AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಸರ್ಕಾರಿ ಬಸ್ ಡಿಕ್ಕಿ: ಕಾರಿನಲ್ಲಿ ತೆರಳುತ್ತಿದ್ದ ತಾಯಿ, ಮಗ ದುರ್ಮರಣ

KSRTC ಬಸ್​ ಮತ್ತು ಪ್ರವಾಸಿಗರ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ತಾಯಿ, ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಬಳಿ ನಡೆದಿದೆ. ಅದೇ ರೀತಿಯಾಗಿ ಅಪ್ರಾಪ್ತ ವಿದ್ಯಾರ್ಥಿಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಹೊರವಲಯದ ಕುಂಬಾಪುರ ಗೇಟ್ ಬಳಿ ನಡೆದಿದೆ.

ಚಿಕ್ಕಮಗಳೂರು: ಸರ್ಕಾರಿ ಬಸ್ ಡಿಕ್ಕಿ: ಕಾರಿನಲ್ಲಿ ತೆರಳುತ್ತಿದ್ದ ತಾಯಿ, ಮಗ ದುರ್ಮರಣ
ಪ್ರಾತಿನಿಧಿಕ ಚಿತ್ರ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 12, 2023 | 3:54 PM

Share

ಚಿಕ್ಕಮಗಳೂರು, ಆಗಸ್ಟ್​ 12: ಸರ್ಕಾರಿ ಬಸ್ ಡಿಕ್ಕಿ  (accident) ಹೊಡೆದ ಪರಿಣಾಮ ಕಾರಿನಲ್ಲಿ ತೆರಳುತ್ತಿದ್ದ ತಾಯಿ ಮತ್ತು ಮಗ ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಬಳಿ ನಡೆದಿದೆ. ಪೂಜಾ ಹಿರೇಮಠ್, ರಾಜಶೇಖರ ಹಿರೇಮಠ್ ಮೃತ ದುರ್ದೈವಿಗಳು. ಗಾಯಗೊಂಡ ಶಿವಯಾಗಯ್ಯ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಧರ್ಮಸ್ಥಳದಿಂದ ಮೂಡಿಗೆರೆ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದು, ಸಕಲೇಶಪುರದಿಂದ ಮೂಡಿಗೆರೆ ಕಡೆ ಕೆಎಸ್​ಆರ್​ಟಿಸಿ ಬಸ್ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರೈಲಿಗೆ ತಲೆಕೊಟ್ಟು ಅಪ್ರಾಪ್ತ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಮನಗರ: ರೈಲಿಗೆ ತಲೆಕೊಟ್ಟು ಅಪ್ರಾಪ್ತ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಹೊರವಲಯದ ಕುಂಬಾಪುರ ಗೇಟ್ ಬಳಿ ನಡೆದಿದೆ. ಹತ್ತನೇ ತರಗತಿಯ ನವ್ಯಶ್ರೀ,(15) ಪಿಯು ವಿದ್ಯಾರ್ಥಿ ಹರ್ಷವರ್ಧನ್(17) ಮೃತರು. ಇಬ್ಬರು ಮೈಸೂರಿನ ನಂಜನಗೂಡಿಗೆ ತೆರಳಿದ್ದರು. ರೈಲ್ವೇ ಹಳಿಗಳ ಬಳಿ ಇಬ್ಬರು ಸುಮ್ಮನೇ ಕೂತಿದ್ದಾಗಿ ಕೆಲವರು ಹೇಳಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ವಿದ್ಯುತ್ ಪ್ರವಹಿಸಿ ದಂಪತಿ, ಮೊಮ್ಮಗಳು ಸಾವು; ಮತ್ತೊಂದೆಡೆ ಅಪಘಾತದಲ್ಲಿ ಇಬ್ಬರು ಸಾವು

ರಾತ್ರಿ ತಾಯಿಗೆ ಕರೆ ಮಾಡಿದ್ದ ನವ್ಯಶ್ರೀ, ಹರ್ಷವರ್ಧನ್ ಜತೆ ಇರುವುದಾಗಿ ಹೇಳಿದ್ದಾರೆ. ಮನೆಗೆ ಬರಲು  ತಾಯಿ ತಿಳಿಸಿದ್ದಾರೆ. ಬಳಿಕ ಇಬ್ಬರು ‌ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ಬಟ್ಟೆ ಅಂಗಡಿಯಲ್ಲಿ ಮಾಲಕಿ ಅನುಮಾನಸ್ಪದ ಸಾವು 

ಹುಬ್ಬಳ್ಳಿ: ಬಟ್ಟೆ ಅಂಗಡಿಯಲ್ಲಿ ಮಾಲಕಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ನವನಗರದಲ್ಲಿ ನಡೆದಿದೆ. 36 ವರ್ಷದ ಪ್ರಿಯಾ ಬೊಂಗಾಲೆ ಮೃತ ಅಂಗಡಿಯಲ್ಲಿ ಮಾಲಕಿ. ಇದು ಅನುಮಾನಸ್ಪದ ಸಾವ ಅಲ್ಲ, ಕೊಲೆ ಎಂದು ಪ್ರತಿ ವಿನೋದ್ ವಿರುದ್ದ ಪ್ರಿಯಾ ಕುಟುಂಬಸ್ಥರ ಆರೋಪಿಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಕಾಣೆಯಾಗಿದ್ದ ಯುವತಿ ಶವ ಪತ್ತೆ ಪಕ್ರರಣ; ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಆರೋಪಿಯ ಬಂಧನ

ಕಂದಾಯ ಇಲಾಖೆ ದ್ವೀತಿಯ ದರ್ಜೆ ಸಹಾಯಕನಾಗಿರುವ ವಿನೋದ, ಕಳೆದ ಮೂರು ವರ್ಷಗಳಿಂದ ಬೇರೆ ಬೇರೆಯಾಗಿದ್ದರು. ಪ್ರಿಯಾ ತವರು ಮನೆಯಲ್ಲಿದ್ದರು ಗಂಡ ಕಿರುಕುಳ ಕೊಡುತ್ತಿದ್ದನಂತೆ. ಇದೇ ಕಾರಣಕ್ಕೆ ಗಂಡ ವಿನೋದ ಕೊಲೆ ಮಾಡಿದ್ದಾರೆಂದು ಕುಟುಂಬಸ್ಥರ ಆರೋಪಿಸಿದ್ದಾರೆ. ನಮಗೆ ನ್ಯಾಯ ಕೊಡಿಸಿ ಎನ್ನುತ್ತಿದ್ದಾರೆ ಪ್ರೀಯಾ ಕುಟುಂಬಸ್ಥರು. ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬೊಲೆರೊ ವಾಹನ ಡಿಕ್ಕಿ-ಬೈಕ್​ನಲ್ಲಿ ತೆರಳುತ್ತಿದ್ದ ಯುವಕರಿಬ್ಬರ ಸಾವು

ತುಮಕೂರು: ಬೊಲೆರೊ ವಾಹನ ಡಿಕ್ಕಿಯಾಗಿದ್ದು ಬೈಕ್​ನಲ್ಲಿ ತೆರಳುತ್ತಿದ್ದ ಯುವಕರಿಬ್ಬರು ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ಕಡಮಲಕುಂಟೆ ಬಳಿ ನಡೆದಿದೆ. ಚಿಕ್ಕಿಕೊಡಿಪಲ್ಲಿ ಗ್ರಾಮದ ಈಶ್ವರ(16), ಯಶ್ವಂತ್(17) ಮೃತರು. ಆಂಧ್ರಪ್ರದೇಶದ ರೊದ್ದಂ ತಾಲೂಕಿನ ಚಿಕ್ಕಿಕೊಡಿಪಲ್ಲಿ ಗ್ರಾಮದವರು. ರಾಮು(16) ಸ್ಥಿತಿ ಗಂಭೀರ, ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ