ಗ್ರಾಹಕರ ಖಾತೆಗೆ ಕನ್ನ ಹಾಕಿ, ತನ್ನ ಸಂಬಂಧಿಕರ ಖಾತೆಗಳಿಗೆ ಹಣ ವರ್ಗಾಯಿಸಿದ ಎಸ್​ಬಿಐ ಮಹಿಳಾ ಸಿಬ್ಬಂದಿ!

ಚಿಕ್ಕಬಳ್ಳಾಪುರ ನಗರದ ಬಿ.ಬಿ. ರಸ್ತೆಯ ಆರ್‍ವಿವಿ ಕಾಂಪ್ಲೆಕ್ಸ್ ಶಾಖೆಯ ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾ ಶಾಖೆಯಲ್ಲಿ 2014 ರಿಂದ 2019ರವರೆಗೂ ಬ್ಯಾಂಕ್‍ನಲ್ಲಿ ಕ್ಲರ್ಕ್ ಆಗಿ ಕರ್ತವ್ಯ ನಿರ್ವಹಿಸಿದ್ದ ಆರ್. ರಶ್ಮಿ ಅವರು ಕೋರ್ ​ಬ್ಯಾಂಕಿಂಗ್ ಸಿಸ್ಟಂನ್ನು ದುರುಪಯೋಗಪಡಿಸಿಕೊಂಡು ತನ್ನ ಗಂಡ, ತಂದೆ, ತಾಯಿ, ತಂಗಿ ಸೇರಿದಂತೆ ಹತ್ತಿರದ ಸಂಬಂಧಿಕರ ಖಾತೆಗಳಿಗೆ ಹಣ ವರ್ಗಾವಣೆ ಮಾಡಿರುವುದು ಬೆಳಕಿಗೆ ಬಂದಿದೆ.

ಗ್ರಾಹಕರ ಖಾತೆಗೆ ಕನ್ನ ಹಾಕಿ, ತನ್ನ ಸಂಬಂಧಿಕರ ಖಾತೆಗಳಿಗೆ ಹಣ ವರ್ಗಾಯಿಸಿದ ಎಸ್​ಬಿಐ ಮಹಿಳಾ ಸಿಬ್ಬಂದಿ!
ಗ್ರಾಹಕರ ಖಾತೆಗೆ ಕನ್ನ ಹಾಕಿ, ಸಂಬಂಧಿಕರ ಖಾತೆಗಳಿಗೆ ಹಣ ವರ್ಗಾಯಿಸಿದ ಕ್ಲರ್ಕ
Follow us
| Updated By: ಸಾಧು ಶ್ರೀನಾಥ್​

Updated on:Mar 06, 2024 | 1:58 PM

ಚಿಕ್ಕಬಳ್ಳಾಪುರ, ಮಾರ್ಚ್​​ 6: ಬ್ಯಾಂಕುಗಳು ಅದರಲ್ಲೂ ರಾಷ್ಟ್ರೀಕೃತ ಬ್ಯಾಂಕುಗಳನ್ನು ನಂಬಿ ಗ್ರಾಹಕರು ತಮ್ಮ ಬಳಿ ಇರುವ ನಗದು ಹಣ ಸೇರಿದಂತೆ, ಬೆಲೆಬಾಳುವ ಚಿನ್ನಾಭರಣಗಳನ್ನು ಲಾಕರುಗಳಲ್ಲಿ ಭದ್ರವಾಗಿ ಇಡುತ್ತಾರೆ. ಆದರೆ ಗ್ರಾಹಕರ ಖಾತೆಯಲ್ಲಿರುವ ಹಣವನ್ನು ರಕ್ಷಣೆ ಮಾಡಬೇಕಾದ ಸರ್ಕಾರಿ ಸ್ವಾಮ್ಯದ ಖ್ಯಾತ ಬ್ಯಾಂಕಿನ (Chikkaballapur SBI) ಮಹಿಳಾ ಸಿಬ್ಬಂದಿಯೊಬ್ಬರು (Bank Employee) ಗ್ರಾಹಕರುಗಳ ಖಾತೆಯಲ್ಲಿದ್ದ 27,69,470 ರೂ. ಹಣವನ್ನು ತಮ್ಮ ಸಂಬಂಧಿಕರ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿರುವ ಪ್ರಕರಣ (embezzlement) ತಡವಾಗಿ ಬೆಳಕಿಗೆ ಬಂದಿದೆ.

ಯಾವ ಬ್ಯಾಂಕಿನ ಗ್ರಾಹಕರ ಹಣಕ್ಕೆ ಕನ್ನ ಬಿದ್ದಿದೆ? ಚಿಕ್ಕಬಳ್ಳಾಪುರ ನಗರದ ಬಿ.ಬಿ. ರಸ್ತೆಯ ಆರ್‍ವಿವಿ ಕಾಂಪ್ಲೆಕ್ಸ್ ಶಾಖೆಯ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ಎಸ್​ಬಿಐ ಶಾಖೆಯ ಗ್ರಾಹಕರ ಖಾತೆಯ ಹಣಕ್ಕೆ ಕನ್ನ ಬಿದ್ದಿದೆ. ಬ್ಯಾಂಕಿನ ಬಿ.ಜಿ.ಎಲ್. ಪಾರ್ಕಿಂಗ್ ಖಾತೆಗಳು, ಸಾಲದ ಖಾತೆಗಳು ಸೇರಿದಂತೆ ಇತರೆ ಖಾತೆದಾರರ ಖಾತೆಗಳಿಂದ ಅಕ್ರಮವಾಗಿ ರೂ.27,69,470/- ಹಣವನ್ನು ವರ್ಗಾವಣೆ ಮಾಡಿಕೊಳ್ಳಲಾಗಿದೆ.

Also Read: ಚಿಕ್ಕಬಳ್ಳಾಪುರ -ಡೆಬಿಟ್ ಕಾರ್ಡ್ ಹಣದ ಲಿಮಿಟ್ ಹೆಚ್ಚಿಸುವುದಾಗಿ ನಂಬಿಸಿ ಉಪನ್ಯಾಸಕನಿಗೆ ಪಂಗನಾಮ

ವರ್ಗಾವಣೆ ಮಾಡಿಕೊಂಡವರು ಯಾರು? ಚಿಕ್ಕಬಳ್ಳಾಪುರ ನಗರದ ಬಿ.ಬಿ. ರಸ್ತೆಯ ಆರ್‍ವಿವಿ ಕಾಂಪ್ಲೆಕ್ಸ್ ಶಾಖೆಯ ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾ ಶಾಖೆಯಲ್ಲಿ 2014 ರಿಂದ 2019ರವರೆಗೂ ಬ್ಯಾಂಕ್‍ನಲ್ಲಿ ಕ್ಲರ್ಕ್ ಆಗಿ ಕರ್ತವ್ಯ ನಿರ್ವಹಿಸಿದ್ದ ಆರ್. ರಶ್ಮಿ ಅವರು ಕೋರ್ ​ಬ್ಯಾಂಕಿಂಗ್ ಸಿಸ್ಟಂನ್ನು ದುರುಪಯೋಗಪಡಿಸಿಕೊಂಡು ತನ್ನ ಗಂಡ, ತಂದೆ, ತಾಯಿ, ತಂಗಿ ಸೇರಿದಂತೆ ಹತ್ತಿರದ ಸಂಬಂಧಿಕರ ಖಾತೆಗಳಿಗೆ ಹಣ ವರ್ಗಾವಣೆ ಮಾಡಿರುವುದು ಬೆಳಕಿಗೆ ಬಂದಿದೆ.

ಯಾರ-ಯಾರ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ? ಆರ್‍ವಿವಿ ಕಾಂಪ್ಲೆಕ್ಸ್ ಶಾಖೆಯ ಸ್ಟೇಟ್ ಬ್ಯಾಂಕ್ ಆಫ್​​ ಇಂಡಿಯಾ ಶಾಖೆಯಲ್ಲಿ ಕ್ಲರ್ಕ್ ಆಗಿದ್ದ ಆರ್. ರಶ್ಮಿ ಹೀಗೆ ಯಾವುದೇ ಎಗ್ಗುಸಿಗ್ಗು ಇಲ್ಲದೆ ತನ್ನ ಗಂಡ ಜಿ. ಸತೀಶ್‍ಕುಮಾರ್, ತಾಯಿ ಹೆಚ್.ಕಮಲಮ್ಮ, ತಂಗಿ ಮಾಲಾಶ್ರೀ, ಪುಷ್ಪಲತ. ಆರ್, ಶಿಲ್ಪಾ. ಆರ್., ಶ್ರೀನಿಧಿ, ದೇವಿಕಾ ಎಸ್.ಜಿ. ಜ್ಯೋತಮ್ಮ, ಲಕ್ಷ್ಮೀ.ಎನ್, ಲೋಕೇಶ್.ಎಸ್, ರತ್ನಮ್ಮ, ಮೀನಾಕ್ಷಿ.ಎಸ್ ಎಂಬುವವರ ಖಾತೆಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದು ಆಂತರಿಕ ತನಿಖೆಯಿಂದ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಗೌರಿಬಿದನೂರು: ವಾಹನ ಸಾಲ ವಸೂಲಾತಿಗೆ ಬಂದ ಹೆಚ್‍ಡಿಎಫ್‍ಸಿ ಏಜೆಂಟ್‍ಗೆ ಮಚ್ಚಿನಿಂದ ಹಲ್ಲೆಗೆ ಯತ್ನ!

ಎಸ್‍ಬಿಐ ಬ್ಯಾಂಕ್ ಕ್ಲರ್ಕ್ ಆರ್.ರಶ್ಮಿ ವಿರುದ್ಧ ಪ್ರಕರಣ ದಾಖಲು ಸ್ಟೇಟ್ ಬ್ಯಾಂಕ್ ಆಫ್​​ ಇಂಡಿಯಾ ಶಾಖೆಯಲ್ಲಿ ಕ್ಲರ್ಕ್ ಆಗಿದ್ದ ಆರ್. ರಶ್ಮಿ ವಿರುದ್ಧ ಬ್ಯಾಂಕಿನ ಚೀಫ್​​ ಮ್ಯಾನೇಜರ್ ಇಶಾನಿ ಚಟ್ಟೋರಾಜ್ ರವರು ಚಿಕ್ಕಬಳ್ಳಾಪುರ ನಗರಠಾಣೆಗೆ ದೂರು ನೀಡಿದ್ದು, ಐಪಿಸಿ ಸೆಕ್ಸನ್ 406, 409, 420, 34 ಸೆಕ್ಷನ್‍ಗಳಡಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:56 pm, Wed, 6 March 24

ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ