AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟರ ಬೇಟೆಯಾಡುತ್ತಿರುವ ಲೋಕಾಯುಕ್ತ; ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ದಾಳಿ, ಮೂವರು ವಶಕ್ಕೆ

ರಾಜ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸುತ್ತಾ ಭ್ರಷ್ಟ ಅಧಿಕಾರಿಗಳ ಚಳಿ ಬಿಡುತ್ತಿದ್ದಾರೆ. ಇಂದು ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ದಾಳಿ ನಡೆಸಿ ಮೂವರು ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಭ್ರಷ್ಟರ ಬೇಟೆಯಾಡುತ್ತಿರುವ ಲೋಕಾಯುಕ್ತ; ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ದಾಳಿ, ಮೂವರು ವಶಕ್ಕೆ
ಬಾಗೇಪಲ್ಲಿ ಆರ್​ಟಿಒ ಚೆಕ್​ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ
TV9 Web
| Edited By: |

Updated on:Oct 22, 2022 | 10:45 AM

Share

ಚಿಕ್ಕಬಳ್ಳಾಪುರ: ಎಸಿಬಿ ರದ್ದುಗೊಂಡ ನಂತರ ರಾಜ್ಯದಲ್ಲಿ ಭ್ರಷ್ಟರ ಬೇಟೆಯಾಡುತ್ತಿರುವ ಲೋಕಾಯುಕ್ತ ಅಲ್ಲೊಂದು ಇಲ್ಲೊಂದು ಬೇಟೆಯಾಡುತ್ತಲೇ ಇದೆ. ನಿನ್ನೆ ಬೆಂಗಳೂರು, ಕೊಡಗು, ಮೈಸೂರಿನಲ್ಲಿ ಒಟ್ಟು ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿತ್ತು. ಇಂದು ಚಿಕ್ಕಬಳ್ಳಾಪುರದಲ್ಲಿ ಮತ್ತು ಕೋಲಾರದಲ್ಲಿ ಬೇಟೆಯಾಡುತ್ತಿದೆ. ವಾಹನ ಚಾಲಕರಿಂದ ಹೆಚ್ಚುವರಿ ಹಣ ವಸೂಲಿ ಆರೋಪ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಆರ್​ಟಿಒ ಚೆಕ್​ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರಲ್ಲಿರುವ ಈ ಚೆಕ್​ಪೋಸ್ಟ್​ ಮೇಲೆ ದಾಳಿ ನಡೆಸಿದಾಗ ಹಣ ಪತ್ತೆಯಾದ ಹಿನ್ನೆಲೆ ಅಧಿಕಾರಿಗಳು ದಾಖಲೆಗಳ ಜೊತೆ ಹಣದ ಮೂಲದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್​ಪಿ ಪವನ್ ನೆಜ್ಜೂರು ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಆರ್​ಟಿಒ ಇನ್ಸ್​ಪೆಕ್ಟರ್ ಮಹಾದೇವಪ್ಪ ಮತ್ತು ಸಿಬ್ಬಂದಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸಣ್ಣ ನೀರಾವರಿ ಇಲಾಖೆಯ ಎಇಇ ಲೋಕಾಯುಕ್ತ ಬಲೆಗೆ

ಕೋಲಾರ: ನಿನ್ನೆಯಷ್ಟೇ 50 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಬೆಸ್ಕಾಂ ಎಇ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದರು. ಇದೀಗ ಕೋಲಾರದಲ್ಲಿ ಸಣ್ಣ ನೀರಾವರಿ ಇಲಾಖೆಯ ಎಇಇ ಲಂಚಕ್ಕೆ ಕೈಯೊಡ್ಡುತ್ತಿದ್ದಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

ಕೋಲಾರ ಸಣ್ಣನೀರಾವರಿ ಇಲಾಖೆ ಎಇಇ ಗುರುಶಂಕರ್ ಅವರು ಚೆಕ್ ಡ್ಯಾಂ ನಿರ್ಮಾಣದ ಬಿಲ್ ನೀಡಲು ಮಾಲೂರು ಗುತ್ತಿಗೆದಾರ ರಾಘವೇಂದ್ರ ಎಂಬುವರಲ್ಲಿ 40 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಅದರಂತೆ ಕೋಲಾರ ತಾಲ್ಲೂಕು ನರಸಾಪುರ ರಾಷ್ಟ್ರೀಯ ಹೆದ್ದಾರಿ-75 ರ ಕಾಫಿಡೇ ಡೇ ಬಳಿ 40 ಲಕ್ಷ ರೂ. ಪೈಕಿ 40 ಸಾವಿರ ರೂಪಾಯಿ ಪಡೆಯುತ್ತಿದ್ದಾಗ ಅಧಿಕಾರಿಗಳು ದಾಳಿ ನಡೆಸಿ ಗುರುಶಂಕರ್​ರನ್ನು ಬಂಧಿಸಿದ್ದಾರೆ. ಲೋಕಾಯುಕ್ತ ಎಸ್​ಪಿ ಉಮೇಶ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:45 am, Sat, 22 October 22

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ