AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಲಾಂಗ್​ನಿಂದ ಕೊಚ್ಚಿ ಜೆಡಿಎಸ್​ ಮುಖಂಡನ ಬರ್ಬರ ಕೊಲೆ

ದುಷ್ಕರ್ಮಿಗಳು ಬೈಕ್​ ಅಡ್ಡಗಟ್ಟಿ ಜೆಡಿಎಸ್​ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗೇಟ್​ ಬಳಿ ಶುಕ್ರವಾರ ನಡೆದಿದೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಮತ್ತು ಎಸ್​ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಚಿಕ್ಕಬಳ್ಳಾಪುರ: ಲಾಂಗ್​ನಿಂದ ಕೊಚ್ಚಿ ಜೆಡಿಎಸ್​ ಮುಖಂಡನ ಬರ್ಬರ ಕೊಲೆ
ಕೊಲೆಯಾದ ಜೆಡಿಎಸ್​ ಮುಖಂಡ ವೆಂಕಟೇಶ್​
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ವಿವೇಕ ಬಿರಾದಾರ|

Updated on:Jan 04, 2025 | 11:22 AM

Share

ಚಿಕ್ಕಬಳ್ಳಾಪುರ, ಜನವರಿ 04: ಚಿಕ್ಕಬಳ್ಳಾಪುರದ (Chikkaballapur) ತಮ್ಮನಾಯಕನಹಳ್ಳಿ ಗೇಟ್​ ಬಳಿ ಲಾಂಗ್​ನಿಂದ ಕೊಚ್ಚಿ ಜೆಡಿಎಸ್ (JDS)​​ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಜೆಡಿಎಸ್​ ಮುಖಂಡ, ತಮ್ಮನಾಯಕನಹಳ್ಳಿ ಗ್ರಾಮದ ವೆಂಕಟೇಶ್ ಕೊಲೆಯಾದ ದುರ್ದೈವಿ.

ವೆಂಕಟೇಶ್ ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ತಮ್ಮನಾಯ್ಕನಹಳ್ಳಿ ಗೆಟ್ ಬಳಿ ಇದ್ದ ಮೆಡಿಕಲ್ ಶಾಪ್​ನಿಂದ ಬೈಕ್​ನಲ್ಲಿ ವಾಪಸ್ ಮನೆಗೆ ಹೊರಟಿದ್ದರು. ದಾರಿ ಮಧ್ಯೆ ವೆಂಕಟೇಶ್​​ನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಅವರ ಮೈ-ಕೈ, ಬೆನ್ನು ಮತ್ತು ಹೊಟ್ಟೆಗೆ ಹಿಗ್ಗಾ ಮುಗ್ಗಾ ಲಾಂಗ್​ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಇಬ್ಬರು ಗಂಡು ಮಕ್ಕಳು ಸಾವು

ಇನ್ನೂ ವೆಂಕಟೇಶ ಜೆಡಿಎಸ್​ನಲ್ಲಿ ಸಕ್ರಿಯರಾಗಿದ್ದರು. ಕೃಷಿಕರಾಗಿದ್ದ ವೆಂಕಟೇಶ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದರಂತೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತನೀಖೆ ಆರಂಭಿಸಿದ್ದಾರೆ. ಬೆರಳಚ್ಚು ತಜ್ಞರು, ಶ್ವಾನದಳ ಕೊಲೆ ಹಂತಕರ ಜಾಡು ಪರಿಶೀಲನೆ ನಡೆಸಿದೆ. . ವಿಚಾರ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಮತ್ತು ಎಸ್​ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೂರು ದಿನಗಳ ಹಿಂದೆ ತಮ್ಮನಾಯ್ಕನಹಳ್ಳಿ ಗೆಟ್ ಬಳಿ ಇರುವ ಬಾರ್ ಹತ್ತಿರ ಕೆಲವರು ಕುಡಿದು ಗಲಾಟೆ ಮಾಡುತ್ತಿದ್ದರಂತೆ. ಆಗ ವೆಂಕಟೇಶ್​ ಅವರಿಗೆ ಬೈಯ್ದು ಬುದ್ದಿವಾದ ಹೇಳಿದ್ದರು. ಆಗ ಪುಂಡರು ವೆಂಕಟೇಶ್​ರ ಜೊತೆ ಗಲಾಟೆ ತೆಗೆಯಲು ಮುಂದಾಗಿದ್ದರಂತೆ. ಇದನ್ನು ಬಿಟ್ಟರೆ ವೆಂಕಟೇಶ್​ ಅವರಿಗೆ ಯಾರು ವೈರಿಗಳು ಇರಲಿಲ್ಲ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಕೊಲೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:23 am, Sat, 4 January 25

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ