Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

Chikkamagaluru News: ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮೂಡಿಗೆರೆಯ ಹ್ಯಾಂಡ್​ಪೋಸ್ಟ್​ ಬಳಿ ನಡೆದಿದೆ.

ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
ಪ್ರಾತಿನಿಧಿಕ ಚಿತ್ರ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Aug 05, 2023 | 11:01 PM

ಚಿಕ್ಕಮಗಳೂರು, ಆಗಸ್ಟ್​​ 05: ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು (boys) ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮೂಡಿಗೆರೆಯ ಹ್ಯಾಂಡ್​ಪೋಸ್ಟ್​ ಬಳಿ ನಡೆದಿದೆ. ಹಾಸನ ಮೂಲದ ಕಿಶೋರ್(19), ತನ್ಮಯ್(18) ಮೃತರು. ಹಾಸನದಿಂದ ಕೂಲಿ ಕೆಲಸಕ್ಕೆ ಮೂಡಿಗೆರೆಗೆ ಬಂದಿದ್ದರು. ಇಬ್ಬರ​ ಶವಗಳನ್ನು ಕೆರೆಯಿಂದ ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ತೆಂಗಿನ ಮರ ಏರಿದ್ದ ಯುವಕ ಆಯತಪ್ಪಿ ಕೆಳಗೆ ಬಿದ್ದು ಸಾವು

ಆನೇಕಲ್: ತೆಂಗಿನ ಮರ ಏರಿದ್ದ ಯುವಕ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವಂತಹ ಘಟನೆ ಆನೇಕಲ್ ತಾಲ್ಲೂಕಿನ ಚಿನ್ನಯ್ನ ಪಾಳ್ಯದಲ್ಲಿ ನಡೆದಿದೆ. ಮುನಿರಾಜು (25) ಮೃತಪಟ್ಟ ದುರ್ದೈವಿ. ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ನಾಲ್ವರು ಸ್ನೇಹಿತರ ಜೊತೆಗೂಡಿ ಹೋಗಿದ್ದು, ಜಮೀನಿನೊಂದರಲ್ಲಿನ ತೆಂಗಿನ ಮರವೇರಿದ್ದ. ಆಯತಪ್ಪಿ ಕೆಳಗೆ ಬಿದ್ದು ಕುತ್ತಿಗೆ, ಬೆನ್ನು, ಕಾಲು ಮುರಿದು ಕೊಂಡಿದ್ದ.

ಇದನ್ನೂ ಓದಿ: ಕಾಲು ಜಾರಿ ನದಿಗೆ ಬಿದ್ದ ತಾಯಿ-ಮಗಳು: ಎರಡು ದಿನಗಳ ಬಳಿಕ ಶವ ಪತ್ತೆ

ಜೊತೆಗಿದ್ದ ಸ್ನೇಹಿತರು ಪಕ್ಕದ ನಿರ್ಜನ ಪ್ರದೇಶದ ನೀಲಗಿರಿ ತೋಪಿನಲ್ಲಿ ಬಿಟ್ಟು ಪರಾರಿಯಾಗಿದ್ದರು. ರಾತ್ರಿ ಎಲ್ಲಾ ನೋವಿಗೆ ನರಳಾಟ ಅನುಭವಿಸಿದ್ದ ಮುನಿರಾಜು, ಬೆಳಗ್ಗೆ ಸ್ಥಳೀಯರು ಗಮನಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಆನೇಕಲ್ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ಬದಿಯ ಹೋಟೆಲ್​ಗೆ ನುಗ್ಗಿದ ಲಾರಿ: 9 ಬೈಕ್, 1 ಲಾರಿ ಸಂಪೂರ್ಣ ಜಖಂ

ಕೊಪ್ಪಳ: ಕುಡಿದು ಚಾಲನೆ ಮಾಡಿದ ಪರಿಣಾಮ ಲಾರಿಯೊಂದು ರಸ್ತೆ ಬದಿ ಹೋಟೆಲ್​ ನುಗ್ಗಿದ್ದು, 9 ಬೈಕ್, 1 ಲಾರಿ ಸಂಪೂರ್ಣ ಜಖಂ ಆಗಿರುವಂತಹ ಘಟನೆ ಜಿಲ್ಲೆಯ ಕುಕನೂರು ತಾಲೂಕಿನ ಬನ್ನಿಕೊಪ್ಪ ಗ್ರಾಮದ ಬಳಿ ನಡೆದಿದೆ. ಸಿನಿಮೀಯ ರೀತಿಯಲ್ಲಿ ವಾಹನಗಳ ಮೇಲೆ ಚಾಲಕ ಲಾರಿ ಹರಿಸಿದ್ದಾನೆ. ಲಾರಿ ನುಗ್ಗಿದನ್ನು ಕಂಡು ಎದ್ನೋ ಬಿದ್ನೋ ಎಂದು ಜನ ಓಡಿದ್ದಾರೆ.

ಇದನ್ನೂ ಓದಿ: ಲಾಡ್ಜ್​ನಲ್ಲಿ ಕತ್ತು ಹಿಸುಕಿ ಮಹಿಳೆಯ ಹತ್ಯೆ: ಪೊಲೀಸರಿಗೆ ಶರಣಾದ ವ್ಯಕ್ತಿ

ಅದೃಷ್ಟವಶಾತ್ ಪ್ರಾಣಪಾಯಾದಿಂದ ಬೈಕ್ ಸವಾರರು ಪಾರಾಗಿದ್ದಾರೆ. ಬೆಳಗಾವಿ ಮೂಲದ ಲಾರಿ ಚಾಲಕ ಅಪಘಾತ ಮಾಡಿದ್ದು, ಲಾರಿ ಚಾಲಕನನ್ನು ಸ್ಥಳೀಯರು ಹಿಡಿದುಕೊಂಡಿದ್ದರು. ಸ್ಥಳಕ್ಕೆ ಕುಕನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ