Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪ್ಪಗಿದ್ದಾಳೆಂದು ಗಂಡನಿಂದ ಅವಮಾನ; ನೇಣು ಬಿಗಿದುಕೊಂಡು ಚಿಂತಾಮಣಿಯ ನವವಿವಾಹಿತೆ ಆತ್ಮಹತ್ಯೆ

ಮದುವೆಯಾಗಿ 7 ತಿಂಗಳಲ್ಲೇ ಚಿಕ್ಕಬಳ್ಳಾಪುರದ ಚಿಂತಾಮಣಿಯ ನವವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವರದಕ್ಷಿಣೆ ಕಿರುಕುಳವೇ ಈ ದುರಂತಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಆ ಮಹಿಳೆಗೆ ಆಕೆಯ ಗಂಡ ಆಕೆಯ ರೂಪದ ಬಗ್ಗೆ ಅವಮಾನ ಮಾಡುತ್ತಿದ್ದ ಎನ್ನಲಾಗಿದೆ.

ಕಪ್ಪಗಿದ್ದಾಳೆಂದು ಗಂಡನಿಂದ ಅವಮಾನ; ನೇಣು ಬಿಗಿದುಕೊಂಡು ಚಿಂತಾಮಣಿಯ ನವವಿವಾಹಿತೆ ಆತ್ಮಹತ್ಯೆ
ಆತ್ಮಹತ್ಯೆ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಸುಷ್ಮಾ ಚಕ್ರೆ

Updated on: Sep 16, 2024 | 4:15 PM

ಚಿಕ್ಕಬಳ್ಳಾಪುರ: ಹೆಂಡತಿ ಕಪ್ಪಾಗಿದ್ದಾಳೆಂದು ಮದುವೆಯಾದಾಗಿನಿಂದಲೂ ಗಂಡ ಅವಮಾನ ಮಾಡುತ್ತಿದ್ದ ಕಾರಣದಿಂದ ಚಿಕ್ಕಬಳ್ಳಾಪುರದ ಚಿಂತಾಮಣಿಯ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆಯಾದ 7 ತಿಂಗಳಲ್ಲೇ ಆ ಮಹಿಳೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಆಕೆಯ ಅತ್ತೆ, ಮಾವ, ಮೈದುನ, ಗಂಡ ವರದಕ್ಷಿಣೆಗಾಗಿ ತಮ್ಮ ಮಗಳನ್ನು ಪೀಡಿಸುತ್ತಿದ್ದರು ಎಂದು ಮೃತ ಮಹಿಳೆಯ ಪೋಷಕರು ಆರೋಪಿಸಿದ್ದಾರೆ.

ಬಿಂದುಶ್ರೀ ಎಂಬ 22 ವರ್ಷದ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ. ಆಕೆಯ ಗಂಡ ರಾಘವೇಂದ್ರ ಹೆಚ್.ಎಂ., ಮಾವ ಎನ್.ಮುನಿರಾಜ, ಅತ್ತೆ ಲತಾ ಹಾಗೂ ನರಸಿಂಹಯ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಬಿಂದುಶ್ರೀ ಅವರ ಗಂಡ ರಾಘವೇಂದ್ರ ಸರ್ಕಾರಿ ಸೌಮ್ಯದ ಪ್ರತಿಷ್ಟಿತ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇದಿಷ್ಟೇ ಅಲ್ಲದೆ, ಮಗಳ ಆತ್ಮಹತ್ಯೆಯಿಂದ ಆಘಾತಗೊಂಡ ಮೃತ ಮಹಿಳೆಯ ತಂದೆ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ; ಜನರಿಗಾಗಿ ರಾಜೀನಾಮೆ ನೀಡಲು ಮುಂದಾದ ಮಮತಾ ಬ್ಯಾನರ್ಜಿ

ಬಿಂದುಶ್ರೀ ಕಪ್ಪಗಿದ್ದಾರೆ ಎಂದು ಆಕೆಯನ್ನು ಅವಮಾನಿಸಿ ವರದಕ್ಷಿಣಿ ಕಿರುಕುಳ ನೀಡಿರುವ ಆರೋಪ ಆಕೆಯ ಗಂಡನ ಮನೆಯವರ ಮೇಲೆ ಕೇಳಿಬಂದಿದೆ. 20 ಲಕ್ಷ ರೂಪಾಯಿ ಹಣ ಕೊಡುವಂತೆ ಕಿರುಕುಳ ಆರೋಪ ಕೇಳಿಬಂದಿದೆ. ಬಿಂದುಶ್ರೀ ಮದುವೆಯಾಗಿ 7 ತಿಂಗಳಾಗಿತ್ತು. ಮದುವೆ ವೇಳೆ 60 ಗ್ರಾಂ ತೂಕದ ಚಿನ್ನದ ಆಭರಣವನ್ನು ವರದಕ್ಷಿಣೆಯಾಗಿ ನೀಡಲಾಗಿತ್ತು. ಮೊದಲ 2 ತಿಂಗಳು ಆಕೆಯ ಗಂಡನ ಮನೆಯಲ್ಲಿ ಚೆನ್ನಾಗಿ ನೋಡಿಕೊಂಡಿದ್ದರು. ನಂತರ ಡಿಗ್ರಿ ಕೊನೆಯ ವರ್ಷದ ಪರೀಕ್ಷೆ ಬರೆಯಲು ಮಗಳ ನಮ್ಮ ಮನೆಗೆ ಬಂದಾಗ ವಾಪಾಸ್ ತಮ್ಮ ಮನೆಗೆ ಬರುವಾಗ 20 ಲಕ್ಷ ರೂ. ಹಣ ತರುವಂತೆ ಆಕೆಯ ಮಾವ ಹೇಳಿ ಕಳುಹಿಸಿದ್ದರು. ಆಕೆ ಮನೆಗೆ ಹೋದಾಗ ವರದಕ್ಷಿಣೆ ತರಲಿಲ್ಲವೆಂದರೆ ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು ಎಂದು ಬಿಂದುಶ್ರೀ ತವರು ಮನೆಯವರು ದೂರು ನೀಡಿದ್ದಾರೆ.

ಇದನ್ನೂ ಓದಿ: ಮನೆಗೆ ಓಡೋಡಿ ಬಂದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ಜೀವ ಉಳಿಸಿದ ಪೊಲೀಸರು

ಬಿಂದುಶ್ರೀಯ ಗಂಡ ರಾಘವೇಂದ್ರಗೆ ಮದುವೆ ಸಂದರ್ಭದಲ್ಲಿ 60 ಗ್ರಾಂ ಬಂಗಾರದ ಚಿನ್ನಾಭರಣಗಳನ್ನು ನೀಡಲಾಗಿತ್ತು. 60 ಗ್ರಾಂ ಬದಲು 100 ಗ್ರಾಂ. ಚಿನ್ನಾಭರಣ ಕೊಡಬೇಕಿತ್ತೆಂದು ಪದೇಪದೇ ಗಲಾಟೆ ಮಾಡುತ್ತಿದ್ದ. ಚಿಂತಾಮಣಿಯಿಂದ ಹೊಸಕೋಟೆ ತಾಲ್ಲೂಕಿನ ಹಿರಂಡಹಳ್ಳಿ ಗ್ರಾಮಕ್ಕೆ ಮದುವೆ ಮಾಡಿಕೊಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಂತಾಮಣಿ ನಗರಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದೆ.

ತಂದೆ-ಮಗ ಇಬ್ಬರೂ ಕೇಂದ್ರ ಸರ್ಕಾರಿ ಸೌಮ್ಯದ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೂ, ವರದಕ್ಷಿಣೆ ಎಂಬ ದನದಾನಕ್ಕೆ ಸೊಸೆಯನ್ನು ಬಲಿ ತೆಗೆದುಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಸುವನ್ನು ಓಡಿಸಿಕೊಂಡು ಬೆಡ್ ರೂಂಗೆ ನುಗ್ಗಿದ ಗೂಳಿ; ವಿಡಿಯೋ ವೈರಲ್
ಹಸುವನ್ನು ಓಡಿಸಿಕೊಂಡು ಬೆಡ್ ರೂಂಗೆ ನುಗ್ಗಿದ ಗೂಳಿ; ವಿಡಿಯೋ ವೈರಲ್
ದರ್ಶನ್ ತೆರೆಮೇಲೆ ಕಾಣಿಸಿದ ಕೂಡಲೇ ಮೈಮರೆತು ಕುಣಿದಾಡಿದ ಫ್ಯಾನ್ಸ್
ದರ್ಶನ್ ತೆರೆಮೇಲೆ ಕಾಣಿಸಿದ ಕೂಡಲೇ ಮೈಮರೆತು ಕುಣಿದಾಡಿದ ಫ್ಯಾನ್ಸ್
ಅತಿಯಾದ ಮಾತೇ ಯತ್ನಾಳ್ ಪಾಲಿಗೆ ಕುತ್ತಾಯಿತು: ವಿಜಯಾನಂದ್ ಕಾಶಪ್ಪನವರ್
ಅತಿಯಾದ ಮಾತೇ ಯತ್ನಾಳ್ ಪಾಲಿಗೆ ಕುತ್ತಾಯಿತು: ವಿಜಯಾನಂದ್ ಕಾಶಪ್ಪನವರ್
ಲಿಂಗಾಯತರು ಬಿಜೆಪಿನ ಪುನಃ ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದರು: ಸ್ವಾಮೀಜಿ
ಲಿಂಗಾಯತರು ಬಿಜೆಪಿನ ಪುನಃ ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದರು: ಸ್ವಾಮೀಜಿ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ