AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟರ ಬೇಟೆಯಾಡುತ್ತಿರುವ ಲೋಕಾಯುಕ್ತ; ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ದಾಳಿ, ಮೂವರು ವಶಕ್ಕೆ

ರಾಜ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸುತ್ತಾ ಭ್ರಷ್ಟ ಅಧಿಕಾರಿಗಳ ಚಳಿ ಬಿಡುತ್ತಿದ್ದಾರೆ. ಇಂದು ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ದಾಳಿ ನಡೆಸಿ ಮೂವರು ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಭ್ರಷ್ಟರ ಬೇಟೆಯಾಡುತ್ತಿರುವ ಲೋಕಾಯುಕ್ತ; ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ದಾಳಿ, ಮೂವರು ವಶಕ್ಕೆ
ಬಾಗೇಪಲ್ಲಿ ಆರ್​ಟಿಒ ಚೆಕ್​ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ
TV9 Web
| Updated By: Rakesh Nayak Manchi|

Updated on:Oct 22, 2022 | 10:45 AM

Share

ಚಿಕ್ಕಬಳ್ಳಾಪುರ: ಎಸಿಬಿ ರದ್ದುಗೊಂಡ ನಂತರ ರಾಜ್ಯದಲ್ಲಿ ಭ್ರಷ್ಟರ ಬೇಟೆಯಾಡುತ್ತಿರುವ ಲೋಕಾಯುಕ್ತ ಅಲ್ಲೊಂದು ಇಲ್ಲೊಂದು ಬೇಟೆಯಾಡುತ್ತಲೇ ಇದೆ. ನಿನ್ನೆ ಬೆಂಗಳೂರು, ಕೊಡಗು, ಮೈಸೂರಿನಲ್ಲಿ ಒಟ್ಟು ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿತ್ತು. ಇಂದು ಚಿಕ್ಕಬಳ್ಳಾಪುರದಲ್ಲಿ ಮತ್ತು ಕೋಲಾರದಲ್ಲಿ ಬೇಟೆಯಾಡುತ್ತಿದೆ. ವಾಹನ ಚಾಲಕರಿಂದ ಹೆಚ್ಚುವರಿ ಹಣ ವಸೂಲಿ ಆರೋಪ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಆರ್​ಟಿಒ ಚೆಕ್​ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರಲ್ಲಿರುವ ಈ ಚೆಕ್​ಪೋಸ್ಟ್​ ಮೇಲೆ ದಾಳಿ ನಡೆಸಿದಾಗ ಹಣ ಪತ್ತೆಯಾದ ಹಿನ್ನೆಲೆ ಅಧಿಕಾರಿಗಳು ದಾಖಲೆಗಳ ಜೊತೆ ಹಣದ ಮೂಲದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್​ಪಿ ಪವನ್ ನೆಜ್ಜೂರು ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಆರ್​ಟಿಒ ಇನ್ಸ್​ಪೆಕ್ಟರ್ ಮಹಾದೇವಪ್ಪ ಮತ್ತು ಸಿಬ್ಬಂದಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸಣ್ಣ ನೀರಾವರಿ ಇಲಾಖೆಯ ಎಇಇ ಲೋಕಾಯುಕ್ತ ಬಲೆಗೆ

ಕೋಲಾರ: ನಿನ್ನೆಯಷ್ಟೇ 50 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಬೆಸ್ಕಾಂ ಎಇ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದರು. ಇದೀಗ ಕೋಲಾರದಲ್ಲಿ ಸಣ್ಣ ನೀರಾವರಿ ಇಲಾಖೆಯ ಎಇಇ ಲಂಚಕ್ಕೆ ಕೈಯೊಡ್ಡುತ್ತಿದ್ದಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

ಕೋಲಾರ ಸಣ್ಣನೀರಾವರಿ ಇಲಾಖೆ ಎಇಇ ಗುರುಶಂಕರ್ ಅವರು ಚೆಕ್ ಡ್ಯಾಂ ನಿರ್ಮಾಣದ ಬಿಲ್ ನೀಡಲು ಮಾಲೂರು ಗುತ್ತಿಗೆದಾರ ರಾಘವೇಂದ್ರ ಎಂಬುವರಲ್ಲಿ 40 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಅದರಂತೆ ಕೋಲಾರ ತಾಲ್ಲೂಕು ನರಸಾಪುರ ರಾಷ್ಟ್ರೀಯ ಹೆದ್ದಾರಿ-75 ರ ಕಾಫಿಡೇ ಡೇ ಬಳಿ 40 ಲಕ್ಷ ರೂ. ಪೈಕಿ 40 ಸಾವಿರ ರೂಪಾಯಿ ಪಡೆಯುತ್ತಿದ್ದಾಗ ಅಧಿಕಾರಿಗಳು ದಾಳಿ ನಡೆಸಿ ಗುರುಶಂಕರ್​ರನ್ನು ಬಂಧಿಸಿದ್ದಾರೆ. ಲೋಕಾಯುಕ್ತ ಎಸ್​ಪಿ ಉಮೇಶ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:45 am, Sat, 22 October 22

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ