AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಡಿಗೆ ತಾಯ್ತನದ ಹೆಸರಿನಲ್ಲಿ ಯಾರದ್ದೋ ಮಕ್ಕಳನ್ನ ನೀಡಿ ವಂಚನೆ; ಆರೋಪಿ ಅಂದರ್

ಮಕ್ಕಳಿಲ್ಲದ ದಂಪತಿಗೆ ಬಾಡಿಗೆ ತಾಯ್ತನದ ಹೆಸರಿನಲ್ಲಿ ಭರವಸೆ ನೀಡುತ್ತಿದ್ದ ಭಾನುಮತಿ, ಕದ್ದು ತಂದಿರುವ ಯಾರದ್ದೋ ಮಕ್ಕಳನ್ನ ನಿಮ್ಮದೇ ಮಗು ಎಂದು ನೀಡಿ ಹಣ ಪಡೆಯುತ್ತಿದ್ದಳು. ಸದ್ಯ ಆರೋಪಿ ಬಸವನಗುಡಿ‌ ಮಹಿಳಾ ಠಾಣಾ ಪೊಲೀಸರ ವಶದಲ್ಲಿದ್ದಾಳೆ. 

ಬಾಡಿಗೆ ತಾಯ್ತನದ ಹೆಸರಿನಲ್ಲಿ ಯಾರದ್ದೋ ಮಕ್ಕಳನ್ನ ನೀಡಿ ವಂಚನೆ; ಆರೋಪಿ ಅಂದರ್
ಬಂಧಿತ ಆರೋಪಿ ಭಾನುಮತಿ
TV9 Web
| Edited By: |

Updated on: Apr 23, 2022 | 9:07 PM

Share

ಬೆಂಗಳೂರು: ಬಾಡಿಗೆ ತಾಯ್ತನದ (Motherhood) ಹೆಸರಿನಲ್ಲಿ ಯಾರದ್ದೋ ಮಕ್ಕಳನ್ನ ನೀಡಿ ವಂಚಿಸಿದ ಆರೋಪಿಯನ್ನು ದಕ್ಷಿಣ ವಿಭಾಗದ ಮಾನವ ಕಳ್ಳಸಾಗಣಿಕೆ ನಿಗ್ರಹ ದಳದಿಂದ ಬಂಧನ ಮಾಡಲಾಗಿದೆ. ತಲೆಮರೆಸಿಕೊಂಡಿದ್ದ ಭಾನುಮತಿ ಬಂಧಿತ ಆರೋಪಿ. ಮಕ್ಕಳ ಕಳ್ಳತನ ಪ್ರಕರಣದ ಆರೋಪಿಗಳ ಜೊತೆ ಸಂಪರ್ಕ ಹೊಂದಿದ್ದಳು. ಪೋಷಕರನ್ನ ಪುಸಲಾಯಿಸಿ, ಕದ್ದು ಮಕ್ಕಳನ್ನ ತಂದು ಇತರೆ ಆರೋಪಿಗಳು ಭಾನುಮತಿಗೆ ನೀಡುತ್ತಿದ್ದರು. ಮಕ್ಕಳಿಲ್ಲದ ದಂಪತಿಗೆ ಬಾಡಿಗೆ ತಾಯ್ತನದ ಹೆಸರಿನಲ್ಲಿ ಭರವಸೆ ನೀಡುತ್ತಿದ್ದ ಭಾನುಮತಿ, ಕದ್ದು ತಂದಿರುವ ಯಾರದ್ದೋ ಮಕ್ಕಳನ್ನ ನಿಮ್ಮದೇ ಮಗು ಎಂದು ನೀಡಿ ಹಣ ಪಡೆಯುತ್ತಿದ್ದಳು. ಸದ್ಯ ಆರೋಪಿ ಬಸವನಗುಡಿ‌ ಮಹಿಳಾ ಠಾಣಾ ಪೊಲೀಸರ ವಶದಲ್ಲಿದ್ದಾಳೆ.

ನಕಲಿ ದಾಖಲೆ ಸೃಷ್ಟಿಸಿ ಜೈಲಿನಲ್ಲಿದ್ದವರಿಗೆ ಜಾಮೀನು ನೀಡುತ್ತಿದ್ದವರ ಬಂಧನ

ನಕಲಿ ದಾಖಲೆ ಸೃಷ್ಟಿ ಮಾಡಿ, ಜೈಲಿನಲ್ಲಿರುವ ಆರೋಪಿಗಳಿಗೆ ಜಾಮೀನು ಕೊಡುತ್ತಿದ್ದ ಗ್ಯಾಂಗ್​ನ್ನು ಕೆ.ಆರ್​.ಮಾರ್ಕೆಟ್​ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಭೇದಿಸಿದ ಪೊಲೀಸರು ಪುಟ್ಟಸ್ವಾಮಿ, ನಸ್ರೀನ್, ರಾಜಣ್ಣ, ಮಂಜುನಾಥ್, ಆಂಜಿನಪ್ಪ, ಕುಮಾರ್, ಚಂದ್ರಗೌಡ, ಸೊಣ್ಣೆಗೌಡ ಮತ್ತು ಟಿ.ಎಂ. ರಾಜಪ್ಪ ಎಂಬ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಜೈಲಿನಲ್ಲಿರುವ ಯಾವುದೇ ಆರೋಪಿಗೆ ಬೇಕಾದರೂ ಇವರು ಜಾಮೀನು ಕೊಡಿಸಲು ಸಿದ್ಧರಿರುತ್ತಿದ್ದರು. ಅದಕ್ಕಾಗಿ ನಕಲಿ ದಾಖಲೆ ಸೃಷ್ಟಿಸಿ, ನ್ಯಾಯಾಲಯಕ್ಕೆ ಸಲ್ಲಿಸುತ್ತಿದ್ದರು. ರೈತರ ಹೆಸರಿನಲ್ಲಿ ಇರುವ ಆಸ್ತಿಗಳ ದಾಖಲೆಗಳನ್ನು ಎಚ್ಚರಿಕೆಯಿಂದ ಸಂಗ್ರಹಿಸುವ ಜತೆ, ಪ್ರತಿಷ್ಠಿತ ಕಂಪನಿಗಳ ಹೆಸರಲ್ಲೂ ನಕಲಿ ದಾಖಲೆ ಸೃಷ್ಟಿಸುತ್ತಿದ್ದರು.

ಎಲ್ಲ ನಕಲಿ ದಾಖಲೆಗಳನ್ನೂ ನಾಜೂಕಾಗಿ ತಯಾರಿಸಿ, ಆರೋಪಿಗಳನ್ನು ಜೈಲಿನಿಂದ ಕರೆದುಕೊಂಡು ಬಂದ ಬಳಿಕ, ಅವರಿಂದ ಇಂತಿಷ್ಟು ಎಂದು ಹಣ ಪಡೆಯುತ್ತಿದ್ದರು. 9 ಮಂದಿಯನ್ನು ಬಂಧಿಸಿರುವ ಪೊಲೀಸರು ಅವರಿಂದ ನಾಲ್ಕು ಸರ್ಕಾರಿ ಸೀಲುಗಳು, ನಕಲಿ ಆಧಾರ್​, ಪಹಣಿ, ಸಲ್ವೆನ್ಸಿ ಸರ್ಟಿಫಿಕೇಟ್​​ಗಳನ್ನೂ ವಶಪಡಿಸಿಕೊಂಡಿದ್ದಾರೆ. ಹಲವು ಕಂಪನಿಗಳಿಗೆ ಸೇರಿದ 100ಕ್ಕೂ ಹೆಚ್ಚು ಪಹಣಿಗಳು ಈ ಆರೋಪಿಗಳ ಬಳಿ ಇದ್ದವು. ಇವರು ಚಿಕ್ಕಬಳ್ಳಾಪುರದ ಹರಿ ಗ್ರಾಫಿಕ್ಸ್​ ಅಂಗಡಿಯಲ್ಲಿ ನಕಲಿ ದಾಖಲೆಗಳ ತಯಾರು ಮಾಡುತ್ತಿದ್ದರು. ಈ ಬಗ್ಗೆ ಕೆ.ಆರ್.ಮಾರ್ಕೆಟ್ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ; ಹಾವೇರಿಯಲ್ಲಿ ಆಯೋಜಿಸಲು ಸರ್ಕಾರ ನಿರ್ಧಾರ

ನಮ್ಮ ಮುಸ್ಲಿಂ ಹೆಣ್ಣುಮಕ್ಕಳು ಓದಿ, ಸ್ವಾವಲಂಬಿಗಳಾಗಿ, ಗೌರವಾನ್ವಿತ ಬದುಕು ನಡೆಸಬೇಕು: ಶೋಭಾ ಕರಂದ್ಲಾಜೆ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!