AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಓಡಿ ಹೋಗಿ ಮದುವೆಯಾದ ಪ್ರೇಮಿಗಳು, ಯುವಕನ ಪೋಷಕರ ಮೇಲೆ ಮಾರಣಾಂತಿಕ ಹಲ್ಲೆ

ಸದ್ಯ ಗುಡಿಬಂಡೆ ಠಾಣೆ ಪೊಲೀಸರು ಗ್ರಾಮದಲ್ಲಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಯುವಕನ ತಂದೆ ತಾಯಿ ಗಾಯಗೊಂಡು ಆಸ್ಪತ್ರೆ ಸೇರಿರುವ ಕಾರಣ ಹುಡುಗಿಯ ಕಡೆಯವರು ಕೆಲವರು ಗಾಯವಾದಂತೆ ನಟಿಸಿ ಅವರು ಸಹ ಗುಡಿಬಂಡೆ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಚಿಕ್ಕಬಳ್ಳಾಪುರ: ಓಡಿ ಹೋಗಿ ಮದುವೆಯಾದ ಪ್ರೇಮಿಗಳು, ಯುವಕನ ಪೋಷಕರ ಮೇಲೆ ಮಾರಣಾಂತಿಕ ಹಲ್ಲೆ
ಹಲ್ಲೆಗೊಳಗಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Dec 19, 2023 | 2:42 PM

Share

ಚಿಕ್ಕಬಳ್ಳಾಪುರ, ಡಿಸೆಂಬರ್ 19: ಬೆಳಗಾವಿಯಲ್ಲಿ ನಡೆದ ಪ್ರೇಮ ಪ್ರಕರಣವೊಂದರಲ್ಲಿ ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಅಮಾನವೀಯವಾಗಿ ನಡೆಸಿಕೊಂಡ ಘಟನೆಯ ಕಹಿ ನೆನಪು ಮಾಸುವ ಮುನ್ನ ಇತ್ತ ಚಿಕ್ಕಬಳ್ಳಾಪುರದಲ್ಲಿ (Chikkaballapur) ಅಂಥದ್ದೇ ಘಟನೆ ನಡೆದಿದೆ. ಪ್ರೇಮಿಗಳು ಓಡಿ ಹೋಗಿ ಮದುವೆ ಮಾಡಿಕೊಂಡ ಕಾರಣ ಯುವತಿಯ ಕಡೆಯವರು ಯುವನ ತಂದೆ ತಾಯಿ ಮೇಲೆ ಮಾರಣಾಂತಿಕವಾಗಿ ಹೊಡೆದು ಗಾಯಗೋಳಿಸಿದ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ದಪ್ಪರ್ತಿ ಗ್ರಾಮದಲ್ಲಿ ಘಟನೆ ನಡೆದಿದೆ. ಯುವಕ, ಯುವತಿ ಒಂದೇ ಜಾತಿ, ಒಂದೇ ಸಮುದಾಯದವರಾಗಿದ್ದು, ಅಕ್ಕ-ಪಕ್ಕದ ನಿವಾಸಿಗಳು. ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸಿ ಕೆಲವು ದಿನಗಳ ಹಿಂದೆ ಮನೆ ಬಿಟ್ಟು ಓಡಿ ಹೋಗಿ ಮದುವೆಯಾಗಿದ್ದರು. ಇವರ ಮದುವೆಗೆ ಯುವತಿಯ ಮನೆಯವರು ತೀವ್ರ ವಿರೋದ ವ್ಯಕ್ತಪಡಿಸಿದ ಕಾರಣ ಗ್ರಾಮಸ್ಥರು ನ್ಯಾಯ ಪಂಚಾಯತಿ ಮಾಡಿ ಯುವತಿಯನ್ನು ತಂದೆ ತಾಯಿ ಜೊತೆ ಮನೆಗೆ ಕಳುಹಿಸಿ ಕೊಟ್ಟಿದ್ದರು. ಆದ್ರೆ ಇಬ್ಬರೂ ಅಷ್ಟಕ್ಕೆ ಸುಮ್ಮನಾಗದೆ ಸೋಮವಾರ ಮತ್ತೆ ಒಂದುಗೂಡಿ ಮನೆಯಿಂದ ಎಸ್ಕೇಪ್ ಆಗಿದ್ದರು.

ಇದರಿಂದ ಕುಪಿತಗೊಂಡ ಯುವತಿಯ ಕಡೆಯವರು ಯುವಕನ ತಂದೆ ತಾಯಿ ಇದ್ದ ಮನೆಯ ಮೇಲೆ ದಾಳಿ ಮಾಡಿ ಹಲ್ಲೆ ಮಾಡಿದ್ದಾರೆ. ಘಟನೆಯಲ್ಲಿ ಯುವಕನ ತಂದೆ ತಾಯಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರಿಂದ ಅತ್ಯಾಚಾರ

ಸದ್ಯ ಗುಡಿಬಂಡೆ ಠಾಣೆ ಪೊಲೀಸರು ಗ್ರಾಮದಲ್ಲಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಯುವಕನ ತಂದೆ ತಾಯಿ ಗಾಯಗೊಂಡು ಆಸ್ಪತ್ರೆ ಸೇರಿರುವ ಕಾರಣ ಹುಡುಗಿಯ ಕಡೆಯವರು ಕೆಲವರು ಗಾಯವಾದಂತೆ ನಟಿಸಿ ಅವರು ಸಹ ಗುಡಿಬಂಡೆ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತ ಯುವಕನ ತಾಯಿಯ ತಲೆ ಹಾಗೂ ಅವರ ತಂದೆಯ ಹೊಟ್ಟೆಗೆ ಗಾಯಗಳಾಗಿವೆ.

ಇತ್ತಿಚಿಗೆ ಇದೇ ಗುಡಿಬಂಡೆ ತಾಲೂಕಿಮ ಮೇಲಿನಅಪ್ಪಿರೆಡ್ಡಿಹಳ್ಳಿ ಗ್ರಾಮದಲ್ಲಿ ಅಂತರ್ಜಾತಿ ಪ್ರೇಮಿಗಳು ಓಡಿ ಹೋಗಿ ಮದುವೆ ಮಾಡಿಕೊಂಡಿರುವ ಕಾರಣ ಕುಪಿತಗೊಂಡ ಹುಡುಗಿಯ ಕಡೆವರು ಯುವಕನ ಆಟೊ ಸುಟ್ಟು ಹಾಕಿದ್ದರು.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್