟ ರಸ್ತೆಯ ತರಬನಹಳ್ಳಿಯಲ್ಲಿ ರೈಲಿಗೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಸುರೇಶ್(43) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೌಟುಂಬಿಕ ಕಲಹ ಹಿನ್ನೆಲೆ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಯಶವಂತಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಶುರುಮಾಡಿದ್ದಾರೆ.

ಇದನ್ನೂ ಓದಿ:ಕಡೂರಿನಲ್ಲಿ ಬೆಂಗಳೂರಿನ ಕ್ಯಾಬ್ ಡ್ರೈವರ್ ಕೊಲೆ: ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ಮಹಿಳೆ ಸಜೀವ ದಹನ

ಚಿತ್ರದುರ್ಗ: ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ಮಹಿಳೆ ಸಜೀವ ದಹನವಾದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಕಳವಿಬಾವಿ ಪ್ರದೇಶ ಬಳಿ ನಡೆದಿದೆ. ಗುಡಿಸಿಲಿನಲ್ಲಿ ವಾಸವಾಗಿದ್ದ ಜಯಬಾಯಿ(50)ಮೃತ ರ್ದುದೈವಿ. ಈ ಕುರಿತು ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:38 pm, Wed, 21 February 24

Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
Follow Us