AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಪೊಲೀಸರಿಂದ ಅಮಾಯಕನ ಮೇಲೆ ಹಲ್ಲೆ ಆರೋಪ: ಇಬ್ಬರು ಕಾನ್ಸ್​ಟೇಬಲ್​​​ಗಳು ಸಸ್ಪೆಂಡ್​

ವ್ಯಕ್ತಿಯೋರ್ವನ ಮೇಲೆ ಅನವಶ್ಯಕವಾಗಿ ಹಲ್ಲೆ ಮಾಡಿದ ಆರೋಪದಡಿ, ಮೂಡಿಗೆರೆ ಠಾಣೆಯ ಇಬ್ಬರು ಪೊಲೀಸ್​ ಪೇದೆ​​​ಗಳನ್ನು ಚಿಕ್ಕಮಗಳೂರು ಎಸ್​​​ಪಿ ಉಮಾ ಪ್ರಶಾಂತ್ ಸಸ್ಪೆಂಡ್ ಮಾಡಿದ್ದಾರೆ.

ಚಿಕ್ಕಮಗಳೂರು: ಪೊಲೀಸರಿಂದ ಅಮಾಯಕನ ಮೇಲೆ ಹಲ್ಲೆ ಆರೋಪ: ಇಬ್ಬರು ಕಾನ್ಸ್​ಟೇಬಲ್​​​ಗಳು ಸಸ್ಪೆಂಡ್​
ಮೂಡಿಗೆರೆ ಪೊಲೀಸ್​​ ಠಾಣೆ (ಎಡಚಿತ್ರ) ಸಂತ್ರಸ್ತನ ದೂರಿನ ಪ್ರತಿ (ಬಲಚಿತ್ರ)
TV9 Web
| Updated By: ವಿವೇಕ ಬಿರಾದಾರ|

Updated on: Feb 14, 2023 | 12:14 PM

Share

ಚಿಕ್ಕಮಗಳೂರು: ವ್ಯಕ್ತಿಯೋರ್ವನ ಮೇಲೆ ಅನವಶ್ಯಕವಾಗಿ ಹಲ್ಲೆ ಮಾಡಿದ ಆರೋಪದಡಿ, ಮೂಡಿಗೆರೆ ಠಾಣೆಯ ಇಬ್ಬರು ಪೊಲೀಸ್​ ಪೇದೆ​​​ಗಳನ್ನು ಚಿಕ್ಕಮಗಳೂರು ಎಸ್​​​ಪಿ ಉಮಾ ಪ್ರಶಾಂತ್ ಸಸ್ಪೆಂಡ್ ಮಾಡಿದ್ದಾರೆ. ವಸಂತ್​ ಮತ್ತು ಲೋಹಿತ್​​ ಅಮಾನತಾದ ಕಾನ್ಸ್​ಟೇಬಲ್​​​ಗಳು. ಹಾಗೇ ಮೂಡಿಗೆರೆ ಸಬ್​ಇನ್ಸ್​​ಪೆಕ್ಟರ್​ ಆದರ್ಶ​ ವಿರುದ್ಧ ತನಿಖೆಗೆ ಆದೇಶ ಹೊರಡಿಸಿದ್ದಾರೆ.

ಏನಿದು ಘಟನೆ ?

ಕಳ್ಳತನ ಪ್ರಕರಣ ಸಂಬಂಧ ಪೊಲೀಸ್​ ಪೇದೆಗಳು ದಾರದಹಳ್ಳಿ ನಿವಾಸಿ ಮಂಜು ಎಂಬುವರನ್ನು ಠಾಣೆಗೆ ಕರೆತಂದು ಹಲ್ಲೆ ನಡೆಸಿದ್ದಾರೆಂದು, ಮಂಜು ಪತ್ನಿ ಯಶೋಧ ಎಸ್​​ಪಿ ಉಮಾ ಪ್ರಶಾಂತ್ ಅವರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಕಾನ್ಸ್​ಟೇಬಲ್​​​ಗಳನ್ನು ಸಸ್ಪೆಂಡ್​ ಮಾಡಿದ್ದು, ಸಬ್​ಇನ್ಸ್​​ಪೆಕ್ಟರ್​ ಆದರ್ಶ​ ವಿರುದ್ಧ ತನಿಖೆಗೆ ಆದೇಶ ನೀಡಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡಿದ್ದ, ಮಂಜುಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕುಡಿದ ಮತ್ತಿನಲ್ಲಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ

ಬೆಂಗಳೂರು: ಕುಡಿದ ಮತ್ತಿನಲ್ಲಿ ಮಚ್ಚಿನಿಂದ ವ್ಯಕ್ತಿಯನ್ನು 21 ಬಾರಿ ಕೊಚ್ಚಿ ಹತ್ಯೆ ಮಾಡಿರುವ ಘಟನೆ ನಗರದ ಅಲಸಹಳ್ಳಿ ಮುಖ್ಯ ರಸ್ತೆಯ ಬಾರ್ ಬಳಿ ನಡೆದಿದೆ. ಕೊಲೆ ಮಾಡಿದ ದೃಶ್ಯ ಬಾರ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶ್ರೀಧರ್ ಕೊಲೆ ಆರೋಪಿ. ಮುನಿಯಪ್ಪ (45) ಕೊಲೆಯಾದ ವ್ಯಕ್ತಿ. ಶ್ರೀಧರ್ ಹಾಗೂ ಮುನಿಯಪ್ಪ ಒಂದೇ ಓಣಿಯಲ್ಲಿ ವಾಸವಿದ್ದರು. ಸದ್ಯ ವರ್ತೂರು ಠಾಣೆ ಪೊಲೀಸರು ಆರೋಪಿ ಶ್ರೀಧರ್​ನನ್ನು ಬಂಧಿಸಿದ್ದಾರೆ. ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ

ವಿಜಯನಗರ: ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಸಾಗರ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಮೇಲೆ ಜನ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ವಿಷ ಕುಡಿದಿದ್ದ ವ್ಯಕ್ತಿಯನ್ನು ಚಿಕಿತ್ಸೆಗೆ ಜನ ಕರೆದುಕೊಂಡು ಬಂದಿದ್ದರು. ಈ ವೇಳೆ ಆಸ್ಪತ್ರೆ ಸಿಬ್ಬಂದಿ ಪರಿಸ್ಥಿತಿ ಗಂಭೀರ ಇದೆ ಬೇರೆ ಆಸ್ಪತ್ರೆಗೆ ಹೋಗುವಂತೆ ಶಿಫಾರಸ್ಸು ಮಾಡಿದ್ದರು. ಈ ಹಿನ್ನೆಲೆ ಆಸ್ಪತ್ರೆಯಿಂದ ಸ್ವಲ್ಪ ದೂರ ಹೋಗುತ್ತಿದ್ದಂತೆ ರೋಗಿ ಸಾವನ್ನಪ್ಪಿದ್ದಾನೆ. ಹೀಗಾಗಿ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ್ದು, ಆಸ್ಪತ್ರೆಯ ಪೀಠೋಪಕರಣ ಧ್ವಂಸ ಮಾಡಲಾಗಿದೆ. ತಂಬ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!