AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಪೊಲೀಸರಿಂದ ಅಮಾಯಕನ ಮೇಲೆ ಹಲ್ಲೆ ಆರೋಪ: ಇಬ್ಬರು ಕಾನ್ಸ್​ಟೇಬಲ್​​​ಗಳು ಸಸ್ಪೆಂಡ್​

ವ್ಯಕ್ತಿಯೋರ್ವನ ಮೇಲೆ ಅನವಶ್ಯಕವಾಗಿ ಹಲ್ಲೆ ಮಾಡಿದ ಆರೋಪದಡಿ, ಮೂಡಿಗೆರೆ ಠಾಣೆಯ ಇಬ್ಬರು ಪೊಲೀಸ್​ ಪೇದೆ​​​ಗಳನ್ನು ಚಿಕ್ಕಮಗಳೂರು ಎಸ್​​​ಪಿ ಉಮಾ ಪ್ರಶಾಂತ್ ಸಸ್ಪೆಂಡ್ ಮಾಡಿದ್ದಾರೆ.

ಚಿಕ್ಕಮಗಳೂರು: ಪೊಲೀಸರಿಂದ ಅಮಾಯಕನ ಮೇಲೆ ಹಲ್ಲೆ ಆರೋಪ: ಇಬ್ಬರು ಕಾನ್ಸ್​ಟೇಬಲ್​​​ಗಳು ಸಸ್ಪೆಂಡ್​
ಮೂಡಿಗೆರೆ ಪೊಲೀಸ್​​ ಠಾಣೆ (ಎಡಚಿತ್ರ) ಸಂತ್ರಸ್ತನ ದೂರಿನ ಪ್ರತಿ (ಬಲಚಿತ್ರ)
TV9 Web
| Edited By: |

Updated on: Feb 14, 2023 | 12:14 PM

Share

ಚಿಕ್ಕಮಗಳೂರು: ವ್ಯಕ್ತಿಯೋರ್ವನ ಮೇಲೆ ಅನವಶ್ಯಕವಾಗಿ ಹಲ್ಲೆ ಮಾಡಿದ ಆರೋಪದಡಿ, ಮೂಡಿಗೆರೆ ಠಾಣೆಯ ಇಬ್ಬರು ಪೊಲೀಸ್​ ಪೇದೆ​​​ಗಳನ್ನು ಚಿಕ್ಕಮಗಳೂರು ಎಸ್​​​ಪಿ ಉಮಾ ಪ್ರಶಾಂತ್ ಸಸ್ಪೆಂಡ್ ಮಾಡಿದ್ದಾರೆ. ವಸಂತ್​ ಮತ್ತು ಲೋಹಿತ್​​ ಅಮಾನತಾದ ಕಾನ್ಸ್​ಟೇಬಲ್​​​ಗಳು. ಹಾಗೇ ಮೂಡಿಗೆರೆ ಸಬ್​ಇನ್ಸ್​​ಪೆಕ್ಟರ್​ ಆದರ್ಶ​ ವಿರುದ್ಧ ತನಿಖೆಗೆ ಆದೇಶ ಹೊರಡಿಸಿದ್ದಾರೆ.

ಏನಿದು ಘಟನೆ ?

ಕಳ್ಳತನ ಪ್ರಕರಣ ಸಂಬಂಧ ಪೊಲೀಸ್​ ಪೇದೆಗಳು ದಾರದಹಳ್ಳಿ ನಿವಾಸಿ ಮಂಜು ಎಂಬುವರನ್ನು ಠಾಣೆಗೆ ಕರೆತಂದು ಹಲ್ಲೆ ನಡೆಸಿದ್ದಾರೆಂದು, ಮಂಜು ಪತ್ನಿ ಯಶೋಧ ಎಸ್​​ಪಿ ಉಮಾ ಪ್ರಶಾಂತ್ ಅವರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಕಾನ್ಸ್​ಟೇಬಲ್​​​ಗಳನ್ನು ಸಸ್ಪೆಂಡ್​ ಮಾಡಿದ್ದು, ಸಬ್​ಇನ್ಸ್​​ಪೆಕ್ಟರ್​ ಆದರ್ಶ​ ವಿರುದ್ಧ ತನಿಖೆಗೆ ಆದೇಶ ನೀಡಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡಿದ್ದ, ಮಂಜುಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕುಡಿದ ಮತ್ತಿನಲ್ಲಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ

ಬೆಂಗಳೂರು: ಕುಡಿದ ಮತ್ತಿನಲ್ಲಿ ಮಚ್ಚಿನಿಂದ ವ್ಯಕ್ತಿಯನ್ನು 21 ಬಾರಿ ಕೊಚ್ಚಿ ಹತ್ಯೆ ಮಾಡಿರುವ ಘಟನೆ ನಗರದ ಅಲಸಹಳ್ಳಿ ಮುಖ್ಯ ರಸ್ತೆಯ ಬಾರ್ ಬಳಿ ನಡೆದಿದೆ. ಕೊಲೆ ಮಾಡಿದ ದೃಶ್ಯ ಬಾರ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶ್ರೀಧರ್ ಕೊಲೆ ಆರೋಪಿ. ಮುನಿಯಪ್ಪ (45) ಕೊಲೆಯಾದ ವ್ಯಕ್ತಿ. ಶ್ರೀಧರ್ ಹಾಗೂ ಮುನಿಯಪ್ಪ ಒಂದೇ ಓಣಿಯಲ್ಲಿ ವಾಸವಿದ್ದರು. ಸದ್ಯ ವರ್ತೂರು ಠಾಣೆ ಪೊಲೀಸರು ಆರೋಪಿ ಶ್ರೀಧರ್​ನನ್ನು ಬಂಧಿಸಿದ್ದಾರೆ. ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ

ವಿಜಯನಗರ: ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಸಾಗರ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಮೇಲೆ ಜನ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ವಿಷ ಕುಡಿದಿದ್ದ ವ್ಯಕ್ತಿಯನ್ನು ಚಿಕಿತ್ಸೆಗೆ ಜನ ಕರೆದುಕೊಂಡು ಬಂದಿದ್ದರು. ಈ ವೇಳೆ ಆಸ್ಪತ್ರೆ ಸಿಬ್ಬಂದಿ ಪರಿಸ್ಥಿತಿ ಗಂಭೀರ ಇದೆ ಬೇರೆ ಆಸ್ಪತ್ರೆಗೆ ಹೋಗುವಂತೆ ಶಿಫಾರಸ್ಸು ಮಾಡಿದ್ದರು. ಈ ಹಿನ್ನೆಲೆ ಆಸ್ಪತ್ರೆಯಿಂದ ಸ್ವಲ್ಪ ದೂರ ಹೋಗುತ್ತಿದ್ದಂತೆ ರೋಗಿ ಸಾವನ್ನಪ್ಪಿದ್ದಾನೆ. ಹೀಗಾಗಿ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ್ದು, ಆಸ್ಪತ್ರೆಯ ಪೀಠೋಪಕರಣ ಧ್ವಂಸ ಮಾಡಲಾಗಿದೆ. ತಂಬ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ