AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಲಾಂಗ್​ನಿಂದ ಕೊಚ್ಚಿ ಜೆಡಿಎಸ್​ ಮುಖಂಡನ ಬರ್ಬರ ಕೊಲೆ

ದುಷ್ಕರ್ಮಿಗಳು ಬೈಕ್​ ಅಡ್ಡಗಟ್ಟಿ ಜೆಡಿಎಸ್​ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗೇಟ್​ ಬಳಿ ಶುಕ್ರವಾರ ನಡೆದಿದೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಮತ್ತು ಎಸ್​ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಚಿಕ್ಕಬಳ್ಳಾಪುರ: ಲಾಂಗ್​ನಿಂದ ಕೊಚ್ಚಿ ಜೆಡಿಎಸ್​ ಮುಖಂಡನ ಬರ್ಬರ ಕೊಲೆ
ಕೊಲೆಯಾದ ಜೆಡಿಎಸ್​ ಮುಖಂಡ ವೆಂಕಟೇಶ್​
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Jan 04, 2025 | 11:22 AM

Share

ಚಿಕ್ಕಬಳ್ಳಾಪುರ, ಜನವರಿ 04: ಚಿಕ್ಕಬಳ್ಳಾಪುರದ (Chikkaballapur) ತಮ್ಮನಾಯಕನಹಳ್ಳಿ ಗೇಟ್​ ಬಳಿ ಲಾಂಗ್​ನಿಂದ ಕೊಚ್ಚಿ ಜೆಡಿಎಸ್ (JDS)​​ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಜೆಡಿಎಸ್​ ಮುಖಂಡ, ತಮ್ಮನಾಯಕನಹಳ್ಳಿ ಗ್ರಾಮದ ವೆಂಕಟೇಶ್ ಕೊಲೆಯಾದ ದುರ್ದೈವಿ.

ವೆಂಕಟೇಶ್ ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ತಮ್ಮನಾಯ್ಕನಹಳ್ಳಿ ಗೆಟ್ ಬಳಿ ಇದ್ದ ಮೆಡಿಕಲ್ ಶಾಪ್​ನಿಂದ ಬೈಕ್​ನಲ್ಲಿ ವಾಪಸ್ ಮನೆಗೆ ಹೊರಟಿದ್ದರು. ದಾರಿ ಮಧ್ಯೆ ವೆಂಕಟೇಶ್​​ನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಅವರ ಮೈ-ಕೈ, ಬೆನ್ನು ಮತ್ತು ಹೊಟ್ಟೆಗೆ ಹಿಗ್ಗಾ ಮುಗ್ಗಾ ಲಾಂಗ್​ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಇಬ್ಬರು ಗಂಡು ಮಕ್ಕಳು ಸಾವು

ಇನ್ನೂ ವೆಂಕಟೇಶ ಜೆಡಿಎಸ್​ನಲ್ಲಿ ಸಕ್ರಿಯರಾಗಿದ್ದರು. ಕೃಷಿಕರಾಗಿದ್ದ ವೆಂಕಟೇಶ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದರಂತೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತನೀಖೆ ಆರಂಭಿಸಿದ್ದಾರೆ. ಬೆರಳಚ್ಚು ತಜ್ಞರು, ಶ್ವಾನದಳ ಕೊಲೆ ಹಂತಕರ ಜಾಡು ಪರಿಶೀಲನೆ ನಡೆಸಿದೆ. . ವಿಚಾರ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಮತ್ತು ಎಸ್​ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೂರು ದಿನಗಳ ಹಿಂದೆ ತಮ್ಮನಾಯ್ಕನಹಳ್ಳಿ ಗೆಟ್ ಬಳಿ ಇರುವ ಬಾರ್ ಹತ್ತಿರ ಕೆಲವರು ಕುಡಿದು ಗಲಾಟೆ ಮಾಡುತ್ತಿದ್ದರಂತೆ. ಆಗ ವೆಂಕಟೇಶ್​ ಅವರಿಗೆ ಬೈಯ್ದು ಬುದ್ದಿವಾದ ಹೇಳಿದ್ದರು. ಆಗ ಪುಂಡರು ವೆಂಕಟೇಶ್​ರ ಜೊತೆ ಗಲಾಟೆ ತೆಗೆಯಲು ಮುಂದಾಗಿದ್ದರಂತೆ. ಇದನ್ನು ಬಿಟ್ಟರೆ ವೆಂಕಟೇಶ್​ ಅವರಿಗೆ ಯಾರು ವೈರಿಗಳು ಇರಲಿಲ್ಲ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಕೊಲೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:23 am, Sat, 4 January 25

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು