ಚಿಕ್ಕಬಳ್ಳಾಪುರ ಸಾಫ್ಟ್​ವೇರ್​ ಇಂಜಿನಿಯರ್ ಕಿಡ್ನಾಪ್​: ಸುಪಾರಿ ನೀಡಿದ್ದ ಪ್ರಿಯತಮೆ ಅಂದರ್​, ಪ್ರಕರಣದ ರೋಚಕ ಕಹಾನಿ ಇಲ್ಲಿದೆ

ಸಾಫ್ಟ್​ವೇರ್​ ಇಂಜಿನಿಯರ್ ವಿಜಯಸಿಂಗ್ ಅವರನ್ನು ಅಪಹರಿಸಿ​ ಮಾರಣಾಂತಿಕ ಹಲ್ಲೆ ಮಾಡಿದ ಆರೋಪಿಗಳನ್ನು ಚಿಕ್ಕಬಳ್ಳಾಪುರದ ನಂದಿಗಿರಿಧಾಮ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರ ಸಾಫ್ಟ್​ವೇರ್​ ಇಂಜಿನಿಯರ್ ಕಿಡ್ನಾಪ್​: ಸುಪಾರಿ ನೀಡಿದ್ದ ಪ್ರಿಯತಮೆ ಅಂದರ್​, ಪ್ರಕರಣದ ರೋಚಕ ಕಹಾನಿ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
|

Updated on:Jun 25, 2023 | 1:12 PM

ಚಿಕ್ಕಬಳ್ಳಾಪುರ: ಸಾಫ್ಟ್​ವೇರ್​ ಇಂಜಿನಿಯರ್ (Shoftwer Engeneer) ವಿಜಯಸಿಂಗ್ ಅವರನ್ನು ಅಪಹರಿಸಿ​ (Kidnap) ಮಾರಣಾಂತಿಕ ಹಲ್ಲೆ ಮಾಡಿದ ಆರೋಪಿಗಳನ್ನು ಚಿಕ್ಕಬಳ್ಳಾಪುರದ (Chikkaballapur) ನಂದಿಗಿರಿಧಾಮ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಭಾವನಾ ರೆಡ್ಡಿ, ಪುಲ್ಲಾರೆಡ್ಡಿ ಬಂಧಿತ ಆರೋಪಿಗಳು.

ಮೂಲತಃ ಆಂಧ್ರ ಪ್ರದೇಶದ ಅನಂತಪುರ ನಿವಾಸಿಯಾಗಿರುವ ವಿಜಯಸಿಂಗ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರು ಭಾವನಾ ರೆಡ್ಡಿ ಎಂಬುವರನ್ನು ಪ್ರೀತಿಸುತ್ತಿದ್ದರು. ಆದರೆ ಪ್ರಿಯತಮೆ ಭಾವನಾ ರೆಡ್ಡಿಯೇ ಕೆಲ ದುಷ್ಕರ್ಮಿಗಳಿಗೆ ವಿಜಯಸಿಂಗ್​ ಅವರನ್ನು ಕಿಡ್ನಾಪ್​ ಮಾಡಲು ಸುಪಾರಿ ನೀಡಿದ್ದಳು.

ಅದರಂತೆ ಕಿಡಿಗೇಡಿಗಳು ಜೂನ್ 16ರಂದು ಪ್ರಿಯತಮೆ ಭಾವನಾ ರೆಡ್ಡಿ ಮೂಲಕ ದೇವನಹಳ್ಳಿಗೆ ಕರೆಸಿಕೊಂಡಿದ್ದಾರೆ. ನಂತರ ಅಲ್ಲಿಂದ ಅಪಹರಿಸಿ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮದ ಬಳಿಯ ರೆಸಾರ್ಟ್​ನಲ್ಲಿ ಕೂಡಿಹಾಕಿದ್ದಾರೆ. ಬಳಿಕ ಜೂನ್ 18ರ ವರೆಗೂ ಮೂರು ದಿನಗಳ ಕಾಲ ಚಿತ್ರ ಹಿಂಸೆ ನೀಡಿದ್ದಾರೆ.

ನಂತರ 2 ಲ್ಯಾಪ್​ಟಾಪ್, 3 ಮೊಬೈಲ್​, 12 ಗ್ರಾಂ ಚಿನ್ನದ ಸರ ಕಸಿದು ಕೊನೆಗೆ 21 ಲಕ್ಷ ರೂ. ಹಣ ವರ್ಗಾಯಿಸಿಕೊಂಡು ಪರಾರಿಯಾಗಿದ್ದರು. ಈ ಸಂಬಂಧ ವಿಜಯಸಿಂಗ್ ಪ್ರಿಯತಮೆ ಸೇರಿ 6 ಮಂದಿ ವಿರುದ್ಧ ಚಿಕ್ಕಬಳ್ಳಾಪುರದ ನಂದಿಗಿರಿಧಾಮ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರಕರಣದ ಬೆನ್ನು ಬಹತ್ತಿದ ಪೊಲೀಸರಿಗೆ ಭಾವನಾ ರೆಡ್ಡಿ, ಪುಲ್ಲಾರೆಡ್ಡಿ ಅಡಗಿರುವ ತಾಣ ತಿಳಿದಿದ್ದು, ಈ ಇಬ್ಬರು ಹುಬ್ಬಳ್ಳಿಯ ಖಾಸಗಿ ಹೋಟೆಲ್​ವೊಂದರಲ್ಲಿ ಇರುವುದು ಗೊತ್ತಿಗಿದೆ. ಪೊಲೀಸರು ಹುಬ್ಬಳ್ಳಿಗೆ ತೆರಳಿ ಆರೋಪಿಗಳನ್ನು ಬಂಧಿಸಿ ಕರೆತಂದಿದ್ದಾರೆ. ಇನ್ನುಳಿದ ಸುಬ್ರಮಣಿ, ನಾಗೇಶ್ ರೆಡ್ಡಿ, ಸಿದ್ದೇಶ, ಸುಧೀರ್​​ಗಾಗಿ ಹುಡುಕಾಟ ನಡೆಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:12 pm, Sun, 25 June 23

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ