AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಮಹಿಳೆಯ ಬರ್ಬರ ಕೊಲೆ ಮಾಡಿದ ಪ್ರಿಯಕರ ರೂಮ್​ಗೆ ಬೀಗ ಜಡಿದು ಪರಾರಿ

ಚಿಕ್ಕಬಳ್ಳಾಪುರ ನಗರದ ಚಾಮರಾಜಪೇಟೆ ವಾರ್ಡ್‌ನಲ್ಲಿ ಬಾಡಿಗೆ ರೂಮ್‌ನಲ್ಲಿ ಕತ್ತು ಕೊಯ್ದು ಮಹಿಳೆಯ ಬರ್ಬರ ಕೊಲೆ ಮಾಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ತಮಿಳುನಾಡು ಮೂಲದ ಪ್ರಿಯಕರ ದಿವಾಕರ್‌ ಎಂಬಾತ ಕೊಲೆ ಮಾಡಿದ ಶಂಕೆ ವ್ಯಕ್ತವಾಗಿದೆ. ಫೆ.7ರಂದು ದೀಪಾಳನ್ನು ಕೊಂದು ರೂಮ್‌ಗೆ ಬೀಗ ಜಡಿದು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಚಿಕ್ಕಬಳ್ಳಾಪುರ: ಮಹಿಳೆಯ ಬರ್ಬರ ಕೊಲೆ ಮಾಡಿದ ಪ್ರಿಯಕರ ರೂಮ್​ಗೆ ಬೀಗ ಜಡಿದು ಪರಾರಿ
ಚಿಕ್ಕಬಳ್ಳಾಪುರ: ಮಹಿಳೆಯ ಬರ್ಬರ ಕೊಲೆ ಮಾಡಿದ ಪ್ರಿಯಕರ ರೂಮ್​ಗೆ ಬೀಗ ಜಡಿದು ಪರಾರಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Feb 10, 2024 | 10:28 PM

Share

ಚಿಕ್ಕಬಳ್ಳಾಪುರ, ಫೆ.20: ಬಾಡಿಗೆ ರೂಮ್‌ನಲ್ಲಿ ಕತ್ತು ಕೊಯ್ದು ಮಹಿಳೆಯನ್ನು ಬರ್ಬರವಾಗಿ ಕೊಲೆ (Murder) ಮಾಡಿದ ಪ್ರಕರಣ ಚಿಕ್ಕಬಳ್ಳಾಪುರ (Chikkaballapur) ನಗರದ ಚಾಮರಾಜಪೇಟೆ ವಾರ್ಡ್‌ನಲ್ಲಿ ನಡೆದಿದೆ. ದೀಪಾ (40) ಕೊಲೆಯಾದ ವಿವಾಹಿತ ಮಹಿಳೆಯಾಗಿದ್ದು, ತಮಿಳುನಾಡು ಮೂಲದ ಪ್ರಿಯಕರ ದಿವಾಕರ್‌ ಎಂಬಾತ ಕೊಲೆ ಮಾಡಿ ರೂಮ್​ಗೆ ಬೀಗ ಹಾಕಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

ರೂಮ್​ನಿಂದ ಕೆಟ್ಟ ವಾಸನೆ ಬರುತ್ತಿರುವ ಹಿನ್ನೆಲೆ ಅನುಮಾನಗೊಂಡ ಕಟ್ಟಡದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ರೂಮ್​ ಪರಿಶೀಲಿಸಿದಾಗ ಕೊಲೆ ಪ್ರಕರಣ ಬೆಳಕಿಗೆಬಂದಿದೆ. ಸ್ಥಳಕ್ಕೆ ಚಿಕ್ಕಬಳ್ಳಾಫುರ ಎಸ್​ಪಿ ಡಿ.ಎಲ್.ನಾಗೇಶ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರೂಮ್​ ಮಾಲಿಕರಿಂದ ಮಾಹಿತಿ ಪಡೆದಿದ್ದಾರೆ.

ಇದನ್ನೂ ಓದಿ: ಧಾರವಾಡದಲ್ಲಿ ಚಿಕ್ಕಮ್ಮನನ್ನೇ ಕೊಂದ ಕೊಲೆಗಾರ ಅಂದರ್​; ಹತ್ಯೆಗೆ ಕಾರಣ ಬಾಯ್ಬಿಟ್ಟ ಹಂತಕ

ಮೃತ ದೀಪಾಳನ್ನು ಬಾಗೇಪಲ್ಲಿ ತಾಲೂಕಿನ ಜೂಲಪಾಳ್ಯಾಗೆ ಮದುವೆ ಮಾಡಿಕೊಡಲಾಗಿತ್ತು. ಮಕ್ಕಳ ಜೊತೆ ತವರು ಮನೆ ಚಿಕ್ಕಬಳ್ಳಾಫುರದಲ್ಲಿ ವಾಸವಿದ್ದ ದೀಪಾಳಿಗೆ ತನ್ನ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ದೀವಾಕರ್ ಜೊತೆ ಅನೈತಿಕ ಸಂಬಂಧ ಇತ್ತು ಎನ್ನುವ ಆರೋಪ ಕೇಳಿಬಂದಿದೆ. ಆಗಾಗ ಪ್ರೀಯಕರ ದಿವಾಕರ್ ರೂಮಿಗೆ ಬಂದು ಹೋಗುತ್ತಿದ್ದಳು. ಇತ್ತೀಚೆಗೆ ರೂಮ್​ಗೆ ಬಂದಿದ್ದಾಗ ಇಬ್ಬರ ನಡುವೆ ಜಗಳ ನಡೆದಿದ್ದು, ಈ ವೇಳೆ ದೀಪಾಳನ್ನು ದಿವಾಕರ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ