AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಓಡಿ ಹೋಗಿ ಮದುವೆಯಾದ ಪ್ರೇಮಿಗಳು, ಯುವಕನ ಪೋಷಕರ ಮೇಲೆ ಮಾರಣಾಂತಿಕ ಹಲ್ಲೆ

ಸದ್ಯ ಗುಡಿಬಂಡೆ ಠಾಣೆ ಪೊಲೀಸರು ಗ್ರಾಮದಲ್ಲಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಯುವಕನ ತಂದೆ ತಾಯಿ ಗಾಯಗೊಂಡು ಆಸ್ಪತ್ರೆ ಸೇರಿರುವ ಕಾರಣ ಹುಡುಗಿಯ ಕಡೆಯವರು ಕೆಲವರು ಗಾಯವಾದಂತೆ ನಟಿಸಿ ಅವರು ಸಹ ಗುಡಿಬಂಡೆ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಚಿಕ್ಕಬಳ್ಳಾಪುರ: ಓಡಿ ಹೋಗಿ ಮದುವೆಯಾದ ಪ್ರೇಮಿಗಳು, ಯುವಕನ ಪೋಷಕರ ಮೇಲೆ ಮಾರಣಾಂತಿಕ ಹಲ್ಲೆ
ಹಲ್ಲೆಗೊಳಗಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Dec 19, 2023 | 2:42 PM

Share

ಚಿಕ್ಕಬಳ್ಳಾಪುರ, ಡಿಸೆಂಬರ್ 19: ಬೆಳಗಾವಿಯಲ್ಲಿ ನಡೆದ ಪ್ರೇಮ ಪ್ರಕರಣವೊಂದರಲ್ಲಿ ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಅಮಾನವೀಯವಾಗಿ ನಡೆಸಿಕೊಂಡ ಘಟನೆಯ ಕಹಿ ನೆನಪು ಮಾಸುವ ಮುನ್ನ ಇತ್ತ ಚಿಕ್ಕಬಳ್ಳಾಪುರದಲ್ಲಿ (Chikkaballapur) ಅಂಥದ್ದೇ ಘಟನೆ ನಡೆದಿದೆ. ಪ್ರೇಮಿಗಳು ಓಡಿ ಹೋಗಿ ಮದುವೆ ಮಾಡಿಕೊಂಡ ಕಾರಣ ಯುವತಿಯ ಕಡೆಯವರು ಯುವನ ತಂದೆ ತಾಯಿ ಮೇಲೆ ಮಾರಣಾಂತಿಕವಾಗಿ ಹೊಡೆದು ಗಾಯಗೋಳಿಸಿದ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ದಪ್ಪರ್ತಿ ಗ್ರಾಮದಲ್ಲಿ ಘಟನೆ ನಡೆದಿದೆ. ಯುವಕ, ಯುವತಿ ಒಂದೇ ಜಾತಿ, ಒಂದೇ ಸಮುದಾಯದವರಾಗಿದ್ದು, ಅಕ್ಕ-ಪಕ್ಕದ ನಿವಾಸಿಗಳು. ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸಿ ಕೆಲವು ದಿನಗಳ ಹಿಂದೆ ಮನೆ ಬಿಟ್ಟು ಓಡಿ ಹೋಗಿ ಮದುವೆಯಾಗಿದ್ದರು. ಇವರ ಮದುವೆಗೆ ಯುವತಿಯ ಮನೆಯವರು ತೀವ್ರ ವಿರೋದ ವ್ಯಕ್ತಪಡಿಸಿದ ಕಾರಣ ಗ್ರಾಮಸ್ಥರು ನ್ಯಾಯ ಪಂಚಾಯತಿ ಮಾಡಿ ಯುವತಿಯನ್ನು ತಂದೆ ತಾಯಿ ಜೊತೆ ಮನೆಗೆ ಕಳುಹಿಸಿ ಕೊಟ್ಟಿದ್ದರು. ಆದ್ರೆ ಇಬ್ಬರೂ ಅಷ್ಟಕ್ಕೆ ಸುಮ್ಮನಾಗದೆ ಸೋಮವಾರ ಮತ್ತೆ ಒಂದುಗೂಡಿ ಮನೆಯಿಂದ ಎಸ್ಕೇಪ್ ಆಗಿದ್ದರು.

ಇದರಿಂದ ಕುಪಿತಗೊಂಡ ಯುವತಿಯ ಕಡೆಯವರು ಯುವಕನ ತಂದೆ ತಾಯಿ ಇದ್ದ ಮನೆಯ ಮೇಲೆ ದಾಳಿ ಮಾಡಿ ಹಲ್ಲೆ ಮಾಡಿದ್ದಾರೆ. ಘಟನೆಯಲ್ಲಿ ಯುವಕನ ತಂದೆ ತಾಯಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರಿಂದ ಅತ್ಯಾಚಾರ

ಸದ್ಯ ಗುಡಿಬಂಡೆ ಠಾಣೆ ಪೊಲೀಸರು ಗ್ರಾಮದಲ್ಲಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಯುವಕನ ತಂದೆ ತಾಯಿ ಗಾಯಗೊಂಡು ಆಸ್ಪತ್ರೆ ಸೇರಿರುವ ಕಾರಣ ಹುಡುಗಿಯ ಕಡೆಯವರು ಕೆಲವರು ಗಾಯವಾದಂತೆ ನಟಿಸಿ ಅವರು ಸಹ ಗುಡಿಬಂಡೆ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತ ಯುವಕನ ತಾಯಿಯ ತಲೆ ಹಾಗೂ ಅವರ ತಂದೆಯ ಹೊಟ್ಟೆಗೆ ಗಾಯಗಳಾಗಿವೆ.

ಇತ್ತಿಚಿಗೆ ಇದೇ ಗುಡಿಬಂಡೆ ತಾಲೂಕಿಮ ಮೇಲಿನಅಪ್ಪಿರೆಡ್ಡಿಹಳ್ಳಿ ಗ್ರಾಮದಲ್ಲಿ ಅಂತರ್ಜಾತಿ ಪ್ರೇಮಿಗಳು ಓಡಿ ಹೋಗಿ ಮದುವೆ ಮಾಡಿಕೊಂಡಿರುವ ಕಾರಣ ಕುಪಿತಗೊಂಡ ಹುಡುಗಿಯ ಕಡೆವರು ಯುವಕನ ಆಟೊ ಸುಟ್ಟು ಹಾಕಿದ್ದರು.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ